Homeಮುಖಪುಟಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

"ಅವರು ಇತಿಹಾಸದ ಪುಟಗಳಲ್ಲಿ, ದೇಶದಲ್ಲಿ ಯಾರೂ ಮುಟ್ಟಿಸಿಕೊಳ್ಳದ, ಊರ ಹೊರಗಿಟ್ಟ, ಬದುಕುವ ಎಲ್ಲ ಅವಕಾಶಗಳನ್ನೂ ನಿರಾಕರಿಸಿ ಅತ್ಯಂತ ಕೀಳು ದರ್ಜೆಗೆ ತಳ್ಳಲ್ಪಟ್ಟಂಥ ಜನಸಮುದಾಯಗಳು ಇದ್ದವು ಎಂದು ಓದಿಕೊಳ್ಳಬೇಕಾಗಿ ಬಂದಾಗ, ಆ ಸಮುದಾಯಗಳು ಯಾವವು ಎಂದರೆ ಏನು ಹೇಳುತ್ತೀರಿ?"

- Advertisement -
- Advertisement -

ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಶೂದ್ರ ಸಮೂದಾಯದ ಹಿರಿಯ ಮಿತ್ರರೊಬ್ಬರು ನನಗೆ ‘ನೀವು ತುಂಬ ತೀಕ್ಷ್ಣವಾಗಿ ಚಿಂತನೆ ಮಾಡುತ್ತಿರಿ(ಸುಳ್ಳು). ಆದರೆ ನೀವು ಹೆಚ್ಚು ಜಾತಿ ಬಗ್ಗೆಯೇ ಮಾತನಾಡುತ್ತ, ಬ್ರಾಹ್ಮಣರ ಬಗ್ಗೆಯೇ ಹೆಚ್ಚು ದ್ವೇಷ ಮಾಡುತ್ತಿರಿ. ಅದು ಸರಿಯೇ’? ಎಂದರು. ನಾನು ಗಾಬರಿಯಾದೆ. ನನಗೆ ಇದು ಹೊಸ ಆರೋಪವಾಗಿತ್ತು ಮತ್ತು ಅವರಿಗೆ ಉತ್ತರಿಸಲು ಸಾಕಷ್ಟು ಸಮಯದ ಅಗತ್ಯ ಇದ್ದುದರಿಂದ ನಾನು ಅವರ ಮುಖವನ್ನೊಮ್ಮೆ ದಿಟ್ಟಿಸಿ ನೋಡಿ ನಾನು ಈ ವಿಷಯದ ಕುರಿತು ನಂತರ ಮಾತನಾಡುತ್ತೇನೆ ಎಂದು ಹೇಳಿ ಅಲ್ಲಿಂದ ಬಂದು ಬಿಟ್ಟೆ.

ಆ ನನ್ನ ಮಿತ್ರರಿಗೆ ಉತ್ತರ ಇಷ್ಟೇ.

ಭಾರತದಲ್ಲಿ ಯಾವ ವಿಷಯಗಳೂ ಜಾತಿ ಪರೀದಿಯನ್ನು ದಾಟಿ ಬೆಳೆದಿಲ್ಲಿ. ಅದು ಸಾಮಾಜಿಕ ಇರಬಹುದು, ರಾಜಕೀಯ ಇರಬಹುದು , ಅರ್ಥ ವ್ಯವಸ್ಥೆ, ಶಿಕ್ಷಣ, ಸಂಸ್ಕೃತಿ ಯಾವುದನ್ನೇ ತೆಗೆದುಕೊಂಡರೂ ಅದು ಜಾತಿ ಪರಿಮಿತಿಯಲ್ಲೇ ಹರಡಿಕೊಂಡಿದೆ. ನಮ್ಮ ಸಾಮಾಜಿಕ ಸಂಬಂಧಗಳು, ಭೂ ಸಂಬಂಧಗಳು, ವೈವಾಹಿಕ ಸಂಬಂಧಗಳನ್ನು ತೆಗೆದುಕೊಂಡರೂ ಅವುಗಳ ಬೆಳವಣಿಗೆ ಜಾತಿ ಪರಿದಿಯ ಮಿತಿಯಲ್ಲೇ ಇರುತ್ತದೆ. ಶಾಲೆಯಲ್ಲಿ ಸರ್ವಜನಾಂಗದ ತೋಟದಂತೆ ಕಲೆತು ಬೆರೆತು ಕಲಿಯುವ ಮಕ್ಕಳು ಶಾಲೆ ಮುಗಿದ ತಕ್ಷಣ ಹೊರಡುವುದು ಎಲ್ಲಿಗೆ? ಜಾತಿ ಆಧಾರಿತವಾಗಿ ಪ್ರತೇಕವಾಗಿರುವ ತಮ್ಮ ಜಾತಿ ವಾಸಸ್ಥಾನಗಳಿಗೆ. ಅವು ಎಲ್ಲ ರೀತಿಯಲ್ಲೂ ಪ್ರತ್ಯೇಕ ಜಗತ್ತುಗಳೇ ಆಗಿವೆ. ಒಂದಕ್ಕೊಂದು ತೆರೆದುಕೊಳ್ಳಲು ಸಾಧ್ಯವಾಗದಷ್ಟು ಬಿಗಿಯಾಗಿವೆ. ಮಕ್ಕಳು ಬೆಳೆದಂತೆ ಜಾತಿ ಪ್ರಜ್ಞೆ ಕೂಡ ಬಲಿಯುತ್ತ ಹೋಗುತ್ತದೆ. ಜಾತಿ ಪರೀದಿ ದಾಟಿ ಏನು ಬೆಳೆದಿದೆ ಇಲ್ಲಿ?

