Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...