Homeಕರ್ನಾಟಕಇತಿಹಾಸ ಮರೆತ 'ಟಿಪ್ಪುವಿನ ಹಿಂದೂ ವೀರಸಂಗಾತಿಗಳು'

ಇತಿಹಾಸ ಮರೆತ ‘ಟಿಪ್ಪುವಿನ ಹಿಂದೂ ವೀರಸಂಗಾತಿಗಳು’

- Advertisement -
- Advertisement -
| ಇಸ್ಮತ್ ಪಜೀರ್ |
ಮೇ 04, 1799 ರಂದು ಕನ್ನಡ ನಾಡಿನ ಅಪ್ರತಿಮ ವೀರ, ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಹುತಾತ್ಮನಾದ ದಿನ.

ಟಿಪ್ಪು ಸುಲ್ತಾನನ ಕೊನೆಯ ಯುದ್ಧ ಅರ್ಥಾತ್ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದ ಇಂಚಿಂಚೂ ಬಿಡದೆ ಬ್ರಿಟಿಷ್ ಮತ್ತು ಫ್ರೆಂಚ್ ಇತಿಹಾಸಕಾರರು ಪ್ರತಿಯೊಂದನ್ನೂ ದಾಖಲಿಸಿದ್ದಾರೆ. ಟಿಪ್ಪುವಿನ ಬಗ್ಗೆ ಅತ್ಯಂತ ಮಹತ್ವದ ಚಾರಿತ್ರಿಕ ಕಾದಂಬರಿ ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್ ಬರೆದ ಭಗವಾನ್ ಶ್ಯಾಮದಾಸ್ ಗಿದ್ವಾನಿ ಅದಕ್ಕಾಗಿ ಅತೀ ಹೆಚ್ಚು ಅಧ್ಯಯನ ನಡೆಸಿದ್ದು ಫ್ರೆಂಚ್ ಮತ್ತು ಬ್ರಿಟಿಷ್ ಇತಿಹಾಸ ಗ್ರಂಥಗಳನ್ನಾಗಿದೆ. ಗಿದ್ವಾನಿ ಬರೆದಿದ್ದು ಒಂದು ಚಾರಿತ್ರಿಕ ಕಾದಂಬರಿಯಾದರೂ  ಅವರು ಅದಕ್ಕೆ ಮಸಾಲೆ ತುಂಬಿಸುವ ಕೆಲಸ ಮಾಡಿಲ್ಲ ಎಂಬುವುದಕ್ಕೆ ಅವರು ಬಳಸಿದ ದಾಖಲೆಗಳೇ ಸಾಕ್ಷ್ಯ ಒದಗಿಸುತ್ತವೆ.

ನಮ್ಮಲ್ಲಿ ಒಂದೋ ಟಿಪ್ಪುವನ್ನು ಅತಿಯಾಗಿ ವೈಭವೀಕರಿಸಲಾಗುತ್ತದೆ ಅಥವಾ ಅತಿಯಾಗಿ ದೂಷಿಸಲಾಗುತ್ತದೆ. ಇವೆರಡರ ಮಧ್ಯೆ ಹುದುಗಿರುವ ಸತ್ಯಗಳು ಅನೇಕ ಸಂದರ್ಭಗಳಲ್ಲಿ ಮಸುಕಾಗಿಬಿಡುವ ಸಾಧ್ಯತೆಗಳಿವೆ. ನಾವು ಟಿಪ್ಪುವಿಗೆ ದ್ರೋಹ ಬಗೆದ ಪೂರ್ಣಯ್ಯ ಮತ್ತು ಮೀರ್ ಸಾದಿಖರನ್ನು ಋಣಾತ್ಮಕ ಕಾರಣಗಳಿಗಾಗಿಯಾದರೂ ಆಗಾಗ ನೆನಪಿಸಿಕೊಳ್ಳುತ್ತೇವೆ‌ ಆದರೆ ಟಿಪ್ಪುವಿಗಾಗಿ ಮತ್ತು ನಾಡಿಗಾಗಿ ಹೋರಾಡಿ ವೀರಮರಣವನ್ನಪ್ಪಿದ  ಅದೆಷ್ಟೋ ಮಂದಿಗಳ ಹೆಸರು ಇತಿಹಾಸ ಗರ್ಭದಲ್ಲಿ ಹೂತು ಹೋಗಿವೆ. ಹಾಗೆ ಹುತಾತ್ಮರಾದ ಇಬ್ಬರು ವೀರಯೋಧರ ಕೊನೆಯ ಕ್ಷಣದ ಹೋರಾಟದ ಝಲಕ್ ಗಳನ್ನು ಇಲ್ಲಿ ದಾಖಲಿಸುತ್ತೇನೆ.

