Homeಮುಖಪುಟಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೆಫ್ಟಿನೆಂಟ್ ಗವರ್ನರ್‌ ಮೂಲಕ ದೆಹಲಿ ಸರ್ಕಾರಕ್ಕೆ ಮೂಗುದಾರ ಹಾಕುವ ಕೇಂದ್ರದ ಪ್ರಯತ್ನಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದ್ದು, ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿದೆ.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಕೋರ್ಟ್ ಹೇಳಿದೆ.

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಹೊಂದಿದ್ದರೂ, ಅವರು ಇಡೀ ದೆಹಲಿ ಸರ್ಕಾರದ ಮೇಲೆ ಅಧಿಕಾರವನ್ನು ಹೊಂದಿದ್ದಾರೆಂದು ಅರ್ಥವಲ್ಲ. ಹಾಗೇನಾದರೂ ಇದ್ದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶಕ್ಕೆ ಅರ್ಥವಿಲ್ಲದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿಲ್ಲದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರ ಮೇಲಿನ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ. ಒಬ್ಬ ಅಧಿಕಾರಿ ಸರ್ಕಾರಕ್ಕೆ ಸ್ಪಂದಿಸದಿದ್ದರೆ, ಸಾಮೂಹಿಕ ಜವಾಬ್ದಾರಿ ದುರ್ಬಲಗೊಳ್ಳುತ್ತದೆ” ಎಂದು ಆತಂಕ ವ್ಯಕ್ತಪಡಿಸಿದೆ.

ದೆಹಲಿಯ ಆಡಳಿತಾರೂಢ ಎಎಪಿ 2013ರಿಂದಲೂ ಇಲ್ಲಿ ಅಧಿಕಾರದಲ್ಲಿದೆ. ಆದರೆ ವಿವಿಧ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ವರ್ಷಗಳ ಕಾಲ ಅದು ಗುದ್ದಾಟವನ್ನು ನಡೆಸುತ್ತಲೇ ಬರಲಾಗಿದೆ.

“ಇದು ದೆಹಲಿಗೆ ದೊರೆತ ಐತಿಹಾಸಿಕ ಗೆಲುವಾಗಿದೆ. ನಾವು ಎಂಟು ವರ್ಷಗಳಿಂದ ಹೋರಾಡುತ್ತಿದ್ದೇವೆ. ಅವರು (ಕೇಂದ್ರ) ಉದ್ದೇಶಪೂರ್ವಕವಾಗಿ ತಮ್ಮ ನೇಮಕಗಳನ್ನು ಬಳಸಿಕೊಂಡು ನಮ್ಮ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿದರು. ನನ್ನ ಎರಡೂ ಕೈಗಳನ್ನು ಕಟ್ಟಿ ನದಿಗೆ ತಳ್ಳಲಾಯಿತು, ಆದರೆ ದೇವರ ಕೃಪೆಯಿಂದ ನಾನು ಈಜಾಡುತ್ತಿದ್ದೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ಶೀಘ್ರದಲ್ಲಿಯೇ ಭ್ರಷ್ಟ ಅಧಿಕಾರಿಗಳನ್ನು ತೆಗೆದು ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. “ನಮ್ಮ ಕೆಲಸವು ಈಗ 10 ಪಟ್ಟು ವೇಗದಲ್ಲಿ ಪುನರಾರಂಭಗೊಳ್ಳುತ್ತದೆ” ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...