Homeಮುಖಪುಟಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; "ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ"

ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ಮೈಸೂರಿನ ಮಹಾಜನ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು- ಸಂದೀಪ್ ಈಶಾನ್ಯ

- Advertisement -
- Advertisement -

ಪ್ರಗತಿಪರ ಆಲೋಚನೆಗಳುಳ್ಳ ಗೆಳಯರು ಒಟ್ಟುಗೂಡಿ ‘ಜಾತಿ-ಮತ’ದ ಹಂಗಿಲ್ಲದೇ ವಿವಾಹವಾಗಲು ಬಯಸುವ ವಧು-ವರರಿಗೆ ಹೊಸ ‘ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ’ ಎಂಬ ವೇದಿಕೆಯೊಂದನ್ನು ಆರಂಭಿಸಿದ್ದಾರೆ.

ವಿವಾಹಕ್ಕೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ವಿಶೇ‍ಷ ಮಹತ್ವವಿದೆ. ಆದರೆ ಅದಕ್ಕೆ ಹಲವು ಕಟ್ಟುಕಟ್ಟಳೆಗಳೆಂಬ ಗೊಡ್ಡು ಸಂಪ್ರದಾಯದ ಸೋಂಕೂ ತಗುಲಿದೆ. ಜಾತಿ-ಮತವನ್ನು ಮೀರಿ ಎರಡು ಸಮಾನ ಮನಸ್ಸುಗಳು ವಿವಾಹವಾಗುವುದಕ್ಕೆ ನಮ್ಮಲ್ಲಿ ಇಂದಿನ ಪರಿಸ್ಥಿತಿಯಲ್ಲಿಯೂ ಅನೇಕ ಸವಾಲುಗಳನ್ನು ಎದುರಿಸಬೇಕಿದೆ.

ಹಾಗಾಗಿಯೇ ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳ ಸಂಖ್ಯೆ ತಿರಾ ವಿರಳ. ಆದಾಗ್ಯೂ ಕೆಲವರು ಇದರಿಂದ ಹೊರಬಂದು ವಿವಾಹವಾಗುತ್ತಿದ್ದಾರೆ. ಆದರೆ ಅದೂ ಕೂಡ ಪ್ರೇಮವಿವಾಹವಾಗುವವರ ಸ್ವಯಿಚ್ಚೆಯಿಂದ ಮಾತ್ರ ಆಗುತ್ತಿದೆ. ಪೋಷಕರೇ ಸ್ವಯಂ ನಿರ್ಧಾರ ತೆಗೆದುಕೊಂಡು ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳನ್ನು ಮಾಡುವುದಕ್ಕೆ ಇಂದಿಗೂ ಮುಕ್ತರಾಗಿಲ್ಲ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಈ ಸಂದರ್ಭದಲ್ಲಿ, ಮೈಸೂರಿನ ಗೆಳಯರು ಕೈಗೊಂಡಿರುವ “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ” ಪ್ರಯತ್ನ ಅತ್ಯಂತ ಮಹತ್ವಪೂರ್ಣವೆನಿಸುತ್ತದೆ. ಯಾವುದೇ ಹಂಗಿಲ್ಲದೇ ಒಂದಾಗುವ ಮನಸ್ಸುಗಳಿಗೆ ವೇದಿಕೆಯೊಂದನ್ನು ಕಲ್ಪಿಸಿಕೊಡುವ ಕೆಲಸಕ್ಕೆ ಈಗಾಗಲೇ ಹಲವರಿಂದ ಮೆಚ್ಚುಗೆ ಸಿಕ್ಕಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯೆ ನೀಡಿದ ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಕಾರ್ಯದರ್ಶಿಯಾದ ಸಂದೀಪ್ ಈಶಾನ್ಯ, “ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು. ನಮಗೆ ಶಿಕ್ಷಕರಾಗಿದ್ದ ಕ್ರಾಂತಿರಾಜ್‌ ಒಡೆಯರ್‌ ಕೂಡ ನಮ್ಮ ಆಲೋಚನೆಗಳಿಗೆ ಕೈ ಜೋಡಿಸಿದ್ದರು. ಆದರೆ, ಕಾಲೇಜು ಮುಗಿಯುತ್ತಿದ್ದಂತೆ ಚರ್ಚೆಯಲ್ಲಿ ಭಾಗವಹಿಸಿದ್ದ ಗೆಳೆಯರು ಹೆಚ್ಚಿನ ಓದು ಮತ್ತು ಉದ್ಯೋಗದ ಕಾರಣಕ್ಕೆ ವಲಸೆ ಹೊಗಿದ್ದರು. ಸದ್ಯ ಎಲ್ಲರೂ ಮೈಸೂರಿಗೆ ಮರಳಿದ್ದೇವೆ. ಕ್ರಾಂತಿರಾಜ್‌ ಒಡೆಯರ್‌ ಸೇರಿದಂತೆ ನಾವು ಎಲ್ಲಾ ಗೆಳೆಯರು ಮತ್ತೊಮ್ಮೆ ಚರ್ಚಿಸಿ ನಮ್ಮ ಹಳೆಯ ಕನಸಿಗೆ ಮರು ಚಾಲನೆ ನೀಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

“ಮೈಸೂರು ಮಹಾಜನ ಕಾಲೇಜಿನ ಹಳೆಯ ಗೆಳಯರು ಸೇರಿ, ಮನುಷ್ಯವಿರೋಧಿ ಬೇಲಿಗಳಿಂದ ಹೊರಗೆ ನಿಂತು ಜೀವನದೃಷ್ಟಿಗೆ ಹೊಂದುವ ಸಂಗಾತಿಯನ್ನು ಅಯ್ಕೆಮಾಡಿಕೊಳ್ಳುವ ವೇದಿಕೆ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಈ ಮ್ಯಾಟ್ರಿಮೋನಿಯನ್ನು ಆರಂಭಿಸಿದ್ದೇವೆ” ಎಂದು ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಮುಖ್ಯ ಸಲಹೆಗಾರರಾದ ಕ್ರಾಂತಿರಾಜ್ ಒಡೆಯರ್ ಹೇಳಿದರು.

ಬೇರೆ ಜಾತಿಯ ಹುಡುಗ/ಹುಡುಗಿಯನ್ನು ಪ್ರೇಮಿಸಿದ್ದಕ್ಕೆ ಕೊಲ್ಲುತ್ತಿರುವ ಇಂದಿನ ಸಮಾಜದಲ್ಲಿ ಇಂತಹ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿರುವುದು ಸಮಾಧಾನಕರ ವಿಷಯವಾಗಿದೆ.

ಇದರ ಕುರಿತು ಹೆಚ್ಚಿನ ಮಾಹಿತಿಗೆ ಮತ್ತು ಈ ಮ್ಯಾಟ್ರಿಮೋನಿಗೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...