Homeಮುಖಪುಟಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

- Advertisement -
- Advertisement -

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಅಮೆರಿಕದಲ್ಲಿ ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ ಆ ದೇಶದಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿದೆ. ಇದರ ಬೆನ್ನಿಗೆ ಇದೇ ರೀತಿಯ ಮತ್ತೊಂದು ಕಹಿ ಘಟನೆ ಭಾರತದ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಜೋಧಪುರದ ಪೊಲೀಸರು ಒಬ್ಬ ವ್ಯಕ್ತಿಯನ್ನು ನೆಲದ ಮೇಲೆ ಬೀಳಿಸಿ ತಮ್ಮ ಮೊಣಕಾಲನ್ನು ಕುತ್ತಿಗೆಗೆ ಒತ್ತಿ ಹಿಡಿಯುವುದನ್ನು ಕಾಣಬಹುದಾಗಿದೆ. ಆನಂತರ ಆ ವ್ಯಕ್ತಿಗೆ ಪೊಲೀಸರು ಹಲ್ಲೆ ಮಾಡಿರುವುದು ದಾಖಲಾಗಿದೆ. ಈ ವಿಡಿಯೋವನ್ನು ಇದೀಗ ಜಾರ್ಜ್ ಫ್ಲಾಯ್ಡ್ ಘಟನೆಗೆ ಹೋಲಿಸಿ ಜನ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಘಟನೆಯ ಹಿನ್ನೆಲೆ

ಗುರುವಾರ ಮುಖೇಶ್ ಕುಮಾರ್ ಪ್ರಜಾಪತ್ ಎಂಬ ವ್ಯಕ್ತಿಯೊಬ್ಬ ಜೋಧಪುರ ನಗರದಲ್ಲಿ ಮಾಸ್ಕ್ ಹಾಕಿಕೊಳ್ಳದೆ ಓಡಾಡಿದ್ದಾನೆ. ಈ ಕಾರಣಕ್ಕೆ ಆತನನ್ನು ವಿಚಾರಣೆ ನಡೆಸುವ ವೇಳೆ ಪೊಲೀಸರು ಕಟುವಾಗಿ ವರ್ತಿಸಿದ್ದು ನೆಲಕ್ಕೆ ಬೀಳಿಸಿ ಕತ್ತಿನ ಮೇಲೆ ಮೊಣಕಾಲಿಟ್ಟು ವಿಚಾರಣೆ ನಡೆಸಿದ್ದಾರೆ. ಆದರೆ, ಈ ಘಟನೆ ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ವೀಡಿಯೊವನ್ನು ನೆನಪಿಸುವಂತಿದೆ.

ಪ್ರಕರಣದ ಕುರಿತು ಸ್ಪಷ್ಟಪಡಿಸಿರುವ ದೇವ್ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೋಮ್ಕರನ್, “ಕೊರೋನಾ ಭೀತಿಯ ನಡುವೆಯೂ ಮುಕೇಶ್ ಕುಮಾರ್ ಎಂಬ ವ್ಯಕ್ತಿ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೆ ತಿರುಗಾಡುತ್ತಿದ್ದ. ಪೊಲೀಸರು ಆತನನ್ನು ವಿಚಾರಣೆ ನಡೆಸುವ ವೇಳೆ ಆತ ಆಕ್ರಮಣಕಾರಿಯಾಗಿ ವರ್ತಿಸಿದ್ದ. ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಪೊಲೀಸರು ಸಹ ಬಲವಂತವಾಗಿ ಆತನನ್ನು ಬಂಧಿಸಿದ್ದಾರೆ. ಈ ಘಟನೆ ಗುರುವಾರ ಜೋಧಪುರ ನಗರದಲ್ಲಿ ನಡೆದಿದ್ದು ಜನ ಇದನ್ನು ವಿಡಿಯೋ ಮಾಡಿದ್ದಾರೆ. ಮುಖರ್ಜಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ “ಸಾಂಕ್ರಾಮಿಕ ಕಾಯ್ದೆಯ” ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಆತನನ್ನು ಇಂದು ನ್ಯಾಯಾಲಯಕ್ಕೂ ಹಾಜರುಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.

ಒಟ್ಟಾರೆ ಜೋಧಪುರದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಪೋಲೀಸ್ ತನ್ನ ಮೊಣಕಾಲಿನಿಂದ ಕುತ್ತಿಗೆಯನ್ನು ಒತ್ತುತ್ತಿದ್ದರೆ, ಇತರ ಇಬ್ಬರು ಪೊಲೀಸರು ಯುವಕನ ಕಾಲುಗಳನ್ನು ಹಿಡಿದಿರುವುದು ಸ್ಪಷ್ಟವಾಗಿದೆ. ಅದೃಷ್ಟವಶಾತ್ ಆತನ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ.

ಜಾರ್ಜ್ ಫ್ಲಾಯ್ಡ್ ಎಂಬ 46 ವರ್ಷದ ಕಪ್ಪು ಜನಾಂಗದ ವ್ಯಕ್ತಿ ಮೇ 25 ರಂದು ಅಮೆರಿಕದ ಮಿನ್ನಿಯಾಪೋಲಿಸ್ ಅಂಗಡಿಯೊಂದರ ಹೊರಗೆ ಪೊಲೀಸರಿಂದ ಬಂಧಿಸಲ್ಪಟ್ಟ. ಆದರೆ, ಪೊಲೀಸರ ಅಮಾನವೀಯ ವರ್ತನೆಯಿಂದಾಗಿ ಆತ ನಡು ರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದ. ಈ ಘಟನೆ ಇದೀಗ ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಜೋಧಪುರದಲ್ಲಿ ಘಟನೆ ಸಹ ಸಾಮಾಜಿಕ ಜಾಲತಾನದಲ್ಲಿ ಭಾರೀ ಸದ್ದು ಮಾಡುತ್ತಿದೆ.


ಇದನ್ನೂ ಓದಿ: ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...