Homeಕರ್ನಾಟಕಇತಿಹಾಸ ಮರೆತ 'ಟಿಪ್ಪುವಿನ ಹಿಂದೂ ವೀರಸಂಗಾತಿಗಳು'

ಇತಿಹಾಸ ಮರೆತ ‘ಟಿಪ್ಪುವಿನ ಹಿಂದೂ ವೀರಸಂಗಾತಿಗಳು’

- Advertisement -
- Advertisement -
| ಇಸ್ಮತ್ ಪಜೀರ್ |
ಮೇ 04, 1799 ರಂದು ಕನ್ನಡ ನಾಡಿನ ಅಪ್ರತಿಮ ವೀರ, ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಹುತಾತ್ಮನಾದ ದಿನ.

ಟಿಪ್ಪು ಸುಲ್ತಾನನ ಕೊನೆಯ ಯುದ್ಧ ಅರ್ಥಾತ್ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದ ಇಂಚಿಂಚೂ ಬಿಡದೆ ಬ್ರಿಟಿಷ್ ಮತ್ತು ಫ್ರೆಂಚ್ ಇತಿಹಾಸಕಾರರು ಪ್ರತಿಯೊಂದನ್ನೂ ದಾಖಲಿಸಿದ್ದಾರೆ. ಟಿಪ್ಪುವಿನ ಬಗ್ಗೆ ಅತ್ಯಂತ ಮಹತ್ವದ ಚಾರಿತ್ರಿಕ ಕಾದಂಬರಿ ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್ ಬರೆದ ಭಗವಾನ್ ಶ್ಯಾಮದಾಸ್ ಗಿದ್ವಾನಿ ಅದಕ್ಕಾಗಿ ಅತೀ ಹೆಚ್ಚು ಅಧ್ಯಯನ ನಡೆಸಿದ್ದು ಫ್ರೆಂಚ್ ಮತ್ತು ಬ್ರಿಟಿಷ್ ಇತಿಹಾಸ ಗ್ರಂಥಗಳನ್ನಾಗಿದೆ. ಗಿದ್ವಾನಿ ಬರೆದಿದ್ದು ಒಂದು ಚಾರಿತ್ರಿಕ ಕಾದಂಬರಿಯಾದರೂ  ಅವರು ಅದಕ್ಕೆ ಮಸಾಲೆ ತುಂಬಿಸುವ ಕೆಲಸ ಮಾಡಿಲ್ಲ ಎಂಬುವುದಕ್ಕೆ ಅವರು ಬಳಸಿದ ದಾಖಲೆಗಳೇ ಸಾಕ್ಷ್ಯ ಒದಗಿಸುತ್ತವೆ.

ನಮ್ಮಲ್ಲಿ ಒಂದೋ ಟಿಪ್ಪುವನ್ನು ಅತಿಯಾಗಿ ವೈಭವೀಕರಿಸಲಾಗುತ್ತದೆ ಅಥವಾ ಅತಿಯಾಗಿ ದೂಷಿಸಲಾಗುತ್ತದೆ. ಇವೆರಡರ ಮಧ್ಯೆ ಹುದುಗಿರುವ ಸತ್ಯಗಳು ಅನೇಕ ಸಂದರ್ಭಗಳಲ್ಲಿ ಮಸುಕಾಗಿಬಿಡುವ ಸಾಧ್ಯತೆಗಳಿವೆ. ನಾವು ಟಿಪ್ಪುವಿಗೆ ದ್ರೋಹ ಬಗೆದ ಪೂರ್ಣಯ್ಯ ಮತ್ತು ಮೀರ್ ಸಾದಿಖರನ್ನು ಋಣಾತ್ಮಕ ಕಾರಣಗಳಿಗಾಗಿಯಾದರೂ ಆಗಾಗ ನೆನಪಿಸಿಕೊಳ್ಳುತ್ತೇವೆ‌ ಆದರೆ ಟಿಪ್ಪುವಿಗಾಗಿ ಮತ್ತು ನಾಡಿಗಾಗಿ ಹೋರಾಡಿ ವೀರಮರಣವನ್ನಪ್ಪಿದ  ಅದೆಷ್ಟೋ ಮಂದಿಗಳ ಹೆಸರು ಇತಿಹಾಸ ಗರ್ಭದಲ್ಲಿ ಹೂತು ಹೋಗಿವೆ. ಹಾಗೆ ಹುತಾತ್ಮರಾದ ಇಬ್ಬರು ವೀರಯೋಧರ ಕೊನೆಯ ಕ್ಷಣದ ಹೋರಾಟದ ಝಲಕ್ ಗಳನ್ನು ಇಲ್ಲಿ ದಾಖಲಿಸುತ್ತೇನೆ.

