Homeರಾಷ್ಟ್ರೀಯ‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ (ಡಿಯು) ಪ್ರೊಫೆಸರ್, ‘ಅಂಬೇಡ್ಕರ್‌ ನಾಮ’ ಸಂಪಾದಕ ರತನ್ ಲಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಆದರೆ ಶನಿವಾರ, ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ಅವರ ಬಂಧನದ ಬಗ್ಗೆ ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ದೃಢಪಡಿಸಿದ್ದಾರೆ. “ಪ್ರೊಫೆಸರ್‌‌ ರತನ್ ಅವರು ಮಂಗಳವಾರ ಕಟ್ಟಡವೊಂದರ ಫೋಟೋವನ್ನು ಪೋಸ್ಟ್ ಮಾಡಿ ಆಕ್ಷೇಪಾರ್ಹ ಕಾಮೆಂಟ್‌‌ಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದ್ದು, ತನಿಖೆಯನ್ನು ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರತನ್‌‌ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್‌ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ವಕೀಲ ವಿನೀತ್ ಜಿಂದಾಲ್ ಅವರು ತನ್ನ ದೂರಿನಲ್ಲಿ, ರತನ್‌ ಲಾಲ್ ಅವರು ಇತ್ತೀಚೆಗೆ “ಶಿವಲಿಂಗದ ಮೇಲೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಟ್ವೀಟ್” ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿದೆ ಎನ್ನಲಾಗಿರುವ ‘ಶಿವಲಿಂಗ’ದ ವಿಚಾರದ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದೆ. ಈ ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪ್ರೊಫೆಸರ್‌ ರತನ್ ಲಾಲ್ ಅವರು ತಮ್ಮ ಪೋಸ್ಟ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ. “ಭಾರತದಲ್ಲಿ, ನೀವು ಯಾವುದೇ ವಿಷಯದ ಬಗ್ಗೆ ಮಾತನಾಡಿದರೆ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರನಾಗಿದ್ದು, ಇಂತಹ ಹಲವಾರು ಅವಲೋಕನಗಳನ್ನು ಮಾಡಿದ್ದೇನೆ ಮತ್ತು ಅವುಗಳನ್ನು ಬರೆದಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಹಿಂದೂ ಭಾವನೆಗಳ ಬಗ್ಗೆ ಮಾತನಾಡಿದ ಈ ಅಯೋಗ್ಯನನ್ನ ಅಲ್ಲೇ ಕಡಿದು ಹಾಕಬೇಕಿತ್ತು .ಈ ಕಮ್ಯೂನಿಸ್ಟ್ ಭೋಳಿ ಮಗನ್ನ ಕಡಿದು ಊರಿನ ಬಾಗಲಿಗೆ ನೇತಾಡಬೇಕಿತ್ತು

  2. ಹಿಂದೂ ವೈದಿಕರಲ್ಲಿ 33 ಕೋಟಿ ದೇವರಿದ್ದು ಅವರ ಕುರಿತು ಅತಿ ವಿಚಿತ್ರ ಕಥೆಗಳೂ ಇರುವುದರಿಂದ, ನಾವು ಜೋರಾಗಿ ಕೆಮ್ಮಿದರೂ 33 ಕೋಟಿ ದೇವರಲ್ಲಿ ಯರಾದರೊಬ್ಬ ದೇವರಿಗೆ ಅವಮಾನ ಆಗುವುದು ಖಚಿತ. ಹಾಗಾದರೆ ನಾವು ಕೆಮ್ಮುವುದನ್ನು ಸೀನುವುದನ್ನು ನಿಲ್ಲಿಸಬೇಕೇ ??😢😢

  3. ಬ್ರಾಹ್ಮಣ್ಯ ಹಿಂದುತ್ವದ ಮುಖವಾಡ ಧರಿಸಿ ಮೇರೆಯಲು ಪ್ರಾರಂಭಿಸಿದೆ ಬಹುಸಂಖ್ಯಾತರಿಗೆ ವಿದ್ಯೆ ನಿಶಿದ್ದವಾಗಿದ್ದ ಕಾಲದಲ್ಲಿ ಎನೆನೊ ಸುಳ್ಳು ಪುಸ್ತಕಗಳು ಕಾಲ್ಪನಿಕ ವೇದ ಪುರಾಣ ಬರೆದು ಜನರನ್ನು ನಂಬಿಸಿ ತಮ್ಮ ಹೊಟ್ಟೆಪಾಡು ಮಾಡಿಕೊಂಡು ಸುಖ ಜೀವನ ಮಾಡಿಕೊಂಡು ರಾಜ ಮಹಾರಾಜರನ್ನು ಓಲೈಸಿಕೊಂಡು ಬದುಕಿದ್ದ ವೈದಿಕ ಸನಾತನಿಗಳಿಗೆ ಆದುನಿಕ ಶಿಕ್ಷಣ ಪಡೆದ ಜನ ತಮ್ಮ ಕಾಲ್ಪನಿಕ ಕಥೆಗೆ ಪ್ರತಿಕ್ರಿಯಿಸುತ್ತಿರುವುದು ಹತಾಶೆ ಮೂಡಿಸಿದೆ.

  4. ಇದೆಲ್ಲ ಮಾಟ ಮಂತ್ರ ಮಾಡಿ ಕಲ್ಪನೆ ಯಾ ಸಂಕಲ್ಪ ಮಾಡಿದ್ದಾರೆ ಬಿಜೆಪಿ ಸರ್ಕಾರ ಬಾರುತ್ತೆ ಅಂತಾ ಈ ಮಾಂತ್ರಿಕ ಚೀನಾ ದ ಮಾಂತ್ರಿಕ ವಿದ್ಯೆ ಜೋತೆಗೆ ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಜನರ ನೆಮ್ಮದಿ ಕೆಡಿಸಿ ಸೀನಿಮಾ ತರ ಎಲ್ಲಾರನ್ನು ನಟನೆ ಮಾಡುತ್ತಾನೆ ತುಮಕೂರು ಪ್ರಸಾದ್ ಬಂಗಾರಿ ಮತ್ತು ಮಂತೇಶ್ ಬಾಬು ವಿರಪುರ (ಶಿವಕೂಮಾರ್ ಸ್ವಾಮಿ ಜಿ ಊರು) ಪಕ್ಕಾ ಶಾಂತಪುರ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...