Homeಕರ್ನಾಟಕಇತಿಹಾಸ ಮರೆತ 'ಟಿಪ್ಪುವಿನ ಹಿಂದೂ ವೀರಸಂಗಾತಿಗಳು'

ಇತಿಹಾಸ ಮರೆತ ‘ಟಿಪ್ಪುವಿನ ಹಿಂದೂ ವೀರಸಂಗಾತಿಗಳು’

- Advertisement -
- Advertisement -
| ಇಸ್ಮತ್ ಪಜೀರ್ |
ಮೇ 04, 1799 ರಂದು ಕನ್ನಡ ನಾಡಿನ ಅಪ್ರತಿಮ ವೀರ, ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಹುತಾತ್ಮನಾದ ದಿನ.

ಟಿಪ್ಪು ಸುಲ್ತಾನನ ಕೊನೆಯ ಯುದ್ಧ ಅರ್ಥಾತ್ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದ ಇಂಚಿಂಚೂ ಬಿಡದೆ ಬ್ರಿಟಿಷ್ ಮತ್ತು ಫ್ರೆಂಚ್ ಇತಿಹಾಸಕಾರರು ಪ್ರತಿಯೊಂದನ್ನೂ ದಾಖಲಿಸಿದ್ದಾರೆ. ಟಿಪ್ಪುವಿನ ಬಗ್ಗೆ ಅತ್ಯಂತ ಮಹತ್ವದ ಚಾರಿತ್ರಿಕ ಕಾದಂಬರಿ ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್ ಬರೆದ ಭಗವಾನ್ ಶ್ಯಾಮದಾಸ್ ಗಿದ್ವಾನಿ ಅದಕ್ಕಾಗಿ ಅತೀ ಹೆಚ್ಚು ಅಧ್ಯಯನ ನಡೆಸಿದ್ದು ಫ್ರೆಂಚ್ ಮತ್ತು ಬ್ರಿಟಿಷ್ ಇತಿಹಾಸ ಗ್ರಂಥಗಳನ್ನಾಗಿದೆ. ಗಿದ್ವಾನಿ ಬರೆದಿದ್ದು ಒಂದು ಚಾರಿತ್ರಿಕ ಕಾದಂಬರಿಯಾದರೂ  ಅವರು ಅದಕ್ಕೆ ಮಸಾಲೆ ತುಂಬಿಸುವ ಕೆಲಸ ಮಾಡಿಲ್ಲ ಎಂಬುವುದಕ್ಕೆ ಅವರು ಬಳಸಿದ ದಾಖಲೆಗಳೇ ಸಾಕ್ಷ್ಯ ಒದಗಿಸುತ್ತವೆ.

ನಮ್ಮಲ್ಲಿ ಒಂದೋ ಟಿಪ್ಪುವನ್ನು ಅತಿಯಾಗಿ ವೈಭವೀಕರಿಸಲಾಗುತ್ತದೆ ಅಥವಾ ಅತಿಯಾಗಿ ದೂಷಿಸಲಾಗುತ್ತದೆ. ಇವೆರಡರ ಮಧ್ಯೆ ಹುದುಗಿರುವ ಸತ್ಯಗಳು ಅನೇಕ ಸಂದರ್ಭಗಳಲ್ಲಿ ಮಸುಕಾಗಿಬಿಡುವ ಸಾಧ್ಯತೆಗಳಿವೆ. ನಾವು ಟಿಪ್ಪುವಿಗೆ ದ್ರೋಹ ಬಗೆದ ಪೂರ್ಣಯ್ಯ ಮತ್ತು ಮೀರ್ ಸಾದಿಖರನ್ನು ಋಣಾತ್ಮಕ ಕಾರಣಗಳಿಗಾಗಿಯಾದರೂ ಆಗಾಗ ನೆನಪಿಸಿಕೊಳ್ಳುತ್ತೇವೆ‌ ಆದರೆ ಟಿಪ್ಪುವಿಗಾಗಿ ಮತ್ತು ನಾಡಿಗಾಗಿ ಹೋರಾಡಿ ವೀರಮರಣವನ್ನಪ್ಪಿದ  ಅದೆಷ್ಟೋ ಮಂದಿಗಳ ಹೆಸರು ಇತಿಹಾಸ ಗರ್ಭದಲ್ಲಿ ಹೂತು ಹೋಗಿವೆ. ಹಾಗೆ ಹುತಾತ್ಮರಾದ ಇಬ್ಬರು ವೀರಯೋಧರ ಕೊನೆಯ ಕ್ಷಣದ ಹೋರಾಟದ ಝಲಕ್ ಗಳನ್ನು ಇಲ್ಲಿ ದಾಖಲಿಸುತ್ತೇನೆ.

