Homeಅಂತರಾಷ್ಟ್ರೀಯಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಫೇಸ್‌ಬುಕ್‌ನ ಭಾರತದ ಕಾರ್ಯನಿರ್ವಾಹಕಿ ಅಂಖಿ ದಾಸ್ ಮತ್ತು ಬಿಜೆಪಿ ಪ್ರೇಮದ ಕುರಿತು ಪ್ರಶ್ನೆಗಳೆದ್ದಿರುವ ಸಮಯದಲ್ಲಿ ಭಾರತದಲ್ಲಿ ಎದ್ದ ರಾಜಕೀಯ ವಿಷಯವನ್ನು ಫೇಸ್‌‌ಬುಕ್‌ ಹೇಗೆ ನಿಯಂತ್ರಿಸುತ್ತದೆ ಎಂಬ ಬಗ್ಗೆ ಅದರ ನೌಕರರು ಪ್ರಶ್ನೆ ಮಾಡಿದ್ದಾರೆ.

ಮುಸ್ಲಿಮರನ್ನು ದೇಶದ್ರೋಹಿಗಳು ಎಂದು ಕರೆದ ಬಿಜೆಪಿಯ ರಾಜಕಾರಣಿಯ ಪೋಸ್ಟ್‌‌ಗಳಿಗೆ ಕಂಪನಿಯ ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ದಾಸ್ ವಿರೋಧಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ ನಂತರ ವಿಶ್ವದ ಅತಿದೊಡ್ಡ ಸಾಮಾಜಿಕ ನೆಟ್‌ವರ್ಕ್ ಆದ ಫೇಸ್‌ಬುಕ್‌ ಭಾರತದಲ್ಲಿ ತೀವ್ರ ಟೀಕೆ ಎದುರಿಸುತ್ತಿದೆ.

ಫೇಸ್‌ಬುಕ್‌ ಈ ರೀತಿ ಒಂದು ಪಕ್ಷದ ಪರವಿರುವುದು ಸರಿಯೇ ಎಂದು ಅದರ ಉದ್ಯೋಗಿಗಳು ಪ್ರಶ್ನಿಸುತ್ತಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

11 ಫೇಸ್‌ಬುಕ್ ಉದ್ಯೋಗಿಗಳು ಫೇಸ್‌ಬುಕ್‌ನ ಆಂತರಿಕ ವೇದಿಕೆಯೊಂದರಲ್ಲಿ ನಾಯಕತ್ವಕ್ಕೆ ಪತ್ರ ಬರೆದಿದ್ದು, ‘ಫೇಸ್‌ಬುಕ್‌ ನಾಯಕತ್ವವು ಮುಸ್ಲಿಂ ವಿರೋಧಿ ಧರ್ಮಾಂಧತೆಯನ್ನು ಖಂಡಿಸಬೇಕು ಮತ್ತು ಹೆಚ್ಚಿನ ನೀತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

“ನಾವು ಇದರಲ್ಲಿ ಒಬ್ಬಂಟಿಯಾಗಿಲ್ಲ ಎಂದು ನಮಗೆ ತಿಳಿದಿದೆ. ಕಂಪನಿಯಾದ್ಯಂತದ ಉದ್ಯೋಗಿಗಳು ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಫೇಸ್‌ಬುಕ್‌ನಲ್ಲಿರುವ ಮುಸ್ಲಿಂ ಸಮುದಾಯವು ನಮ್ಮ ಪ್ರಶ್ನೆಗಳನ್ನು ಫೇಸ್‌ಬುಕ್ ನಾಯಕತ್ವದಿಂದ ಕೇಳಲು ಬಯಸುತ್ತದೆ.” ಎಂದು ಪತ್ರ ಉಲ್ಲೇಖಿಸಿದೆ. ಈ ಬಗ್ಗೆ ಫೇಸ್‌ಬುಕ್ ಮತ್ತು ಅಂಖಿ ದಾಸ್ ತಕ್ಷಣ ಸ್ಪಂದಿಸಿಲ್ಲ ಎಂದು ದಿ ವೈರ್ ಪತ್ರಿಕೆ‌ ಹೇಳಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ನಕಲಿ ಸುದ್ದಿ, ಪ್ರಭುತ್ವ ಬೆಂಬಲಿತ ತಪ್ಪು ಮಾಹಿತಿ ಅಭಿಯಾನಗಳು ಮತ್ತು ಹಿಂಸಾತ್ಮಕ ವಿಷಯಗಳನ್ನು ಹರಡುವ ವಿಷಯದಲ್ಲಿ ಫೇಸ್‌ಬುಕ್‌ ಇತ್ತೀಚಿನ ವರ್ಷಗಳಲ್ಲಿ ಮುಂಚೂಣಿಯಲ್ಲಿದೆ.

ಪ್ರಧಾನಿ ನರೇಂದ್ರೆ ಮೋದಿಯ ಪಕ್ಷವಾದ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಗೆ ಹತ್ತಿರವಿರುವ ರಾಜಕಾರಣಿಗಳಿಗೆ ದ್ವೇಷ-ಭಾಷಣ ನಿಯಮಗಳನ್ನು ಅನ್ವಯ ಮಾಡಿದರೆ “ದೇಶದಲ್ಲಿ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾಳುಮಾಡುತ್ತದೆ” ಎಂದು ಅಂಖಿ ದಾಸ್ ಸಿಬ್ಬಂದಿಗೆ ತಿಳಿಸಿದ್ದಾರೆ ಎಂದು ವಾಲ್‌ಸ್ಟ್ರೀಟ್‌ ಜರ್ನಲ್‌ ಲೇಖನ ಹೇಳಿತ್ತು.

ಈ ವರದಿಯ ನಂತರ ಫೇಸ್‌ಬುಕ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ಹಿಂಸಾಚಾರವನ್ನು ಪ್ರಚೋದಿಸುವ ಪೋಸ್ಟ್‌ಗಳ ವಿರುದ್ದ ನೀತಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದೆ.

“ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದೇವೆ ಮತ್ತು ನಿಯಮಿತವಾಗಿ ಇದರ ಬಗ್ಗೆ ಲೆಕ್ಕಪರಿಶೋಧನೆಯನ್ನು ನಡೆಸುತ್ತಿದ್ದೇವೆ” ಎಂದು ಭಾರತದಲ್ಲಿ 30 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್‌ಬುಕ್ ಹೇಳಿದೆ. ನಿಜವಾಗಿಯೂ ಏನಾಯಿತು ಎಂಬುದರ ಕುರಿತು ಪರಿಶೀಲನೆ ನಡೆಯುತ್ತದೆ ಎಂದು ಹೇಳಲಾಗಿದೆ.


ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...