ಮೀರ್ ಸಾದಿಖ್ ಮತ್ತು ಆತನ ರಾಜದ್ರೋಹಿ ಬಂಟರು ಮೈಸೂರಿನ ಸೈನಿಕರಿಗೆ ” ಸುಲ್ತಾನರು ಬ್ರಿಟಿಷರೊಂದಿಗೆ ಸಂಧಾನ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ” ಎಂದು ಸುಳ್ಳು ಹೇಳಿ ಅವರನ್ನು ಯುದ್ಧದಿಂದ ಹಿಂದೆ ಸರಿಸಿದರು.

ಅದಾಗಲೇ ಟಿಪ್ಪುವಿಗೆ ಮೀರ್ ಸಾದಿಖನ ರಾಜದ್ರೋಹದ ವರ್ತಮಾನ ಸಿಕ್ಕಿತ್ತು. ಮೀರ್ ಸಾದಿಖ ಬ್ರಿಟೀಷರು ಟಿಪ್ಪುವಿನ  ಕೋಟೆಯೊಳಗಡೆ ಸುಲಭವಾಗಿ ನುಸುಳಿ ಬರಲು ಅನುವಾಗುವಂತೆ ಮಾಡಿಕೊಟ್ಟಿದ್ದ.(ಕೋಟೆಯೆಂದರೆ ಒಂದು ‍ಚಿಕ್ಕ ಆವರಣ ಗೋಡೆಯಲ್ಲ, ಅದು ಬೃಹತ್ ವಿಸ್ತೀರ್ಣದ ಆವರಣ ಕೋಟೆ) ಬ್ರಿಟೀಷರು ಕೋಟೆಯೊಳಗೆ ನುಗ್ಗಿ ಬರುವ ಹೊತ್ತಿಗೆ ಟಿಪ್ಪುವಿನ ಸನಿಹ ಇದ್ದದ್ದು ಆತನ ವೈದ್ಯ ರಾಜಾ ಖಾನ್ ಮತ್ತು ಓರ್ವ ಯುವ ಯೋಧ ಮಾತ್ರ. ಇದ್ದಕ್ಕಿದ್ದಂತೆ ಟಿಪ್ಪುವಿನ ಸನಿಹಕ್ಕೆ ತಲಪಿದ ಕೆಲವು ಬ್ರಿಟಿಷ್ ಯೋಧರು ಟಿಪ್ಪುವನ್ನು ನೇರವಾಗಿ ಕೊಚ್ಚಿ ಕೊಲ್ಲಬಯಸಿದ್ದರು. ಅವರು ಇನ್ನೇನು ಟಿಪ್ಪುವಿನ ಮೇಲೆರಗಬೇಕು ಎನ್ನುವಷ್ಟರಲ್ಲಿ ಮೈಸೂರಿನ ಆ ವೀರ ಯುವ ಯೋಧ ಮಿಂಚಿನ ವೇಗದಲ್ಲಿ ತಲವಾರು ಬೀಸಿ ಇಬ್ಬರು ಬ್ರಿಟಿಷ್ ಸೈನಿಕರ ರುಂಡ ಚೆಂಡಾಡಿಯೇ ಬಿಟ್ಟ. ಅಲ್ಲಿಗೆ ಬಂದಿದ್ದ ಉಳಿದ ಬ್ರಿಟಿಷ್ ಸೈನಿಕರು ಆ ಇಬ್ಬರನ್ನು ಅಲ್ಲೇ ಬಿಟ್ಟು ಓಟಕಿತ್ತರು. ಶಹಭಾಸ್ ಮಗನೇ, ಇಂದು ನನ್ನ ಇಡೀ ಸೈನ್ಯವೆಂದರೆ ನೀನೇ.. ನಿನ್ನ ಹೆಸರೇನು ಮಗನೇ ಎಂದು ಟಿಪ್ಪು ಪ್ರಶ್ನಿಸಿದ. ಅಷ್ಟರಲ್ಲಿ ದೂರದಿಂದ ಹಾರಿ ಬಂದ ಗುಂಡೊಂದು ಆ ವೀರಯೋಧನ ಎದೆ ಸೀಳಿತು. ಟಿಪ್ಪು ಉರುಳಿ ಬಿದ್ದ ಯೋಧನನ್ನು ತಬ್ಬಿಕೊಂಡ. ಆತ ಟಿಪ್ಪುವಿನ ಬಾಹುಗಳಲ್ಲೇ ಹುತಾತ್ಮನಾದ. ಆ ವೀರಯೋಧ ಟಿಪ್ಪುವಿಗೆ ದ್ರೋಹ ಬಗೆದಿದ್ದ ಅಂಚೆಮಂತ್ರಿ ಶ್ಯಾಮಯ್ಯನ ಮಗ.