ಮೀರ್ ಸಾದಿಖ್ ಮತ್ತು ಆತನ ರಾಜದ್ರೋಹಿ ಬಂಟರು ಮೈಸೂರಿನ ಸೈನಿಕರಿಗೆ ” ಸುಲ್ತಾನರು ಬ್ರಿಟಿಷರೊಂದಿಗೆ ಸಂಧಾನ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ” ಎಂದು ಸುಳ್ಳು ಹೇಳಿ ಅವರನ್ನು ಯುದ್ಧದಿಂದ ಹಿಂದೆ ಸರಿಸಿದರು.

ಅದಾಗಲೇ ಟಿಪ್ಪುವಿಗೆ ಮೀರ್ ಸಾದಿಖನ ರಾಜದ್ರೋಹದ ವರ್ತಮಾನ ಸಿಕ್ಕಿತ್ತು. ಮೀರ್ ಸಾದಿಖ ಬ್ರಿಟೀಷರು ಟಿಪ್ಪುವಿನ  ಕೋಟೆಯೊಳಗಡೆ ಸುಲಭವಾಗಿ ನುಸುಳಿ ಬರಲು ಅನುವಾಗುವಂತೆ ಮಾಡಿಕೊಟ್ಟಿದ್ದ.(ಕೋಟೆಯೆಂದರೆ ಒಂದು ‍ಚಿಕ್ಕ ಆವರಣ ಗೋಡೆಯಲ್ಲ, ಅದು ಬೃಹತ್ ವಿಸ್ತೀರ್ಣದ ಆವರಣ ಕೋಟೆ) ಬ್ರಿಟೀಷರು ಕೋಟೆಯೊಳಗೆ ನುಗ್ಗಿ ಬರುವ ಹೊತ್ತಿಗೆ ಟಿಪ್ಪುವಿನ ಸನಿಹ ಇದ್ದದ್ದು ಆತನ ವೈದ್ಯ ರಾಜಾ ಖಾನ್ ಮತ್ತು ಓರ್ವ ಯುವ ಯೋಧ ಮಾತ್ರ. ಇದ್ದಕ್ಕಿದ್ದಂತೆ ಟಿಪ್ಪುವಿನ ಸನಿಹಕ್ಕೆ ತಲಪಿದ ಕೆಲವು ಬ್ರಿಟಿಷ್ ಯೋಧರು ಟಿಪ್ಪುವನ್ನು ನೇರವಾಗಿ ಕೊಚ್ಚಿ ಕೊಲ್ಲಬಯಸಿದ್ದರು. ಅವರು ಇನ್ನೇನು ಟಿಪ್ಪುವಿನ ಮೇಲೆರಗಬೇಕು ಎನ್ನುವಷ್ಟರಲ್ಲಿ ಮೈಸೂರಿನ ಆ ವೀರ ಯುವ ಯೋಧ ಮಿಂಚಿನ ವೇಗದಲ್ಲಿ ತಲವಾರು ಬೀಸಿ ಇಬ್ಬರು ಬ್ರಿಟಿಷ್ ಸೈನಿಕರ ರುಂಡ ಚೆಂಡಾಡಿಯೇ ಬಿಟ್ಟ. ಅಲ್ಲಿಗೆ ಬಂದಿದ್ದ ಉಳಿದ ಬ್ರಿಟಿಷ್ ಸೈನಿಕರು ಆ ಇಬ್ಬರನ್ನು ಅಲ್ಲೇ ಬಿಟ್ಟು ಓಟಕಿತ್ತರು. ಶಹಭಾಸ್ ಮಗನೇ, ಇಂದು ನನ್ನ ಇಡೀ ಸೈನ್ಯವೆಂದರೆ ನೀನೇ.. ನಿನ್ನ ಹೆಸರೇನು ಮಗನೇ ಎಂದು ಟಿಪ್ಪು ಪ್ರಶ್ನಿಸಿದ. ಅಷ್ಟರಲ್ಲಿ ದೂರದಿಂದ ಹಾರಿ ಬಂದ ಗುಂಡೊಂದು ಆ ವೀರಯೋಧನ ಎದೆ ಸೀಳಿತು. ಟಿಪ್ಪು ಉರುಳಿ ಬಿದ್ದ ಯೋಧನನ್ನು ತಬ್ಬಿಕೊಂಡ. ಆತ ಟಿಪ್ಪುವಿನ ಬಾಹುಗಳಲ್ಲೇ ಹುತಾತ್ಮನಾದ. ಆ ವೀರಯೋಧ ಟಿಪ್ಪುವಿಗೆ ದ್ರೋಹ ಬಗೆದಿದ್ದ ಅಂಚೆಮಂತ್ರಿ ಶ್ಯಾಮಯ್ಯನ ಮಗ.

