Homeಮುಖಪುಟಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; "ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ"

ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ಮೈಸೂರಿನ ಮಹಾಜನ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು- ಸಂದೀಪ್ ಈಶಾನ್ಯ

- Advertisement -
- Advertisement -

ಪ್ರಗತಿಪರ ಆಲೋಚನೆಗಳುಳ್ಳ ಗೆಳಯರು ಒಟ್ಟುಗೂಡಿ ‘ಜಾತಿ-ಮತ’ದ ಹಂಗಿಲ್ಲದೇ ವಿವಾಹವಾಗಲು ಬಯಸುವ ವಧು-ವರರಿಗೆ ಹೊಸ ‘ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ’ ಎಂಬ ವೇದಿಕೆಯೊಂದನ್ನು ಆರಂಭಿಸಿದ್ದಾರೆ.

ವಿವಾಹಕ್ಕೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ವಿಶೇ‍ಷ ಮಹತ್ವವಿದೆ. ಆದರೆ ಅದಕ್ಕೆ ಹಲವು ಕಟ್ಟುಕಟ್ಟಳೆಗಳೆಂಬ ಗೊಡ್ಡು ಸಂಪ್ರದಾಯದ ಸೋಂಕೂ ತಗುಲಿದೆ. ಜಾತಿ-ಮತವನ್ನು ಮೀರಿ ಎರಡು ಸಮಾನ ಮನಸ್ಸುಗಳು ವಿವಾಹವಾಗುವುದಕ್ಕೆ ನಮ್ಮಲ್ಲಿ ಇಂದಿನ ಪರಿಸ್ಥಿತಿಯಲ್ಲಿಯೂ ಅನೇಕ ಸವಾಲುಗಳನ್ನು ಎದುರಿಸಬೇಕಿದೆ.

ಹಾಗಾಗಿಯೇ ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳ ಸಂಖ್ಯೆ ತಿರಾ ವಿರಳ. ಆದಾಗ್ಯೂ ಕೆಲವರು ಇದರಿಂದ ಹೊರಬಂದು ವಿವಾಹವಾಗುತ್ತಿದ್ದಾರೆ. ಆದರೆ ಅದೂ ಕೂಡ ಪ್ರೇಮವಿವಾಹವಾಗುವವರ ಸ್ವಯಿಚ್ಚೆಯಿಂದ ಮಾತ್ರ ಆಗುತ್ತಿದೆ. ಪೋಷಕರೇ ಸ್ವಯಂ ನಿರ್ಧಾರ ತೆಗೆದುಕೊಂಡು ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳನ್ನು ಮಾಡುವುದಕ್ಕೆ ಇಂದಿಗೂ ಮುಕ್ತರಾಗಿಲ್ಲ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಈ ಸಂದರ್ಭದಲ್ಲಿ, ಮೈಸೂರಿನ ಗೆಳಯರು ಕೈಗೊಂಡಿರುವ “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ” ಪ್ರಯತ್ನ ಅತ್ಯಂತ ಮಹತ್ವಪೂರ್ಣವೆನಿಸುತ್ತದೆ. ಯಾವುದೇ ಹಂಗಿಲ್ಲದೇ ಒಂದಾಗುವ ಮನಸ್ಸುಗಳಿಗೆ ವೇದಿಕೆಯೊಂದನ್ನು ಕಲ್ಪಿಸಿಕೊಡುವ ಕೆಲಸಕ್ಕೆ ಈಗಾಗಲೇ ಹಲವರಿಂದ ಮೆಚ್ಚುಗೆ ಸಿಕ್ಕಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯೆ ನೀಡಿದ ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಕಾರ್ಯದರ್ಶಿಯಾದ ಸಂದೀಪ್ ಈಶಾನ್ಯ, “ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು. ನಮಗೆ ಶಿಕ್ಷಕರಾಗಿದ್ದ ಕ್ರಾಂತಿರಾಜ್‌ ಒಡೆಯರ್‌ ಕೂಡ ನಮ್ಮ ಆಲೋಚನೆಗಳಿಗೆ ಕೈ ಜೋಡಿಸಿದ್ದರು. ಆದರೆ, ಕಾಲೇಜು ಮುಗಿಯುತ್ತಿದ್ದಂತೆ ಚರ್ಚೆಯಲ್ಲಿ ಭಾಗವಹಿಸಿದ್ದ ಗೆಳೆಯರು ಹೆಚ್ಚಿನ ಓದು ಮತ್ತು ಉದ್ಯೋಗದ ಕಾರಣಕ್ಕೆ ವಲಸೆ ಹೊಗಿದ್ದರು. ಸದ್ಯ ಎಲ್ಲರೂ ಮೈಸೂರಿಗೆ ಮರಳಿದ್ದೇವೆ. ಕ್ರಾಂತಿರಾಜ್‌ ಒಡೆಯರ್‌ ಸೇರಿದಂತೆ ನಾವು ಎಲ್ಲಾ ಗೆಳೆಯರು ಮತ್ತೊಮ್ಮೆ ಚರ್ಚಿಸಿ ನಮ್ಮ ಹಳೆಯ ಕನಸಿಗೆ ಮರು ಚಾಲನೆ ನೀಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

“ಮೈಸೂರು ಮಹಾಜನ ಕಾಲೇಜಿನ ಹಳೆಯ ಗೆಳಯರು ಸೇರಿ, ಮನುಷ್ಯವಿರೋಧಿ ಬೇಲಿಗಳಿಂದ ಹೊರಗೆ ನಿಂತು ಜೀವನದೃಷ್ಟಿಗೆ ಹೊಂದುವ ಸಂಗಾತಿಯನ್ನು ಅಯ್ಕೆಮಾಡಿಕೊಳ್ಳುವ ವೇದಿಕೆ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಈ ಮ್ಯಾಟ್ರಿಮೋನಿಯನ್ನು ಆರಂಭಿಸಿದ್ದೇವೆ” ಎಂದು ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಮುಖ್ಯ ಸಲಹೆಗಾರರಾದ ಕ್ರಾಂತಿರಾಜ್ ಒಡೆಯರ್ ಹೇಳಿದರು.

ಬೇರೆ ಜಾತಿಯ ಹುಡುಗ/ಹುಡುಗಿಯನ್ನು ಪ್ರೇಮಿಸಿದ್ದಕ್ಕೆ ಕೊಲ್ಲುತ್ತಿರುವ ಇಂದಿನ ಸಮಾಜದಲ್ಲಿ ಇಂತಹ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿರುವುದು ಸಮಾಧಾನಕರ ವಿಷಯವಾಗಿದೆ.

ಇದರ ಕುರಿತು ಹೆಚ್ಚಿನ ಮಾಹಿತಿಗೆ ಮತ್ತು ಈ ಮ್ಯಾಟ್ರಿಮೋನಿಗೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....