Homeಮುಖಪುಟಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; "ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ"

ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ಮೈಸೂರಿನ ಮಹಾಜನ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು- ಸಂದೀಪ್ ಈಶಾನ್ಯ

- Advertisement -
- Advertisement -

ಪ್ರಗತಿಪರ ಆಲೋಚನೆಗಳುಳ್ಳ ಗೆಳಯರು ಒಟ್ಟುಗೂಡಿ ‘ಜಾತಿ-ಮತ’ದ ಹಂಗಿಲ್ಲದೇ ವಿವಾಹವಾಗಲು ಬಯಸುವ ವಧು-ವರರಿಗೆ ಹೊಸ ‘ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ’ ಎಂಬ ವೇದಿಕೆಯೊಂದನ್ನು ಆರಂಭಿಸಿದ್ದಾರೆ.

ವಿವಾಹಕ್ಕೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ವಿಶೇ‍ಷ ಮಹತ್ವವಿದೆ. ಆದರೆ ಅದಕ್ಕೆ ಹಲವು ಕಟ್ಟುಕಟ್ಟಳೆಗಳೆಂಬ ಗೊಡ್ಡು ಸಂಪ್ರದಾಯದ ಸೋಂಕೂ ತಗುಲಿದೆ. ಜಾತಿ-ಮತವನ್ನು ಮೀರಿ ಎರಡು ಸಮಾನ ಮನಸ್ಸುಗಳು ವಿವಾಹವಾಗುವುದಕ್ಕೆ ನಮ್ಮಲ್ಲಿ ಇಂದಿನ ಪರಿಸ್ಥಿತಿಯಲ್ಲಿಯೂ ಅನೇಕ ಸವಾಲುಗಳನ್ನು ಎದುರಿಸಬೇಕಿದೆ.

ಹಾಗಾಗಿಯೇ ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳ ಸಂಖ್ಯೆ ತಿರಾ ವಿರಳ. ಆದಾಗ್ಯೂ ಕೆಲವರು ಇದರಿಂದ ಹೊರಬಂದು ವಿವಾಹವಾಗುತ್ತಿದ್ದಾರೆ. ಆದರೆ ಅದೂ ಕೂಡ ಪ್ರೇಮವಿವಾಹವಾಗುವವರ ಸ್ವಯಿಚ್ಚೆಯಿಂದ ಮಾತ್ರ ಆಗುತ್ತಿದೆ. ಪೋಷಕರೇ ಸ್ವಯಂ ನಿರ್ಧಾರ ತೆಗೆದುಕೊಂಡು ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳನ್ನು ಮಾಡುವುದಕ್ಕೆ ಇಂದಿಗೂ ಮುಕ್ತರಾಗಿಲ್ಲ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಈ ಸಂದರ್ಭದಲ್ಲಿ, ಮೈಸೂರಿನ ಗೆಳಯರು ಕೈಗೊಂಡಿರುವ “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ” ಪ್ರಯತ್ನ ಅತ್ಯಂತ ಮಹತ್ವಪೂರ್ಣವೆನಿಸುತ್ತದೆ. ಯಾವುದೇ ಹಂಗಿಲ್ಲದೇ ಒಂದಾಗುವ ಮನಸ್ಸುಗಳಿಗೆ ವೇದಿಕೆಯೊಂದನ್ನು ಕಲ್ಪಿಸಿಕೊಡುವ ಕೆಲಸಕ್ಕೆ ಈಗಾಗಲೇ ಹಲವರಿಂದ ಮೆಚ್ಚುಗೆ ಸಿಕ್ಕಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯೆ ನೀಡಿದ ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಕಾರ್ಯದರ್ಶಿಯಾದ ಸಂದೀಪ್ ಈಶಾನ್ಯ, “ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು. ನಮಗೆ ಶಿಕ್ಷಕರಾಗಿದ್ದ ಕ್ರಾಂತಿರಾಜ್‌ ಒಡೆಯರ್‌ ಕೂಡ ನಮ್ಮ ಆಲೋಚನೆಗಳಿಗೆ ಕೈ ಜೋಡಿಸಿದ್ದರು. ಆದರೆ, ಕಾಲೇಜು ಮುಗಿಯುತ್ತಿದ್ದಂತೆ ಚರ್ಚೆಯಲ್ಲಿ ಭಾಗವಹಿಸಿದ್ದ ಗೆಳೆಯರು ಹೆಚ್ಚಿನ ಓದು ಮತ್ತು ಉದ್ಯೋಗದ ಕಾರಣಕ್ಕೆ ವಲಸೆ ಹೊಗಿದ್ದರು. ಸದ್ಯ ಎಲ್ಲರೂ ಮೈಸೂರಿಗೆ ಮರಳಿದ್ದೇವೆ. ಕ್ರಾಂತಿರಾಜ್‌ ಒಡೆಯರ್‌ ಸೇರಿದಂತೆ ನಾವು ಎಲ್ಲಾ ಗೆಳೆಯರು ಮತ್ತೊಮ್ಮೆ ಚರ್ಚಿಸಿ ನಮ್ಮ ಹಳೆಯ ಕನಸಿಗೆ ಮರು ಚಾಲನೆ ನೀಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

“ಮೈಸೂರು ಮಹಾಜನ ಕಾಲೇಜಿನ ಹಳೆಯ ಗೆಳಯರು ಸೇರಿ, ಮನುಷ್ಯವಿರೋಧಿ ಬೇಲಿಗಳಿಂದ ಹೊರಗೆ ನಿಂತು ಜೀವನದೃಷ್ಟಿಗೆ ಹೊಂದುವ ಸಂಗಾತಿಯನ್ನು ಅಯ್ಕೆಮಾಡಿಕೊಳ್ಳುವ ವೇದಿಕೆ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಈ ಮ್ಯಾಟ್ರಿಮೋನಿಯನ್ನು ಆರಂಭಿಸಿದ್ದೇವೆ” ಎಂದು ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಮುಖ್ಯ ಸಲಹೆಗಾರರಾದ ಕ್ರಾಂತಿರಾಜ್ ಒಡೆಯರ್ ಹೇಳಿದರು.

ಬೇರೆ ಜಾತಿಯ ಹುಡುಗ/ಹುಡುಗಿಯನ್ನು ಪ್ರೇಮಿಸಿದ್ದಕ್ಕೆ ಕೊಲ್ಲುತ್ತಿರುವ ಇಂದಿನ ಸಮಾಜದಲ್ಲಿ ಇಂತಹ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿರುವುದು ಸಮಾಧಾನಕರ ವಿಷಯವಾಗಿದೆ.

ಇದರ ಕುರಿತು ಹೆಚ್ಚಿನ ಮಾಹಿತಿಗೆ ಮತ್ತು ಈ ಮ್ಯಾಟ್ರಿಮೋನಿಗೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...