Homeಅಂತರಾಷ್ಟ್ರೀಯಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಫೇಸ್‌ಬುಕ್‌ನ ಭಾರತದ ಕಾರ್ಯನಿರ್ವಾಹಕಿ ಅಂಖಿ ದಾಸ್ ಮತ್ತು ಬಿಜೆಪಿ ಪ್ರೇಮದ ಕುರಿತು ಪ್ರಶ್ನೆಗಳೆದ್ದಿರುವ ಸಮಯದಲ್ಲಿ ಭಾರತದಲ್ಲಿ ಎದ್ದ ರಾಜಕೀಯ ವಿಷಯವನ್ನು ಫೇಸ್‌‌ಬುಕ್‌ ಹೇಗೆ ನಿಯಂತ್ರಿಸುತ್ತದೆ ಎಂಬ ಬಗ್ಗೆ ಅದರ ನೌಕರರು ಪ್ರಶ್ನೆ ಮಾಡಿದ್ದಾರೆ.

ಮುಸ್ಲಿಮರನ್ನು ದೇಶದ್ರೋಹಿಗಳು ಎಂದು ಕರೆದ ಬಿಜೆಪಿಯ ರಾಜಕಾರಣಿಯ ಪೋಸ್ಟ್‌‌ಗಳಿಗೆ ಕಂಪನಿಯ ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ದಾಸ್ ವಿರೋಧಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ ನಂತರ ವಿಶ್ವದ ಅತಿದೊಡ್ಡ ಸಾಮಾಜಿಕ ನೆಟ್‌ವರ್ಕ್ ಆದ ಫೇಸ್‌ಬುಕ್‌ ಭಾರತದಲ್ಲಿ ತೀವ್ರ ಟೀಕೆ ಎದುರಿಸುತ್ತಿದೆ.

ಫೇಸ್‌ಬುಕ್‌ ಈ ರೀತಿ ಒಂದು ಪಕ್ಷದ ಪರವಿರುವುದು ಸರಿಯೇ ಎಂದು ಅದರ ಉದ್ಯೋಗಿಗಳು ಪ್ರಶ್ನಿಸುತ್ತಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

11 ಫೇಸ್‌ಬುಕ್ ಉದ್ಯೋಗಿಗಳು ಫೇಸ್‌ಬುಕ್‌ನ ಆಂತರಿಕ ವೇದಿಕೆಯೊಂದರಲ್ಲಿ ನಾಯಕತ್ವಕ್ಕೆ ಪತ್ರ ಬರೆದಿದ್ದು, ‘ಫೇಸ್‌ಬುಕ್‌ ನಾಯಕತ್ವವು ಮುಸ್ಲಿಂ ವಿರೋಧಿ ಧರ್ಮಾಂಧತೆಯನ್ನು ಖಂಡಿಸಬೇಕು ಮತ್ತು ಹೆಚ್ಚಿನ ನೀತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

“ನಾವು ಇದರಲ್ಲಿ ಒಬ್ಬಂಟಿಯಾಗಿಲ್ಲ ಎಂದು ನಮಗೆ ತಿಳಿದಿದೆ. ಕಂಪನಿಯಾದ್ಯಂತದ ಉದ್ಯೋಗಿಗಳು ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಫೇಸ್‌ಬುಕ್‌ನಲ್ಲಿರುವ ಮುಸ್ಲಿಂ ಸಮುದಾಯವು ನಮ್ಮ ಪ್ರಶ್ನೆಗಳನ್ನು ಫೇಸ್‌ಬುಕ್ ನಾಯಕತ್ವದಿಂದ ಕೇಳಲು ಬಯಸುತ್ತದೆ.” ಎಂದು ಪತ್ರ ಉಲ್ಲೇಖಿಸಿದೆ. ಈ ಬಗ್ಗೆ ಫೇಸ್‌ಬುಕ್ ಮತ್ತು ಅಂಖಿ ದಾಸ್ ತಕ್ಷಣ ಸ್ಪಂದಿಸಿಲ್ಲ ಎಂದು ದಿ ವೈರ್ ಪತ್ರಿಕೆ‌ ಹೇಳಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ನಕಲಿ ಸುದ್ದಿ, ಪ್ರಭುತ್ವ ಬೆಂಬಲಿತ ತಪ್ಪು ಮಾಹಿತಿ ಅಭಿಯಾನಗಳು ಮತ್ತು ಹಿಂಸಾತ್ಮಕ ವಿಷಯಗಳನ್ನು ಹರಡುವ ವಿಷಯದಲ್ಲಿ ಫೇಸ್‌ಬುಕ್‌ ಇತ್ತೀಚಿನ ವರ್ಷಗಳಲ್ಲಿ ಮುಂಚೂಣಿಯಲ್ಲಿದೆ.

ಪ್ರಧಾನಿ ನರೇಂದ್ರೆ ಮೋದಿಯ ಪಕ್ಷವಾದ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಗೆ ಹತ್ತಿರವಿರುವ ರಾಜಕಾರಣಿಗಳಿಗೆ ದ್ವೇಷ-ಭಾಷಣ ನಿಯಮಗಳನ್ನು ಅನ್ವಯ ಮಾಡಿದರೆ “ದೇಶದಲ್ಲಿ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾಳುಮಾಡುತ್ತದೆ” ಎಂದು ಅಂಖಿ ದಾಸ್ ಸಿಬ್ಬಂದಿಗೆ ತಿಳಿಸಿದ್ದಾರೆ ಎಂದು ವಾಲ್‌ಸ್ಟ್ರೀಟ್‌ ಜರ್ನಲ್‌ ಲೇಖನ ಹೇಳಿತ್ತು.

ಈ ವರದಿಯ ನಂತರ ಫೇಸ್‌ಬುಕ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ಹಿಂಸಾಚಾರವನ್ನು ಪ್ರಚೋದಿಸುವ ಪೋಸ್ಟ್‌ಗಳ ವಿರುದ್ದ ನೀತಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದೆ.

“ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದೇವೆ ಮತ್ತು ನಿಯಮಿತವಾಗಿ ಇದರ ಬಗ್ಗೆ ಲೆಕ್ಕಪರಿಶೋಧನೆಯನ್ನು ನಡೆಸುತ್ತಿದ್ದೇವೆ” ಎಂದು ಭಾರತದಲ್ಲಿ 30 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್‌ಬುಕ್ ಹೇಳಿದೆ. ನಿಜವಾಗಿಯೂ ಏನಾಯಿತು ಎಂಬುದರ ಕುರಿತು ಪರಿಶೀಲನೆ ನಡೆಯುತ್ತದೆ ಎಂದು ಹೇಳಲಾಗಿದೆ.


ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....