Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...