ಮೀರ್ ಸಾದಿಖ್ ಮತ್ತು ಆತನ ರಾಜದ್ರೋಹಿ ಬಂಟರು ಮೈಸೂರಿನ ಸೈನಿಕರಿಗೆ ” ಸುಲ್ತಾನರು ಬ್ರಿಟಿಷರೊಂದಿಗೆ ಸಂಧಾನ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ” ಎಂದು ಸುಳ್ಳು ಹೇಳಿ ಅವರನ್ನು ಯುದ್ಧದಿಂದ ಹಿಂದೆ ಸರಿಸಿದರು.

ಅದಾಗಲೇ ಟಿಪ್ಪುವಿಗೆ ಮೀರ್ ಸಾದಿಖನ ರಾಜದ್ರೋಹದ ವರ್ತಮಾನ ಸಿಕ್ಕಿತ್ತು. ಮೀರ್ ಸಾದಿಖ ಬ್ರಿಟೀಷರು ಟಿಪ್ಪುವಿನ  ಕೋಟೆಯೊಳಗಡೆ ಸುಲಭವಾಗಿ ನುಸುಳಿ ಬರಲು ಅನುವಾಗುವಂತೆ ಮಾಡಿಕೊಟ್ಟಿದ್ದ.(ಕೋಟೆಯೆಂದರೆ ಒಂದು ‍ಚಿಕ್ಕ ಆವರಣ ಗೋಡೆಯಲ್ಲ, ಅದು ಬೃಹತ್ ವಿಸ್ತೀರ್ಣದ ಆವರಣ ಕೋಟೆ) ಬ್ರಿಟೀಷರು ಕೋಟೆಯೊಳಗೆ ನುಗ್ಗಿ ಬರುವ ಹೊತ್ತಿಗೆ ಟಿಪ್ಪುವಿನ ಸನಿಹ ಇದ್ದದ್ದು ಆತನ ವೈದ್ಯ ರಾಜಾ ಖಾನ್ ಮತ್ತು ಓರ್ವ ಯುವ ಯೋಧ ಮಾತ್ರ. ಇದ್ದಕ್ಕಿದ್ದಂತೆ ಟಿಪ್ಪುವಿನ ಸನಿಹಕ್ಕೆ ತಲಪಿದ ಕೆಲವು ಬ್ರಿಟಿಷ್ ಯೋಧರು ಟಿಪ್ಪುವನ್ನು ನೇರವಾಗಿ ಕೊಚ್ಚಿ ಕೊಲ್ಲಬಯಸಿದ್ದರು. ಅವರು ಇನ್ನೇನು ಟಿಪ್ಪುವಿನ ಮೇಲೆರಗಬೇಕು ಎನ್ನುವಷ್ಟರಲ್ಲಿ ಮೈಸೂರಿನ ಆ ವೀರ ಯುವ ಯೋಧ ಮಿಂಚಿನ ವೇಗದಲ್ಲಿ ತಲವಾರು ಬೀಸಿ ಇಬ್ಬರು ಬ್ರಿಟಿಷ್ ಸೈನಿಕರ ರುಂಡ ಚೆಂಡಾಡಿಯೇ ಬಿಟ್ಟ. ಅಲ್ಲಿಗೆ ಬಂದಿದ್ದ ಉಳಿದ ಬ್ರಿಟಿಷ್ ಸೈನಿಕರು ಆ ಇಬ್ಬರನ್ನು ಅಲ್ಲೇ ಬಿಟ್ಟು ಓಟಕಿತ್ತರು. ಶಹಭಾಸ್ ಮಗನೇ, ಇಂದು ನನ್ನ ಇಡೀ ಸೈನ್ಯವೆಂದರೆ ನೀನೇ.. ನಿನ್ನ ಹೆಸರೇನು ಮಗನೇ ಎಂದು ಟಿಪ್ಪು ಪ್ರಶ್ನಿಸಿದ. ಅಷ್ಟರಲ್ಲಿ ದೂರದಿಂದ ಹಾರಿ ಬಂದ ಗುಂಡೊಂದು ಆ ವೀರಯೋಧನ ಎದೆ ಸೀಳಿತು. ಟಿಪ್ಪು ಉರುಳಿ ಬಿದ್ದ ಯೋಧನನ್ನು ತಬ್ಬಿಕೊಂಡ. ಆತ ಟಿಪ್ಪುವಿನ ಬಾಹುಗಳಲ್ಲೇ ಹುತಾತ್ಮನಾದ. ಆ ವೀರಯೋಧ ಟಿಪ್ಪುವಿಗೆ ದ್ರೋಹ ಬಗೆದಿದ್ದ ಅಂಚೆಮಂತ್ರಿ ಶ್ಯಾಮಯ್ಯನ ಮಗ.