ಮೀರ್ ಸಾದಿಖನ ಕೊರಳ್ ಕೊಯ್ದ ವೀರಯೋಧ ಶೇಖರ:
ಕೋಟೆಯ ತುಂಬಾ ಹಾಲಾಹಲವೆದ್ದಿತ್ತು. ಒಂದೆಡೆ ಯುದ್ಧದಲ್ಲಿ ಗಾಯಗೊಂಡ ವೀರಯೋಧ ಶೇಖರ ಮರಣಶಯ್ಯೆಯಲ್ಲಿದ್ದ. ಅಲ್ಲಿಗೆ ದ್ರೋಹಿ ಮೀರ್ ಸಾದಿಖ ದ್ರೋಹಿಗಳು ಮತ್ತು ಬ್ರಿಟಿಷ್ ಸೈನಿಕರೊಂದಿಗೆ ಬಂದ. ಯೋಧ ಶೇಖರನ್ನುದ್ದೇಶಿಸಿ ಮೀರ್ ಸಾದಿಖ ಪ್ರಶ್ನಿಸಿದ “ಸುಲ್ತಾನರೆಲ್ಲಿ”?
ಆತ ನೆಲದಲ್ಲಿ ಬಿದ್ದಲ್ಲಿಂದಲೇ ಕೈ ಸನ್ನೆಮಾಡಿ ಮೀರ್ ಸಾದಿಕನನ್ನು ಬಳಿ ಕರೆದ. ಶೇಖರ್ ಸುಲ್ತಾನರ ಸಂದೇಶ ನನ್ನ ಜೇಬಲ್ಲಿದೆ ತೆಗೆಯಿರಿ ಎಂದ. ಮೀರ್ ಸಾಧಿಕ್ ಶೇಖರನ ಜೇಬಿಗೆ ಕೈ ಹಾಕಲು ಬಾಗಿದ. ಆತ ತಡಮಾಡದೇ ಕೈಯಲ್ಲಿ ಬಿಗಿಯಾಗಿ ಹಿಡಿದಿದ್ದ ಖಡ್ಗದಿಂದ ದ್ರೋಹಿ ಮೀರ್ ಸಾದಿಖನ ಕೊರಳು ಕೊಯ್ದೇ ಬಿಟ್ಟ. ಮೀರ್ ಸಾದಿಕ್ ನಾಯಿಯಂತೆ ಸತ್ತು ಬಿದ್ದರೆ ವೀರಯೋಧ ಶೇಖರ್ ನೆಮ್ಮದಿಯಿಂದ ಕೊನೆಯುಸಿರೆಳೆದ.
ಇಂತಹ ಇನ್ನೂ ಅನೇಕ ಹಿಂದೂ ಯೋಧರು  ಕೊನೆಯುಸಿರಿನವರೆಗೂ ಹೋರಾಡಿ ರಣರಂಗದಲ್ಲಿ ವೀರಮರಣವನ್ನಪ್ಪಿದ್ದಾರೆ. ಸಂಘ ಪರಿವಾರ ಅಪಪ್ರಚಾರ ಮಾಡುತ್ತಿರುವಂತೆ ಆತ ‘ಹಿಂದೂ ವಿರೋಧಿ, ಮತಾಂಧ, ದೇವಾಲಯ ಭಂಜಕ, ಮತಾಂತರಿ ಟಿಪ್ಪು’ವೇ ಆಗಿದ್ದರೆ, ಅದು ಸಾಧ್ಯವಿರುತ್ತಿರಲಿಲ್ಲ. ಇಂತಹ ವೀರಯೋಧರ ಸಾಹಸಗಳು ಇತಿಹಾಸದ  ಪುಟಗಳಿಂದ ಮಾಸಿಹೋಗಿರುವುದು ಇತಿಹಾಸದ ಕ್ರೂರ ವ್ಯಂಗ್ಯವೇ ಸರಿ.

ಆಧಾರ : ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...