Homeಮುಖಪುಟಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೆಫ್ಟಿನೆಂಟ್ ಗವರ್ನರ್‌ ಮೂಲಕ ದೆಹಲಿ ಸರ್ಕಾರಕ್ಕೆ ಮೂಗುದಾರ ಹಾಕುವ ಕೇಂದ್ರದ ಪ್ರಯತ್ನಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದ್ದು, ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿದೆ.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಕೋರ್ಟ್ ಹೇಳಿದೆ.

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಹೊಂದಿದ್ದರೂ, ಅವರು ಇಡೀ ದೆಹಲಿ ಸರ್ಕಾರದ ಮೇಲೆ ಅಧಿಕಾರವನ್ನು ಹೊಂದಿದ್ದಾರೆಂದು ಅರ್ಥವಲ್ಲ. ಹಾಗೇನಾದರೂ ಇದ್ದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶಕ್ಕೆ ಅರ್ಥವಿಲ್ಲದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿಲ್ಲದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರ ಮೇಲಿನ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ. ಒಬ್ಬ ಅಧಿಕಾರಿ ಸರ್ಕಾರಕ್ಕೆ ಸ್ಪಂದಿಸದಿದ್ದರೆ, ಸಾಮೂಹಿಕ ಜವಾಬ್ದಾರಿ ದುರ್ಬಲಗೊಳ್ಳುತ್ತದೆ” ಎಂದು ಆತಂಕ ವ್ಯಕ್ತಪಡಿಸಿದೆ.

ದೆಹಲಿಯ ಆಡಳಿತಾರೂಢ ಎಎಪಿ 2013ರಿಂದಲೂ ಇಲ್ಲಿ ಅಧಿಕಾರದಲ್ಲಿದೆ. ಆದರೆ ವಿವಿಧ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ವರ್ಷಗಳ ಕಾಲ ಅದು ಗುದ್ದಾಟವನ್ನು ನಡೆಸುತ್ತಲೇ ಬರಲಾಗಿದೆ.

“ಇದು ದೆಹಲಿಗೆ ದೊರೆತ ಐತಿಹಾಸಿಕ ಗೆಲುವಾಗಿದೆ. ನಾವು ಎಂಟು ವರ್ಷಗಳಿಂದ ಹೋರಾಡುತ್ತಿದ್ದೇವೆ. ಅವರು (ಕೇಂದ್ರ) ಉದ್ದೇಶಪೂರ್ವಕವಾಗಿ ತಮ್ಮ ನೇಮಕಗಳನ್ನು ಬಳಸಿಕೊಂಡು ನಮ್ಮ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿದರು. ನನ್ನ ಎರಡೂ ಕೈಗಳನ್ನು ಕಟ್ಟಿ ನದಿಗೆ ತಳ್ಳಲಾಯಿತು, ಆದರೆ ದೇವರ ಕೃಪೆಯಿಂದ ನಾನು ಈಜಾಡುತ್ತಿದ್ದೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ಶೀಘ್ರದಲ್ಲಿಯೇ ಭ್ರಷ್ಟ ಅಧಿಕಾರಿಗಳನ್ನು ತೆಗೆದು ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. “ನಮ್ಮ ಕೆಲಸವು ಈಗ 10 ಪಟ್ಟು ವೇಗದಲ್ಲಿ ಪುನರಾರಂಭಗೊಳ್ಳುತ್ತದೆ” ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...