Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...