Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...