Homeಮುಖಪುಟಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

- Advertisement -
- Advertisement -

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಅಮೆರಿಕದಲ್ಲಿ ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ ಆ ದೇಶದಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿದೆ. ಇದರ ಬೆನ್ನಿಗೆ ಇದೇ ರೀತಿಯ ಮತ್ತೊಂದು ಕಹಿ ಘಟನೆ ಭಾರತದ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಜೋಧಪುರದ ಪೊಲೀಸರು ಒಬ್ಬ ವ್ಯಕ್ತಿಯನ್ನು ನೆಲದ ಮೇಲೆ ಬೀಳಿಸಿ ತಮ್ಮ ಮೊಣಕಾಲನ್ನು ಕುತ್ತಿಗೆಗೆ ಒತ್ತಿ ಹಿಡಿಯುವುದನ್ನು ಕಾಣಬಹುದಾಗಿದೆ. ಆನಂತರ ಆ ವ್ಯಕ್ತಿಗೆ ಪೊಲೀಸರು ಹಲ್ಲೆ ಮಾಡಿರುವುದು ದಾಖಲಾಗಿದೆ. ಈ ವಿಡಿಯೋವನ್ನು ಇದೀಗ ಜಾರ್ಜ್ ಫ್ಲಾಯ್ಡ್ ಘಟನೆಗೆ ಹೋಲಿಸಿ ಜನ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಘಟನೆಯ ಹಿನ್ನೆಲೆ

ಗುರುವಾರ ಮುಖೇಶ್ ಕುಮಾರ್ ಪ್ರಜಾಪತ್ ಎಂಬ ವ್ಯಕ್ತಿಯೊಬ್ಬ ಜೋಧಪುರ ನಗರದಲ್ಲಿ ಮಾಸ್ಕ್ ಹಾಕಿಕೊಳ್ಳದೆ ಓಡಾಡಿದ್ದಾನೆ. ಈ ಕಾರಣಕ್ಕೆ ಆತನನ್ನು ವಿಚಾರಣೆ ನಡೆಸುವ ವೇಳೆ ಪೊಲೀಸರು ಕಟುವಾಗಿ ವರ್ತಿಸಿದ್ದು ನೆಲಕ್ಕೆ ಬೀಳಿಸಿ ಕತ್ತಿನ ಮೇಲೆ ಮೊಣಕಾಲಿಟ್ಟು ವಿಚಾರಣೆ ನಡೆಸಿದ್ದಾರೆ. ಆದರೆ, ಈ ಘಟನೆ ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ವೀಡಿಯೊವನ್ನು ನೆನಪಿಸುವಂತಿದೆ.

ಪ್ರಕರಣದ ಕುರಿತು ಸ್ಪಷ್ಟಪಡಿಸಿರುವ ದೇವ್ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೋಮ್ಕರನ್, “ಕೊರೋನಾ ಭೀತಿಯ ನಡುವೆಯೂ ಮುಕೇಶ್ ಕುಮಾರ್ ಎಂಬ ವ್ಯಕ್ತಿ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೆ ತಿರುಗಾಡುತ್ತಿದ್ದ. ಪೊಲೀಸರು ಆತನನ್ನು ವಿಚಾರಣೆ ನಡೆಸುವ ವೇಳೆ ಆತ ಆಕ್ರಮಣಕಾರಿಯಾಗಿ ವರ್ತಿಸಿದ್ದ. ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಪೊಲೀಸರು ಸಹ ಬಲವಂತವಾಗಿ ಆತನನ್ನು ಬಂಧಿಸಿದ್ದಾರೆ. ಈ ಘಟನೆ ಗುರುವಾರ ಜೋಧಪುರ ನಗರದಲ್ಲಿ ನಡೆದಿದ್ದು ಜನ ಇದನ್ನು ವಿಡಿಯೋ ಮಾಡಿದ್ದಾರೆ. ಮುಖರ್ಜಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ “ಸಾಂಕ್ರಾಮಿಕ ಕಾಯ್ದೆಯ” ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಆತನನ್ನು ಇಂದು ನ್ಯಾಯಾಲಯಕ್ಕೂ ಹಾಜರುಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.

ಒಟ್ಟಾರೆ ಜೋಧಪುರದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಪೋಲೀಸ್ ತನ್ನ ಮೊಣಕಾಲಿನಿಂದ ಕುತ್ತಿಗೆಯನ್ನು ಒತ್ತುತ್ತಿದ್ದರೆ, ಇತರ ಇಬ್ಬರು ಪೊಲೀಸರು ಯುವಕನ ಕಾಲುಗಳನ್ನು ಹಿಡಿದಿರುವುದು ಸ್ಪಷ್ಟವಾಗಿದೆ. ಅದೃಷ್ಟವಶಾತ್ ಆತನ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ.

ಜಾರ್ಜ್ ಫ್ಲಾಯ್ಡ್ ಎಂಬ 46 ವರ್ಷದ ಕಪ್ಪು ಜನಾಂಗದ ವ್ಯಕ್ತಿ ಮೇ 25 ರಂದು ಅಮೆರಿಕದ ಮಿನ್ನಿಯಾಪೋಲಿಸ್ ಅಂಗಡಿಯೊಂದರ ಹೊರಗೆ ಪೊಲೀಸರಿಂದ ಬಂಧಿಸಲ್ಪಟ್ಟ. ಆದರೆ, ಪೊಲೀಸರ ಅಮಾನವೀಯ ವರ್ತನೆಯಿಂದಾಗಿ ಆತ ನಡು ರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದ. ಈ ಘಟನೆ ಇದೀಗ ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಜೋಧಪುರದಲ್ಲಿ ಘಟನೆ ಸಹ ಸಾಮಾಜಿಕ ಜಾಲತಾನದಲ್ಲಿ ಭಾರೀ ಸದ್ದು ಮಾಡುತ್ತಿದೆ.


ಇದನ್ನೂ ಓದಿ: ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...