ಮೀರ್ ಸಾದಿಖನ ಕೊರಳ್ ಕೊಯ್ದ ವೀರಯೋಧ ಶೇಖರ:
ಕೋಟೆಯ ತುಂಬಾ ಹಾಲಾಹಲವೆದ್ದಿತ್ತು. ಒಂದೆಡೆ ಯುದ್ಧದಲ್ಲಿ ಗಾಯಗೊಂಡ ವೀರಯೋಧ ಶೇಖರ ಮರಣಶಯ್ಯೆಯಲ್ಲಿದ್ದ. ಅಲ್ಲಿಗೆ ದ್ರೋಹಿ ಮೀರ್ ಸಾದಿಖ ದ್ರೋಹಿಗಳು ಮತ್ತು ಬ್ರಿಟಿಷ್ ಸೈನಿಕರೊಂದಿಗೆ ಬಂದ. ಯೋಧ ಶೇಖರನ್ನುದ್ದೇಶಿಸಿ ಮೀರ್ ಸಾದಿಖ ಪ್ರಶ್ನಿಸಿದ “ಸುಲ್ತಾನರೆಲ್ಲಿ”?
ಆತ ನೆಲದಲ್ಲಿ ಬಿದ್ದಲ್ಲಿಂದಲೇ ಕೈ ಸನ್ನೆಮಾಡಿ ಮೀರ್ ಸಾದಿಕನನ್ನು ಬಳಿ ಕರೆದ. ಶೇಖರ್ ಸುಲ್ತಾನರ ಸಂದೇಶ ನನ್ನ ಜೇಬಲ್ಲಿದೆ ತೆಗೆಯಿರಿ ಎಂದ. ಮೀರ್ ಸಾಧಿಕ್ ಶೇಖರನ ಜೇಬಿಗೆ ಕೈ ಹಾಕಲು ಬಾಗಿದ. ಆತ ತಡಮಾಡದೇ ಕೈಯಲ್ಲಿ ಬಿಗಿಯಾಗಿ ಹಿಡಿದಿದ್ದ ಖಡ್ಗದಿಂದ ದ್ರೋಹಿ ಮೀರ್ ಸಾದಿಖನ ಕೊರಳು ಕೊಯ್ದೇ ಬಿಟ್ಟ. ಮೀರ್ ಸಾದಿಕ್ ನಾಯಿಯಂತೆ ಸತ್ತು ಬಿದ್ದರೆ ವೀರಯೋಧ ಶೇಖರ್ ನೆಮ್ಮದಿಯಿಂದ ಕೊನೆಯುಸಿರೆಳೆದ.
ಇಂತಹ ಇನ್ನೂ ಅನೇಕ ಹಿಂದೂ ಯೋಧರು  ಕೊನೆಯುಸಿರಿನವರೆಗೂ ಹೋರಾಡಿ ರಣರಂಗದಲ್ಲಿ ವೀರಮರಣವನ್ನಪ್ಪಿದ್ದಾರೆ. ಸಂಘ ಪರಿವಾರ ಅಪಪ್ರಚಾರ ಮಾಡುತ್ತಿರುವಂತೆ ಆತ ‘ಹಿಂದೂ ವಿರೋಧಿ, ಮತಾಂಧ, ದೇವಾಲಯ ಭಂಜಕ, ಮತಾಂತರಿ ಟಿಪ್ಪು’ವೇ ಆಗಿದ್ದರೆ, ಅದು ಸಾಧ್ಯವಿರುತ್ತಿರಲಿಲ್ಲ. ಇಂತಹ ವೀರಯೋಧರ ಸಾಹಸಗಳು ಇತಿಹಾಸದ  ಪುಟಗಳಿಂದ ಮಾಸಿಹೋಗಿರುವುದು ಇತಿಹಾಸದ ಕ್ರೂರ ವ್ಯಂಗ್ಯವೇ ಸರಿ.

ಆಧಾರ : ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...