Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...