ಮೀರ್ ಸಾದಿಖನ ಕೊರಳ್ ಕೊಯ್ದ ವೀರಯೋಧ ಶೇಖರ:
ಕೋಟೆಯ ತುಂಬಾ ಹಾಲಾಹಲವೆದ್ದಿತ್ತು. ಒಂದೆಡೆ ಯುದ್ಧದಲ್ಲಿ ಗಾಯಗೊಂಡ ವೀರಯೋಧ ಶೇಖರ ಮರಣಶಯ್ಯೆಯಲ್ಲಿದ್ದ. ಅಲ್ಲಿಗೆ ದ್ರೋಹಿ ಮೀರ್ ಸಾದಿಖ ದ್ರೋಹಿಗಳು ಮತ್ತು ಬ್ರಿಟಿಷ್ ಸೈನಿಕರೊಂದಿಗೆ ಬಂದ. ಯೋಧ ಶೇಖರನ್ನುದ್ದೇಶಿಸಿ ಮೀರ್ ಸಾದಿಖ ಪ್ರಶ್ನಿಸಿದ “ಸುಲ್ತಾನರೆಲ್ಲಿ”?
ಆತ ನೆಲದಲ್ಲಿ ಬಿದ್ದಲ್ಲಿಂದಲೇ ಕೈ ಸನ್ನೆಮಾಡಿ ಮೀರ್ ಸಾದಿಕನನ್ನು ಬಳಿ ಕರೆದ. ಶೇಖರ್ ಸುಲ್ತಾನರ ಸಂದೇಶ ನನ್ನ ಜೇಬಲ್ಲಿದೆ ತೆಗೆಯಿರಿ ಎಂದ. ಮೀರ್ ಸಾಧಿಕ್ ಶೇಖರನ ಜೇಬಿಗೆ ಕೈ ಹಾಕಲು ಬಾಗಿದ. ಆತ ತಡಮಾಡದೇ ಕೈಯಲ್ಲಿ ಬಿಗಿಯಾಗಿ ಹಿಡಿದಿದ್ದ ಖಡ್ಗದಿಂದ ದ್ರೋಹಿ ಮೀರ್ ಸಾದಿಖನ ಕೊರಳು ಕೊಯ್ದೇ ಬಿಟ್ಟ. ಮೀರ್ ಸಾದಿಕ್ ನಾಯಿಯಂತೆ ಸತ್ತು ಬಿದ್ದರೆ ವೀರಯೋಧ ಶೇಖರ್ ನೆಮ್ಮದಿಯಿಂದ ಕೊನೆಯುಸಿರೆಳೆದ.
ಇಂತಹ ಇನ್ನೂ ಅನೇಕ ಹಿಂದೂ ಯೋಧರು  ಕೊನೆಯುಸಿರಿನವರೆಗೂ ಹೋರಾಡಿ ರಣರಂಗದಲ್ಲಿ ವೀರಮರಣವನ್ನಪ್ಪಿದ್ದಾರೆ. ಸಂಘ ಪರಿವಾರ ಅಪಪ್ರಚಾರ ಮಾಡುತ್ತಿರುವಂತೆ ಆತ ‘ಹಿಂದೂ ವಿರೋಧಿ, ಮತಾಂಧ, ದೇವಾಲಯ ಭಂಜಕ, ಮತಾಂತರಿ ಟಿಪ್ಪು’ವೇ ಆಗಿದ್ದರೆ, ಅದು ಸಾಧ್ಯವಿರುತ್ತಿರಲಿಲ್ಲ. ಇಂತಹ ವೀರಯೋಧರ ಸಾಹಸಗಳು ಇತಿಹಾಸದ  ಪುಟಗಳಿಂದ ಮಾಸಿಹೋಗಿರುವುದು ಇತಿಹಾಸದ ಕ್ರೂರ ವ್ಯಂಗ್ಯವೇ ಸರಿ.

ಆಧಾರ : ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...