ಜಾತಿ ಸಮಸ್ಯೆ ಅಂದಾಕ್ಷಣ ದಲಿತ ಮತ್ತು ಸವರ್ಣೀಯರ ಸಂಘರ್ಷ ಅಂತ ಭಾವಿಸಬೇಕಿಲ್ಲ. ಬ್ರಾಹ್ಮಣ ಒಳ ಪಂಗಡಗಳ ಒಳಗೇ ಮೇಲರಿಮೆಗಾಗಿ ಎಷ್ಟು ಸಂಘರ್ಷ ಇದೆ ಎಂಬುದನ್ನು ನಾವು ತಿಳಿಯಬೇಕು. ವೈಶ್ಯ, ಶೂದ್ರ ಸಮುದಾಯಗಳು ಒಳ ಪಂಗಡಗಳಲ್ಲಿ ತಮ್ಮ ತಮ್ಮ ಶ್ರೇಷ್ಠತೆಗಾಗಿ ನಡೆಸುವ ಕಚ್ಚಾಟಗಳನ್ನು ನಾವು ಗಮನಿಸಬೇಕು. ದಲಿತರ ಒಳ ಪಂಗಡಗಳಲ್ಲಿರುವ ಪ್ರತ್ಯೇಕತೆಗಳನ್ನು ನೋಡಬೇಕು. ಇವೆಲ್ಲವೂ ಭಾರತೀಯರನ್ನೂ ಪ್ರತಿ ವಿಷಯದಲ್ಲೂ ಸಾವಿರಾರು ಪ್ರತ್ಯೇಕ ಸಮುದಾಯಗಳನ್ನಾಗಿ ಬೇರ್ಪಡಿಸಿ ವಿಕಾಸಗೊಳಿಸಿವೆ. ಹೀಗಾಗಿ ಇಲ್ಲಿ ಭೀಕರವಾದ ಅಸಮಾನತೆ ಎಲ್ಲ ಹಂತದಲ್ಲೂ ತಾಂಡವಾಡುತ್ತಿರುವುದರಿಂದ ಇದಕ್ಕೆಲ ಜಾತಿ ವ್ಯವಸ್ಥೆಯೇ ಕಾರಣವಾಗಿರುವುರಿಂದ, ಎಲ್ಲವೂ ಜಾತಿ ಆಧಾರಿತವಾಗಿರುವುದರಿಂದ ನಾನು ವಿಷಯಾಧಾರಿತವಾಗಿ ಮಾತನಾಡುವಾಗ ಜಾತಿ ಬಿಟ್ಟು ಮಾತನಾಡಲು ಸಾಧ್ಯವಿಲ್ಲ.

