Homeಅಂತರಾಷ್ಟ್ರೀಯಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಫೇಸ್‌ಬುಕ್‌ನ ಭಾರತದ ಕಾರ್ಯನಿರ್ವಾಹಕಿ ಅಂಖಿ ದಾಸ್ ಮತ್ತು ಬಿಜೆಪಿ ಪ್ರೇಮದ ಕುರಿತು ಪ್ರಶ್ನೆಗಳೆದ್ದಿರುವ ಸಮಯದಲ್ಲಿ ಭಾರತದಲ್ಲಿ ಎದ್ದ ರಾಜಕೀಯ ವಿಷಯವನ್ನು ಫೇಸ್‌‌ಬುಕ್‌ ಹೇಗೆ ನಿಯಂತ್ರಿಸುತ್ತದೆ ಎಂಬ ಬಗ್ಗೆ ಅದರ ನೌಕರರು ಪ್ರಶ್ನೆ ಮಾಡಿದ್ದಾರೆ.

ಮುಸ್ಲಿಮರನ್ನು ದೇಶದ್ರೋಹಿಗಳು ಎಂದು ಕರೆದ ಬಿಜೆಪಿಯ ರಾಜಕಾರಣಿಯ ಪೋಸ್ಟ್‌‌ಗಳಿಗೆ ಕಂಪನಿಯ ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ದಾಸ್ ವಿರೋಧಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ ನಂತರ ವಿಶ್ವದ ಅತಿದೊಡ್ಡ ಸಾಮಾಜಿಕ ನೆಟ್‌ವರ್ಕ್ ಆದ ಫೇಸ್‌ಬುಕ್‌ ಭಾರತದಲ್ಲಿ ತೀವ್ರ ಟೀಕೆ ಎದುರಿಸುತ್ತಿದೆ.

ಫೇಸ್‌ಬುಕ್‌ ಈ ರೀತಿ ಒಂದು ಪಕ್ಷದ ಪರವಿರುವುದು ಸರಿಯೇ ಎಂದು ಅದರ ಉದ್ಯೋಗಿಗಳು ಪ್ರಶ್ನಿಸುತ್ತಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

11 ಫೇಸ್‌ಬುಕ್ ಉದ್ಯೋಗಿಗಳು ಫೇಸ್‌ಬುಕ್‌ನ ಆಂತರಿಕ ವೇದಿಕೆಯೊಂದರಲ್ಲಿ ನಾಯಕತ್ವಕ್ಕೆ ಪತ್ರ ಬರೆದಿದ್ದು, ‘ಫೇಸ್‌ಬುಕ್‌ ನಾಯಕತ್ವವು ಮುಸ್ಲಿಂ ವಿರೋಧಿ ಧರ್ಮಾಂಧತೆಯನ್ನು ಖಂಡಿಸಬೇಕು ಮತ್ತು ಹೆಚ್ಚಿನ ನೀತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

“ನಾವು ಇದರಲ್ಲಿ ಒಬ್ಬಂಟಿಯಾಗಿಲ್ಲ ಎಂದು ನಮಗೆ ತಿಳಿದಿದೆ. ಕಂಪನಿಯಾದ್ಯಂತದ ಉದ್ಯೋಗಿಗಳು ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಫೇಸ್‌ಬುಕ್‌ನಲ್ಲಿರುವ ಮುಸ್ಲಿಂ ಸಮುದಾಯವು ನಮ್ಮ ಪ್ರಶ್ನೆಗಳನ್ನು ಫೇಸ್‌ಬುಕ್ ನಾಯಕತ್ವದಿಂದ ಕೇಳಲು ಬಯಸುತ್ತದೆ.” ಎಂದು ಪತ್ರ ಉಲ್ಲೇಖಿಸಿದೆ. ಈ ಬಗ್ಗೆ ಫೇಸ್‌ಬುಕ್ ಮತ್ತು ಅಂಖಿ ದಾಸ್ ತಕ್ಷಣ ಸ್ಪಂದಿಸಿಲ್ಲ ಎಂದು ದಿ ವೈರ್ ಪತ್ರಿಕೆ‌ ಹೇಳಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ನಕಲಿ ಸುದ್ದಿ, ಪ್ರಭುತ್ವ ಬೆಂಬಲಿತ ತಪ್ಪು ಮಾಹಿತಿ ಅಭಿಯಾನಗಳು ಮತ್ತು ಹಿಂಸಾತ್ಮಕ ವಿಷಯಗಳನ್ನು ಹರಡುವ ವಿಷಯದಲ್ಲಿ ಫೇಸ್‌ಬುಕ್‌ ಇತ್ತೀಚಿನ ವರ್ಷಗಳಲ್ಲಿ ಮುಂಚೂಣಿಯಲ್ಲಿದೆ.

ಪ್ರಧಾನಿ ನರೇಂದ್ರೆ ಮೋದಿಯ ಪಕ್ಷವಾದ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಗೆ ಹತ್ತಿರವಿರುವ ರಾಜಕಾರಣಿಗಳಿಗೆ ದ್ವೇಷ-ಭಾಷಣ ನಿಯಮಗಳನ್ನು ಅನ್ವಯ ಮಾಡಿದರೆ “ದೇಶದಲ್ಲಿ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾಳುಮಾಡುತ್ತದೆ” ಎಂದು ಅಂಖಿ ದಾಸ್ ಸಿಬ್ಬಂದಿಗೆ ತಿಳಿಸಿದ್ದಾರೆ ಎಂದು ವಾಲ್‌ಸ್ಟ್ರೀಟ್‌ ಜರ್ನಲ್‌ ಲೇಖನ ಹೇಳಿತ್ತು.

ಈ ವರದಿಯ ನಂತರ ಫೇಸ್‌ಬುಕ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ಹಿಂಸಾಚಾರವನ್ನು ಪ್ರಚೋದಿಸುವ ಪೋಸ್ಟ್‌ಗಳ ವಿರುದ್ದ ನೀತಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದೆ.

“ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದೇವೆ ಮತ್ತು ನಿಯಮಿತವಾಗಿ ಇದರ ಬಗ್ಗೆ ಲೆಕ್ಕಪರಿಶೋಧನೆಯನ್ನು ನಡೆಸುತ್ತಿದ್ದೇವೆ” ಎಂದು ಭಾರತದಲ್ಲಿ 30 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್‌ಬುಕ್ ಹೇಳಿದೆ. ನಿಜವಾಗಿಯೂ ಏನಾಯಿತು ಎಂಬುದರ ಕುರಿತು ಪರಿಶೀಲನೆ ನಡೆಯುತ್ತದೆ ಎಂದು ಹೇಳಲಾಗಿದೆ.


ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...