Homeಮುಖಪುಟದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

- Advertisement -
- Advertisement -

ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷ ಭಾಷಣಕ್ಕೆ ಉದಾಹರಣೆಯಾಗಿ ದೆಹಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರ ದ್ವೇಷ ಭಾಷಣವನ್ನು ಫೇಸ್‌ಬುಕ್ ಸಿಇಒ ಮಾರ್ಕ್ ಜುಕೆಬರ್ಗ್ ಉಲ್ಲೇಖವು, ಗಲಭಗೆ ಬಿಜೆಪಿ ರಾಜಕಾರಣಿಗಳು ಕಾರಣವೆಂಬ ಆರೋಪವನ್ನು ದೆಹಲಿ ಪೊಲೀಸರು ನಿರಾಕರಿಸಿರುವ ಚರ್ಚೆಯನ್ನು ಮತ್ತೆ ಮುನ್ನಲೆಗೆ ತರುವ ಸಾಧ್ಯತೆಯಿದೆ.

ಫೆಬ್ರವರಿಯಲ್ಲಿ ನಡೆದ ಈ ಗಲಭೆಯಲ್ಲಿ 50 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು.

ಜುಕರ್‌ಬರ್ಗ್ ಜೂನ್ 2 ರಂದು ಫೇಸ್‌ಬುಕ್ ಉದ್ಯೋಗಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆಯ ನಿಯಮ ರೂಪಿಸುವ ಕುರಿತು ಮಾತನಾಡುತ್ತಿದ್ದರು. ಅವರು ನೇರವಾಗಿ ಕಪಿಲ್ ಮಿಶ್ರಾ ಎಂದು ಹೆಸರಿಸದಿದ್ದರೂ, ಅವರು ಉಲ್ಲೇಖಿಸಿದ ಉಲ್ಲೇಖವು ಅವರು ಯಾರನ್ನು ಉದ್ದೇಶಿಸಿ ಹೇಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಮೇ 25 ರಂದು ಮಿನ್ನೇಸೋಟದಲ್ಲಿ ಆಫ್ರಿಕನ್ ಅಮೆರಿಕನ್ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಹತ್ಯೆಯ ನಂತರ ಅಮೆರಿಕಾದಲ್ಲಿ ಭುಗಿಲೆದ್ದಿರುವ ’ಬ್ಲ್ಯಾಕ್‌ಲೈವ್ಸ್‌ಮ್ಯಾಟರ್’ ಬೃಹತ್ ಪ್ರತಿಭಟನೆಗಳಿಂದಾಗಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಖಂಡಿಸಲು ಅಥವಾ ತರಾಟೆಗೆ ಪಡೆಯಲು ಫೇಸ್‌ಬುಕ್ ವಿಫಲವಾಗಿದೆ ಎಂದು ಟೀಕಿಸಲ್ಪಟ್ಟ ಹಿನ್ನೆಲೆಯಲ್ಲಿ ಜುಕರ್‌ಬರ್ಗ್ ಅವರ ಸಂವಹನ ನಡೆಯಿತು.

ಆನ್‌ಲೈನ್ ಸಭೆಯು ಟ್ರಂಪ್‌ ಅವರ ಫೇಸ್‌ಬುಕ್ ಪೋಸ್ಟ್‌ಗಳನ್ನು ಚರ್ಚಿಸಿತು, ಅದರಲ್ಲಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಹೇಳುವ ಮೂಲಕ ಪ್ರತಿಭಟನೆಯ ಸಮಯದಲ್ಲಿ ಅಗ್ನಿಸ್ಪರ್ಶ ಮತ್ತು ಹಿಂಸಾಚಾರದಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಕರೆ ನೀಡಿದರು.

ಟ್ವಿಟರ್‌ನಂತಹ ಇತರ ಸೈಟ್‌ಗಳು ಅಧ್ಯಕ್ಷರ ಪೋಸ್ಟ್‌ಗಳ ಜೊತೆಗೆ ಎಚ್ಚರಿಕೆ ಲೇಬಲ್‌ಗಳನ್ನು ಹಾಕಿದಂತೆಯೇ ಪೇಸ್‌ಬುಕ್‌ನಲ್ಲೂ ಈ ಸಾಧ್ಯತೆಯ ಬಗ್ಗೆ ಸಭೆಯಲ್ಲಿ ಚರ್ಚಿಸಿದೆ.

ಫೆಬ್ರವರಿ 24-25 ರ ಟ್ರಂಪ್ ಭಾರತ ಪ್ರವಾಸದ ಸಂದರ್ಭದಲ್ಲಿ ಕಪಿಲ್ ಮಿಶ್ರಾ, ಈಶಾನ್ಯ ದೆಹಲಿಯ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಾ “ಡೊನಾಲ್ಡ್ ಟ್ರಂಪ್ ಭಾರತದಲ್ಲಿ ಇರುವವರೆಗೂ ನಾವು ಶಾಂತಿಯನ್ನು ಕಾಪಾಡುತ್ತೇವೆ. ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರ ಮಾತನ್ನು ಸಹ ಕೇಳುವುದಿಲ್ಲ” ಎಂದಿದ್ದರು.


ಓದಿ:  ಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...