ಇನ್ನೂ ಬ್ರಾಹ್ಮಣರನ್ನು ದ್ವೇಷ ಮಾಡುತ್ತಿರಿ ಎಂಬುದು. ನಾನು ಎಂದೂ ಜನರನ್ನು ದ್ವೇಷಿಸುವುದಿಲ್ಲ. ನಿಲುವುಗಳನ್ನು ಟೀಕಿಸುವುದು, ವಿರೋಧಿಸುವುದು ದ್ವೇಷವಾಗುವುದಿಲ್ಲ. ಆಗಬಾರದು. ಹಾಗೇ ನೋಡಿದರೆ ನಾನು ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವಾಗ ಹೆಚ್ಚು ವರ್ತಮಾನದ ವಾಸ್ತವದ ಬಗ್ಗೆ ಮಾತನಾಡುತ್ತೇನೆ. ಅದರ ಬಗ್ಗೆ ಮಾತನಾಡುವಾಗ ನಾನು ಹೆಚ್ಚು ಟೀಕಿಸಿದ್ದು ಶೂದ್ರ ಸಮುದಾಯಗಳನ್ನು‌. ಜಾತಿ ಕ್ರೌರ್ಯ, ಮತ್ತು ಆಚರಣೆಯಲ್ಲಿ ಯಾರು ಮುಂದಿದ್ದಾರೆ ಎಂಬ ಕನಿಷ್ಠ ತಿಳುವಳಿಕೆ ನನಗಿದೆ. ದಲಿತರೊಂದಿಗೆ ನಡೆದಿರುವ, ನಡೆಯುತ್ತಿರುವ ಅಂತರ್ಜಾತಿ ಮದುವೆಗಳ ಸಂಬಂಧಗಳನ್ನು ಅತಿ ಹೆಚ್ಚು ಉಳಿಸಿಕೊಳ್ಳುತ್ತಿರುವುದು ಬ್ರಾಹ್ಮಣರೇ. ಅತಿ ಕ್ರೂರವಾಗಿ ಅಂತ್ಯಗೊಳ್ಳುತ್ತಿರುವ ಸಂಬಂಧಗಳು ಶೂದ್ರರೊಂದಿಗಿನ ಸಂಬಂಧಗಳೇ ಆಗಿವೆ. ಆದಾಗ್ಯೂ ಕೂಡ ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವಾಗ ಅದರ ಹುಟ್ಟು, ಬೆಳವಣಿಗೆ, ಆಚರಣೆ ಕುರಿತು ಮಾತನಾಡಲೇ ಬೇಕು. ಅಲ್ಲಿ ನಾವು ಬ್ರಾಹ್ಮಣರ ಕುರಿತು ಅಲ್ಲದಿದ್ದರೂ ಬ್ರಾಹ್ಮಣ್ಯದ ಕುರಿತು ಮಾತನಾಡಲೇ ಬೇಕಾಗುತ್ತದೆ. ಅದು ಆ ಸಮುದಾಯವೇ ಹುಟ್ಟು ಹಾಕಿದಂಥ ಒಂದು ಸಿದ್ದಾಂತ. ಅದರ ಹುಟ್ಟನ್ನು ಅವರಿಂದ ಬೇರ್ಪಡಿಸಿ ಮಾತನಾಡಲು ಸಾಧ್ಯವಿಲ್ಲ ಹಾಗಾಗಿ ಬ್ರಾಹ್ಮಣ್ಯದ ಹುಟ್ಟು ಬೆಳವಣಿಗೆ ಬಗ್ಗೆ ಆ ಸಮುದಾಯವನ್ನು ಬಿಟ್ಟು ಮಾತನಾಡಲು ಸಾಧ್ಯವಿಲ್ಲ. ಅದರ ಅರ್ಥ ಸಮುದಾಯವೊಂದು ಇತಿಹಾಸದ ಒಂದು ಕಾಲಘಟ್ಟದಲ್ಲಿ ನಿರ್ಮಿಸಿದ ವ್ಯವಸ್ಥೆಯೊಂದಕ್ಕೆ ಆ ಸಮುದಾಯದಿಂದ ಬಂದಿರುವ ಈಗಿನ ಜನರೆಲ್ಲರೂ ಪ್ರಾಯಶ್ಚಿತ ಪಡಬೇಕು ಅಥವಾ ಅದರ ಜವಾಬ್ದಾರಿ ಹೊರಬೇಕು ಎಂಬುದು ಅತ್ಯಂತ ತರ್ಕವಿಲ್ಲದ ಮಾತು. ಆದರೆ ಅದರ ಹುಟ್ಟನ್ನು ಕುರಿತು ಮಾತನಾಡುವಾಗ ಆ ಸಮುದಾಯವನ್ನು ಗುರುತಿಸಲೇ ಬೇಕಾಗುತ್ತದೆ. ಈಗಲೂ ಆ ಸಮುದಾಯದ ಜನ ತಮ್ಮ ಪೂರ್ವಜರು ಮಾಡಿದ್ದು ಸರಿಯಾದದ್ದು, ಅದರ ಫಲಾನುಭವ ತಮ್ಮ ಹಕ್ಕು ಎಂದು ಭಾವಿಸುವುದಾದರೆ ಖಂಡಿತ ಅಂತಹ ವ್ಯಕ್ತಿಗಳ ಮನಸ್ಥಿತಿಯನ್ನು ನಾನು ವಿರೋಧಿಸುತ್ತೇನೆ.


ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ


ಮಯನ್ಮಾರದ ಬೌದ್ಧರು ರೋಹಿಂಗ್ಯ ಮುಸಲ್ಮಾನರನ್ನು ನೆಡಸಿಕೊಂಡ ಅಮಾನವೀಯ ರೀತಿಯನ್ನು, ಶ್ರೀಲಂಕಾದ ಬೌದ್ಧರು ನಡೆಸಿದ ತಮಿಳರ ನರಹತ್ಯೆಯನ್ನೂ ನಾನು ಮನುಷ್ಯ ಸಮಾಜ ನಡೆಸಬಾರದ ಕೃತ್ಯಗಳೆಂದೆ ಖಂಡಿಸುತ್ತೇನೆ. ಹಾಗೇ ಬ್ರಾಹ್ಮಣ್ಯವನ್ನೂ, ಒಂದು ಕಾಲಘಟ್ಟದಲ್ಲಿ ಜಾತಿ ತಾರತಮ್ಯವನ್ನು ಹುಟ್ಟು ಹಾಕಿ ಜಾರಿಗೆ ತಂದ ಬ್ರಾಹ್ಮಣರ ಕೃತ್ಯವನ್ನೂ ಕೂಡ ವಿರೋಧಿಸುತ್ತೇನೆ. ನನ್ನ ಸಮುದಾಯದ ಮುಂದಿನ ತಲೆಮಾರಿನ ಜನರು ಒಂದು ವೇಳೆ ಮುಖ್ಯವಾಹಿನಿಯಲ್ಲಿ ಬೆರೆತು ಹೋಗಿದ್ದರೂ, ಜಾತಿ ಅಸ್ಥಿತ್ವ ಕಾಣೆಯಾದರೂ, ಅವರು ಇತಿಹಾಸದ ಪುಟಗಳಲ್ಲಿ, ದೇಶದಲ್ಲಿ ಯಾರೂ ಮುಟ್ಟಿಸಿಕೊಳ್ಳದ, ಊರ ಹೊರಗಿಟ್ಟ, ಬದುಕುವ ಎಲ್ಲ ಅವಕಾಶಗಳನ್ನೂ ನಿರಾಕರಿಸಿ ಅತ್ಯಂತ ಕೀಳು ದರ್ಜೆಗೆ ತಳ್ಳಲ್ಪಟ್ಟಂಥ ಜನಸಮುದಾಯಗಳು ಇದ್ದವು ಎಂದು ಓದಿಕೊಳ್ಳಬೇಕಾಗಿ ಬಂದಾಗ, ಆ ಸಮುದಾಯಗಳು ಯಾವವು ಎಂದರೆ ಏನು ಹೇಳುತ್ತೀರಿ? ಆಗ ದಲಿತ ಸಮುದಾಯಗಳನ್ನೇ ಗುರುತಿಸಬೇಕಲ್ಲವೇ? ಆಗ ನಮ್ಮ ಪೀಳಿಗೆ, ಒಂದು ವೇಳೆ ತಮ್ಮ ಸಮುದಾಯಗಳು ಹೀಗೆ ಬದುಕಿದ್ದವು ಎಂಬುದು ತಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂದು ವಿರೋಧಿಸಿದರೆ ಇತಿಹಾಸದ ವಾಸ್ತವವನ್ನು ಬದಲಿಸಿ ಬರೆಯಲು ಸಾಧ್ಯವೇ?.

ಮಹಾಲಿಂಗಪ್ಪ ಆಲಬಾಳ. (ಯುವ ಬರಹಗಾರರು, ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವು.)


ಇದನ್ನೂ ಓದಿ: ಭಾರತದ ಜಾತಿ ವೃಕ್ಷದ ವಿಷಕಾರಿ ಹಣ್ಣು ಖೈರ್ಲಾಂಜಿಯನ್ನು ಮರೆಯಬಾರದು…

Also Read: Mob of 200 People from Dominant Castes Attack Dalits in Ainlasari, Odisha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...