Homeಮುಖಪುಟಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; "ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ"

ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ಮೈಸೂರಿನ ಮಹಾಜನ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು- ಸಂದೀಪ್ ಈಶಾನ್ಯ

- Advertisement -
- Advertisement -

ಪ್ರಗತಿಪರ ಆಲೋಚನೆಗಳುಳ್ಳ ಗೆಳಯರು ಒಟ್ಟುಗೂಡಿ ‘ಜಾತಿ-ಮತ’ದ ಹಂಗಿಲ್ಲದೇ ವಿವಾಹವಾಗಲು ಬಯಸುವ ವಧು-ವರರಿಗೆ ಹೊಸ ‘ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ’ ಎಂಬ ವೇದಿಕೆಯೊಂದನ್ನು ಆರಂಭಿಸಿದ್ದಾರೆ.

ವಿವಾಹಕ್ಕೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ವಿಶೇ‍ಷ ಮಹತ್ವವಿದೆ. ಆದರೆ ಅದಕ್ಕೆ ಹಲವು ಕಟ್ಟುಕಟ್ಟಳೆಗಳೆಂಬ ಗೊಡ್ಡು ಸಂಪ್ರದಾಯದ ಸೋಂಕೂ ತಗುಲಿದೆ. ಜಾತಿ-ಮತವನ್ನು ಮೀರಿ ಎರಡು ಸಮಾನ ಮನಸ್ಸುಗಳು ವಿವಾಹವಾಗುವುದಕ್ಕೆ ನಮ್ಮಲ್ಲಿ ಇಂದಿನ ಪರಿಸ್ಥಿತಿಯಲ್ಲಿಯೂ ಅನೇಕ ಸವಾಲುಗಳನ್ನು ಎದುರಿಸಬೇಕಿದೆ.

ಹಾಗಾಗಿಯೇ ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳ ಸಂಖ್ಯೆ ತಿರಾ ವಿರಳ. ಆದಾಗ್ಯೂ ಕೆಲವರು ಇದರಿಂದ ಹೊರಬಂದು ವಿವಾಹವಾಗುತ್ತಿದ್ದಾರೆ. ಆದರೆ ಅದೂ ಕೂಡ ಪ್ರೇಮವಿವಾಹವಾಗುವವರ ಸ್ವಯಿಚ್ಚೆಯಿಂದ ಮಾತ್ರ ಆಗುತ್ತಿದೆ. ಪೋಷಕರೇ ಸ್ವಯಂ ನಿರ್ಧಾರ ತೆಗೆದುಕೊಂಡು ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳನ್ನು ಮಾಡುವುದಕ್ಕೆ ಇಂದಿಗೂ ಮುಕ್ತರಾಗಿಲ್ಲ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಈ ಸಂದರ್ಭದಲ್ಲಿ, ಮೈಸೂರಿನ ಗೆಳಯರು ಕೈಗೊಂಡಿರುವ “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ” ಪ್ರಯತ್ನ ಅತ್ಯಂತ ಮಹತ್ವಪೂರ್ಣವೆನಿಸುತ್ತದೆ. ಯಾವುದೇ ಹಂಗಿಲ್ಲದೇ ಒಂದಾಗುವ ಮನಸ್ಸುಗಳಿಗೆ ವೇದಿಕೆಯೊಂದನ್ನು ಕಲ್ಪಿಸಿಕೊಡುವ ಕೆಲಸಕ್ಕೆ ಈಗಾಗಲೇ ಹಲವರಿಂದ ಮೆಚ್ಚುಗೆ ಸಿಕ್ಕಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯೆ ನೀಡಿದ ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಕಾರ್ಯದರ್ಶಿಯಾದ ಸಂದೀಪ್ ಈಶಾನ್ಯ, “ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು. ನಮಗೆ ಶಿಕ್ಷಕರಾಗಿದ್ದ ಕ್ರಾಂತಿರಾಜ್‌ ಒಡೆಯರ್‌ ಕೂಡ ನಮ್ಮ ಆಲೋಚನೆಗಳಿಗೆ ಕೈ ಜೋಡಿಸಿದ್ದರು. ಆದರೆ, ಕಾಲೇಜು ಮುಗಿಯುತ್ತಿದ್ದಂತೆ ಚರ್ಚೆಯಲ್ಲಿ ಭಾಗವಹಿಸಿದ್ದ ಗೆಳೆಯರು ಹೆಚ್ಚಿನ ಓದು ಮತ್ತು ಉದ್ಯೋಗದ ಕಾರಣಕ್ಕೆ ವಲಸೆ ಹೊಗಿದ್ದರು. ಸದ್ಯ ಎಲ್ಲರೂ ಮೈಸೂರಿಗೆ ಮರಳಿದ್ದೇವೆ. ಕ್ರಾಂತಿರಾಜ್‌ ಒಡೆಯರ್‌ ಸೇರಿದಂತೆ ನಾವು ಎಲ್ಲಾ ಗೆಳೆಯರು ಮತ್ತೊಮ್ಮೆ ಚರ್ಚಿಸಿ ನಮ್ಮ ಹಳೆಯ ಕನಸಿಗೆ ಮರು ಚಾಲನೆ ನೀಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

“ಮೈಸೂರು ಮಹಾಜನ ಕಾಲೇಜಿನ ಹಳೆಯ ಗೆಳಯರು ಸೇರಿ, ಮನುಷ್ಯವಿರೋಧಿ ಬೇಲಿಗಳಿಂದ ಹೊರಗೆ ನಿಂತು ಜೀವನದೃಷ್ಟಿಗೆ ಹೊಂದುವ ಸಂಗಾತಿಯನ್ನು ಅಯ್ಕೆಮಾಡಿಕೊಳ್ಳುವ ವೇದಿಕೆ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಈ ಮ್ಯಾಟ್ರಿಮೋನಿಯನ್ನು ಆರಂಭಿಸಿದ್ದೇವೆ” ಎಂದು ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಮುಖ್ಯ ಸಲಹೆಗಾರರಾದ ಕ್ರಾಂತಿರಾಜ್ ಒಡೆಯರ್ ಹೇಳಿದರು.

ಬೇರೆ ಜಾತಿಯ ಹುಡುಗ/ಹುಡುಗಿಯನ್ನು ಪ್ರೇಮಿಸಿದ್ದಕ್ಕೆ ಕೊಲ್ಲುತ್ತಿರುವ ಇಂದಿನ ಸಮಾಜದಲ್ಲಿ ಇಂತಹ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿರುವುದು ಸಮಾಧಾನಕರ ವಿಷಯವಾಗಿದೆ.

ಇದರ ಕುರಿತು ಹೆಚ್ಚಿನ ಮಾಹಿತಿಗೆ ಮತ್ತು ಈ ಮ್ಯಾಟ್ರಿಮೋನಿಗೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...