Homeಮುಖಪುಟಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; "ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ"

ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ಮೈಸೂರಿನ ಮಹಾಜನ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು- ಸಂದೀಪ್ ಈಶಾನ್ಯ

- Advertisement -
- Advertisement -

ಪ್ರಗತಿಪರ ಆಲೋಚನೆಗಳುಳ್ಳ ಗೆಳಯರು ಒಟ್ಟುಗೂಡಿ ‘ಜಾತಿ-ಮತ’ದ ಹಂಗಿಲ್ಲದೇ ವಿವಾಹವಾಗಲು ಬಯಸುವ ವಧು-ವರರಿಗೆ ಹೊಸ ‘ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ’ ಎಂಬ ವೇದಿಕೆಯೊಂದನ್ನು ಆರಂಭಿಸಿದ್ದಾರೆ.

ವಿವಾಹಕ್ಕೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ವಿಶೇ‍ಷ ಮಹತ್ವವಿದೆ. ಆದರೆ ಅದಕ್ಕೆ ಹಲವು ಕಟ್ಟುಕಟ್ಟಳೆಗಳೆಂಬ ಗೊಡ್ಡು ಸಂಪ್ರದಾಯದ ಸೋಂಕೂ ತಗುಲಿದೆ. ಜಾತಿ-ಮತವನ್ನು ಮೀರಿ ಎರಡು ಸಮಾನ ಮನಸ್ಸುಗಳು ವಿವಾಹವಾಗುವುದಕ್ಕೆ ನಮ್ಮಲ್ಲಿ ಇಂದಿನ ಪರಿಸ್ಥಿತಿಯಲ್ಲಿಯೂ ಅನೇಕ ಸವಾಲುಗಳನ್ನು ಎದುರಿಸಬೇಕಿದೆ.

ಹಾಗಾಗಿಯೇ ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳ ಸಂಖ್ಯೆ ತಿರಾ ವಿರಳ. ಆದಾಗ್ಯೂ ಕೆಲವರು ಇದರಿಂದ ಹೊರಬಂದು ವಿವಾಹವಾಗುತ್ತಿದ್ದಾರೆ. ಆದರೆ ಅದೂ ಕೂಡ ಪ್ರೇಮವಿವಾಹವಾಗುವವರ ಸ್ವಯಿಚ್ಚೆಯಿಂದ ಮಾತ್ರ ಆಗುತ್ತಿದೆ. ಪೋಷಕರೇ ಸ್ವಯಂ ನಿರ್ಧಾರ ತೆಗೆದುಕೊಂಡು ಅಂತರ್ಜಾತಿ ಮತ್ತು ಅಂತರ್‌ಧರ್ಮದ ವಿವಾಹಗಳನ್ನು ಮಾಡುವುದಕ್ಕೆ ಇಂದಿಗೂ ಮುಕ್ತರಾಗಿಲ್ಲ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಈ ಸಂದರ್ಭದಲ್ಲಿ, ಮೈಸೂರಿನ ಗೆಳಯರು ಕೈಗೊಂಡಿರುವ “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ” ಪ್ರಯತ್ನ ಅತ್ಯಂತ ಮಹತ್ವಪೂರ್ಣವೆನಿಸುತ್ತದೆ. ಯಾವುದೇ ಹಂಗಿಲ್ಲದೇ ಒಂದಾಗುವ ಮನಸ್ಸುಗಳಿಗೆ ವೇದಿಕೆಯೊಂದನ್ನು ಕಲ್ಪಿಸಿಕೊಡುವ ಕೆಲಸಕ್ಕೆ ಈಗಾಗಲೇ ಹಲವರಿಂದ ಮೆಚ್ಚುಗೆ ಸಿಕ್ಕಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯೆ ನೀಡಿದ ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಕಾರ್ಯದರ್ಶಿಯಾದ ಸಂದೀಪ್ ಈಶಾನ್ಯ, “ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗ, ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಿಗೆ ಪರ್ಯಾಯವಾಗಿ, ಜಾತಿ-ಮತಗಳನ್ನು ಮೀರಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು. ನಮಗೆ ಶಿಕ್ಷಕರಾಗಿದ್ದ ಕ್ರಾಂತಿರಾಜ್‌ ಒಡೆಯರ್‌ ಕೂಡ ನಮ್ಮ ಆಲೋಚನೆಗಳಿಗೆ ಕೈ ಜೋಡಿಸಿದ್ದರು. ಆದರೆ, ಕಾಲೇಜು ಮುಗಿಯುತ್ತಿದ್ದಂತೆ ಚರ್ಚೆಯಲ್ಲಿ ಭಾಗವಹಿಸಿದ್ದ ಗೆಳೆಯರು ಹೆಚ್ಚಿನ ಓದು ಮತ್ತು ಉದ್ಯೋಗದ ಕಾರಣಕ್ಕೆ ವಲಸೆ ಹೊಗಿದ್ದರು. ಸದ್ಯ ಎಲ್ಲರೂ ಮೈಸೂರಿಗೆ ಮರಳಿದ್ದೇವೆ. ಕ್ರಾಂತಿರಾಜ್‌ ಒಡೆಯರ್‌ ಸೇರಿದಂತೆ ನಾವು ಎಲ್ಲಾ ಗೆಳೆಯರು ಮತ್ತೊಮ್ಮೆ ಚರ್ಚಿಸಿ ನಮ್ಮ ಹಳೆಯ ಕನಸಿಗೆ ಮರು ಚಾಲನೆ ನೀಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

“ಮೈಸೂರು ಮಹಾಜನ ಕಾಲೇಜಿನ ಹಳೆಯ ಗೆಳಯರು ಸೇರಿ, ಮನುಷ್ಯವಿರೋಧಿ ಬೇಲಿಗಳಿಂದ ಹೊರಗೆ ನಿಂತು ಜೀವನದೃಷ್ಟಿಗೆ ಹೊಂದುವ ಸಂಗಾತಿಯನ್ನು ಅಯ್ಕೆಮಾಡಿಕೊಳ್ಳುವ ವೇದಿಕೆ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಈ ಮ್ಯಾಟ್ರಿಮೋನಿಯನ್ನು ಆರಂಭಿಸಿದ್ದೇವೆ” ಎಂದು ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿಯ ಮುಖ್ಯ ಸಲಹೆಗಾರರಾದ ಕ್ರಾಂತಿರಾಜ್ ಒಡೆಯರ್ ಹೇಳಿದರು.

ಬೇರೆ ಜಾತಿಯ ಹುಡುಗ/ಹುಡುಗಿಯನ್ನು ಪ್ರೇಮಿಸಿದ್ದಕ್ಕೆ ಕೊಲ್ಲುತ್ತಿರುವ ಇಂದಿನ ಸಮಾಜದಲ್ಲಿ ಇಂತಹ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿರುವುದು ಸಮಾಧಾನಕರ ವಿಷಯವಾಗಿದೆ.

ಇದರ ಕುರಿತು ಹೆಚ್ಚಿನ ಮಾಹಿತಿಗೆ ಮತ್ತು ಈ ಮ್ಯಾಟ್ರಿಮೋನಿಗೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...