Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...