Homeಮುಖಪುಟಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೆಫ್ಟಿನೆಂಟ್ ಗವರ್ನರ್‌ ಮೂಲಕ ದೆಹಲಿ ಸರ್ಕಾರಕ್ಕೆ ಮೂಗುದಾರ ಹಾಕುವ ಕೇಂದ್ರದ ಪ್ರಯತ್ನಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದ್ದು, ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿದೆ.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಕೋರ್ಟ್ ಹೇಳಿದೆ.

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಹೊಂದಿದ್ದರೂ, ಅವರು ಇಡೀ ದೆಹಲಿ ಸರ್ಕಾರದ ಮೇಲೆ ಅಧಿಕಾರವನ್ನು ಹೊಂದಿದ್ದಾರೆಂದು ಅರ್ಥವಲ್ಲ. ಹಾಗೇನಾದರೂ ಇದ್ದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶಕ್ಕೆ ಅರ್ಥವಿಲ್ಲದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿಲ್ಲದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರ ಮೇಲಿನ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ. ಒಬ್ಬ ಅಧಿಕಾರಿ ಸರ್ಕಾರಕ್ಕೆ ಸ್ಪಂದಿಸದಿದ್ದರೆ, ಸಾಮೂಹಿಕ ಜವಾಬ್ದಾರಿ ದುರ್ಬಲಗೊಳ್ಳುತ್ತದೆ” ಎಂದು ಆತಂಕ ವ್ಯಕ್ತಪಡಿಸಿದೆ.

ದೆಹಲಿಯ ಆಡಳಿತಾರೂಢ ಎಎಪಿ 2013ರಿಂದಲೂ ಇಲ್ಲಿ ಅಧಿಕಾರದಲ್ಲಿದೆ. ಆದರೆ ವಿವಿಧ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ವರ್ಷಗಳ ಕಾಲ ಅದು ಗುದ್ದಾಟವನ್ನು ನಡೆಸುತ್ತಲೇ ಬರಲಾಗಿದೆ.

“ಇದು ದೆಹಲಿಗೆ ದೊರೆತ ಐತಿಹಾಸಿಕ ಗೆಲುವಾಗಿದೆ. ನಾವು ಎಂಟು ವರ್ಷಗಳಿಂದ ಹೋರಾಡುತ್ತಿದ್ದೇವೆ. ಅವರು (ಕೇಂದ್ರ) ಉದ್ದೇಶಪೂರ್ವಕವಾಗಿ ತಮ್ಮ ನೇಮಕಗಳನ್ನು ಬಳಸಿಕೊಂಡು ನಮ್ಮ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿದರು. ನನ್ನ ಎರಡೂ ಕೈಗಳನ್ನು ಕಟ್ಟಿ ನದಿಗೆ ತಳ್ಳಲಾಯಿತು, ಆದರೆ ದೇವರ ಕೃಪೆಯಿಂದ ನಾನು ಈಜಾಡುತ್ತಿದ್ದೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ಶೀಘ್ರದಲ್ಲಿಯೇ ಭ್ರಷ್ಟ ಅಧಿಕಾರಿಗಳನ್ನು ತೆಗೆದು ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. “ನಮ್ಮ ಕೆಲಸವು ಈಗ 10 ಪಟ್ಟು ವೇಗದಲ್ಲಿ ಪುನರಾರಂಭಗೊಳ್ಳುತ್ತದೆ” ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...