Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...