Homeಮುಖಪುಟಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

- Advertisement -
- Advertisement -

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಅಮೆರಿಕದಲ್ಲಿ ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ ಆ ದೇಶದಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿದೆ. ಇದರ ಬೆನ್ನಿಗೆ ಇದೇ ರೀತಿಯ ಮತ್ತೊಂದು ಕಹಿ ಘಟನೆ ಭಾರತದ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಜೋಧಪುರದ ಪೊಲೀಸರು ಒಬ್ಬ ವ್ಯಕ್ತಿಯನ್ನು ನೆಲದ ಮೇಲೆ ಬೀಳಿಸಿ ತಮ್ಮ ಮೊಣಕಾಲನ್ನು ಕುತ್ತಿಗೆಗೆ ಒತ್ತಿ ಹಿಡಿಯುವುದನ್ನು ಕಾಣಬಹುದಾಗಿದೆ. ಆನಂತರ ಆ ವ್ಯಕ್ತಿಗೆ ಪೊಲೀಸರು ಹಲ್ಲೆ ಮಾಡಿರುವುದು ದಾಖಲಾಗಿದೆ. ಈ ವಿಡಿಯೋವನ್ನು ಇದೀಗ ಜಾರ್ಜ್ ಫ್ಲಾಯ್ಡ್ ಘಟನೆಗೆ ಹೋಲಿಸಿ ಜನ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಘಟನೆಯ ಹಿನ್ನೆಲೆ

ಗುರುವಾರ ಮುಖೇಶ್ ಕುಮಾರ್ ಪ್ರಜಾಪತ್ ಎಂಬ ವ್ಯಕ್ತಿಯೊಬ್ಬ ಜೋಧಪುರ ನಗರದಲ್ಲಿ ಮಾಸ್ಕ್ ಹಾಕಿಕೊಳ್ಳದೆ ಓಡಾಡಿದ್ದಾನೆ. ಈ ಕಾರಣಕ್ಕೆ ಆತನನ್ನು ವಿಚಾರಣೆ ನಡೆಸುವ ವೇಳೆ ಪೊಲೀಸರು ಕಟುವಾಗಿ ವರ್ತಿಸಿದ್ದು ನೆಲಕ್ಕೆ ಬೀಳಿಸಿ ಕತ್ತಿನ ಮೇಲೆ ಮೊಣಕಾಲಿಟ್ಟು ವಿಚಾರಣೆ ನಡೆಸಿದ್ದಾರೆ. ಆದರೆ, ಈ ಘಟನೆ ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ವೀಡಿಯೊವನ್ನು ನೆನಪಿಸುವಂತಿದೆ.

ಪ್ರಕರಣದ ಕುರಿತು ಸ್ಪಷ್ಟಪಡಿಸಿರುವ ದೇವ್ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೋಮ್ಕರನ್, “ಕೊರೋನಾ ಭೀತಿಯ ನಡುವೆಯೂ ಮುಕೇಶ್ ಕುಮಾರ್ ಎಂಬ ವ್ಯಕ್ತಿ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೆ ತಿರುಗಾಡುತ್ತಿದ್ದ. ಪೊಲೀಸರು ಆತನನ್ನು ವಿಚಾರಣೆ ನಡೆಸುವ ವೇಳೆ ಆತ ಆಕ್ರಮಣಕಾರಿಯಾಗಿ ವರ್ತಿಸಿದ್ದ. ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಪೊಲೀಸರು ಸಹ ಬಲವಂತವಾಗಿ ಆತನನ್ನು ಬಂಧಿಸಿದ್ದಾರೆ. ಈ ಘಟನೆ ಗುರುವಾರ ಜೋಧಪುರ ನಗರದಲ್ಲಿ ನಡೆದಿದ್ದು ಜನ ಇದನ್ನು ವಿಡಿಯೋ ಮಾಡಿದ್ದಾರೆ. ಮುಖರ್ಜಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ “ಸಾಂಕ್ರಾಮಿಕ ಕಾಯ್ದೆಯ” ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಆತನನ್ನು ಇಂದು ನ್ಯಾಯಾಲಯಕ್ಕೂ ಹಾಜರುಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.

ಒಟ್ಟಾರೆ ಜೋಧಪುರದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಪೋಲೀಸ್ ತನ್ನ ಮೊಣಕಾಲಿನಿಂದ ಕುತ್ತಿಗೆಯನ್ನು ಒತ್ತುತ್ತಿದ್ದರೆ, ಇತರ ಇಬ್ಬರು ಪೊಲೀಸರು ಯುವಕನ ಕಾಲುಗಳನ್ನು ಹಿಡಿದಿರುವುದು ಸ್ಪಷ್ಟವಾಗಿದೆ. ಅದೃಷ್ಟವಶಾತ್ ಆತನ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ.

ಜಾರ್ಜ್ ಫ್ಲಾಯ್ಡ್ ಎಂಬ 46 ವರ್ಷದ ಕಪ್ಪು ಜನಾಂಗದ ವ್ಯಕ್ತಿ ಮೇ 25 ರಂದು ಅಮೆರಿಕದ ಮಿನ್ನಿಯಾಪೋಲಿಸ್ ಅಂಗಡಿಯೊಂದರ ಹೊರಗೆ ಪೊಲೀಸರಿಂದ ಬಂಧಿಸಲ್ಪಟ್ಟ. ಆದರೆ, ಪೊಲೀಸರ ಅಮಾನವೀಯ ವರ್ತನೆಯಿಂದಾಗಿ ಆತ ನಡು ರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದ. ಈ ಘಟನೆ ಇದೀಗ ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಜೋಧಪುರದಲ್ಲಿ ಘಟನೆ ಸಹ ಸಾಮಾಜಿಕ ಜಾಲತಾನದಲ್ಲಿ ಭಾರೀ ಸದ್ದು ಮಾಡುತ್ತಿದೆ.


ಇದನ್ನೂ ಓದಿ: ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...