Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...