Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...