Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....