Homeರಾಷ್ಟ್ರೀಯ‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ (ಡಿಯು) ಪ್ರೊಫೆಸರ್, ‘ಅಂಬೇಡ್ಕರ್‌ ನಾಮ’ ಸಂಪಾದಕ ರತನ್ ಲಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಆದರೆ ಶನಿವಾರ, ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ಅವರ ಬಂಧನದ ಬಗ್ಗೆ ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ದೃಢಪಡಿಸಿದ್ದಾರೆ. “ಪ್ರೊಫೆಸರ್‌‌ ರತನ್ ಅವರು ಮಂಗಳವಾರ ಕಟ್ಟಡವೊಂದರ ಫೋಟೋವನ್ನು ಪೋಸ್ಟ್ ಮಾಡಿ ಆಕ್ಷೇಪಾರ್ಹ ಕಾಮೆಂಟ್‌‌ಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದ್ದು, ತನಿಖೆಯನ್ನು ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರತನ್‌‌ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್‌ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ವಕೀಲ ವಿನೀತ್ ಜಿಂದಾಲ್ ಅವರು ತನ್ನ ದೂರಿನಲ್ಲಿ, ರತನ್‌ ಲಾಲ್ ಅವರು ಇತ್ತೀಚೆಗೆ “ಶಿವಲಿಂಗದ ಮೇಲೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಟ್ವೀಟ್” ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿದೆ ಎನ್ನಲಾಗಿರುವ ‘ಶಿವಲಿಂಗ’ದ ವಿಚಾರದ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದೆ. ಈ ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪ್ರೊಫೆಸರ್‌ ರತನ್ ಲಾಲ್ ಅವರು ತಮ್ಮ ಪೋಸ್ಟ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ. “ಭಾರತದಲ್ಲಿ, ನೀವು ಯಾವುದೇ ವಿಷಯದ ಬಗ್ಗೆ ಮಾತನಾಡಿದರೆ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರನಾಗಿದ್ದು, ಇಂತಹ ಹಲವಾರು ಅವಲೋಕನಗಳನ್ನು ಮಾಡಿದ್ದೇನೆ ಮತ್ತು ಅವುಗಳನ್ನು ಬರೆದಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಹಿಂದೂ ಭಾವನೆಗಳ ಬಗ್ಗೆ ಮಾತನಾಡಿದ ಈ ಅಯೋಗ್ಯನನ್ನ ಅಲ್ಲೇ ಕಡಿದು ಹಾಕಬೇಕಿತ್ತು .ಈ ಕಮ್ಯೂನಿಸ್ಟ್ ಭೋಳಿ ಮಗನ್ನ ಕಡಿದು ಊರಿನ ಬಾಗಲಿಗೆ ನೇತಾಡಬೇಕಿತ್ತು

  2. ಹಿಂದೂ ವೈದಿಕರಲ್ಲಿ 33 ಕೋಟಿ ದೇವರಿದ್ದು ಅವರ ಕುರಿತು ಅತಿ ವಿಚಿತ್ರ ಕಥೆಗಳೂ ಇರುವುದರಿಂದ, ನಾವು ಜೋರಾಗಿ ಕೆಮ್ಮಿದರೂ 33 ಕೋಟಿ ದೇವರಲ್ಲಿ ಯರಾದರೊಬ್ಬ ದೇವರಿಗೆ ಅವಮಾನ ಆಗುವುದು ಖಚಿತ. ಹಾಗಾದರೆ ನಾವು ಕೆಮ್ಮುವುದನ್ನು ಸೀನುವುದನ್ನು ನಿಲ್ಲಿಸಬೇಕೇ ??😢😢

  3. ಬ್ರಾಹ್ಮಣ್ಯ ಹಿಂದುತ್ವದ ಮುಖವಾಡ ಧರಿಸಿ ಮೇರೆಯಲು ಪ್ರಾರಂಭಿಸಿದೆ ಬಹುಸಂಖ್ಯಾತರಿಗೆ ವಿದ್ಯೆ ನಿಶಿದ್ದವಾಗಿದ್ದ ಕಾಲದಲ್ಲಿ ಎನೆನೊ ಸುಳ್ಳು ಪುಸ್ತಕಗಳು ಕಾಲ್ಪನಿಕ ವೇದ ಪುರಾಣ ಬರೆದು ಜನರನ್ನು ನಂಬಿಸಿ ತಮ್ಮ ಹೊಟ್ಟೆಪಾಡು ಮಾಡಿಕೊಂಡು ಸುಖ ಜೀವನ ಮಾಡಿಕೊಂಡು ರಾಜ ಮಹಾರಾಜರನ್ನು ಓಲೈಸಿಕೊಂಡು ಬದುಕಿದ್ದ ವೈದಿಕ ಸನಾತನಿಗಳಿಗೆ ಆದುನಿಕ ಶಿಕ್ಷಣ ಪಡೆದ ಜನ ತಮ್ಮ ಕಾಲ್ಪನಿಕ ಕಥೆಗೆ ಪ್ರತಿಕ್ರಿಯಿಸುತ್ತಿರುವುದು ಹತಾಶೆ ಮೂಡಿಸಿದೆ.

  4. ಇದೆಲ್ಲ ಮಾಟ ಮಂತ್ರ ಮಾಡಿ ಕಲ್ಪನೆ ಯಾ ಸಂಕಲ್ಪ ಮಾಡಿದ್ದಾರೆ ಬಿಜೆಪಿ ಸರ್ಕಾರ ಬಾರುತ್ತೆ ಅಂತಾ ಈ ಮಾಂತ್ರಿಕ ಚೀನಾ ದ ಮಾಂತ್ರಿಕ ವಿದ್ಯೆ ಜೋತೆಗೆ ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಜನರ ನೆಮ್ಮದಿ ಕೆಡಿಸಿ ಸೀನಿಮಾ ತರ ಎಲ್ಲಾರನ್ನು ನಟನೆ ಮಾಡುತ್ತಾನೆ ತುಮಕೂರು ಪ್ರಸಾದ್ ಬಂಗಾರಿ ಮತ್ತು ಮಂತೇಶ್ ಬಾಬು ವಿರಪುರ (ಶಿವಕೂಮಾರ್ ಸ್ವಾಮಿ ಜಿ ಊರು) ಪಕ್ಕಾ ಶಾಂತಪುರ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...