Homeರಾಷ್ಟ್ರೀಯ‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ (ಡಿಯು) ಪ್ರೊಫೆಸರ್, ‘ಅಂಬೇಡ್ಕರ್‌ ನಾಮ’ ಸಂಪಾದಕ ರತನ್ ಲಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಆದರೆ ಶನಿವಾರ, ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ಅವರ ಬಂಧನದ ಬಗ್ಗೆ ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ದೃಢಪಡಿಸಿದ್ದಾರೆ. “ಪ್ರೊಫೆಸರ್‌‌ ರತನ್ ಅವರು ಮಂಗಳವಾರ ಕಟ್ಟಡವೊಂದರ ಫೋಟೋವನ್ನು ಪೋಸ್ಟ್ ಮಾಡಿ ಆಕ್ಷೇಪಾರ್ಹ ಕಾಮೆಂಟ್‌‌ಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದ್ದು, ತನಿಖೆಯನ್ನು ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರತನ್‌‌ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್‌ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ವಕೀಲ ವಿನೀತ್ ಜಿಂದಾಲ್ ಅವರು ತನ್ನ ದೂರಿನಲ್ಲಿ, ರತನ್‌ ಲಾಲ್ ಅವರು ಇತ್ತೀಚೆಗೆ “ಶಿವಲಿಂಗದ ಮೇಲೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಟ್ವೀಟ್” ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿದೆ ಎನ್ನಲಾಗಿರುವ ‘ಶಿವಲಿಂಗ’ದ ವಿಚಾರದ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದೆ. ಈ ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪ್ರೊಫೆಸರ್‌ ರತನ್ ಲಾಲ್ ಅವರು ತಮ್ಮ ಪೋಸ್ಟ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ. “ಭಾರತದಲ್ಲಿ, ನೀವು ಯಾವುದೇ ವಿಷಯದ ಬಗ್ಗೆ ಮಾತನಾಡಿದರೆ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರನಾಗಿದ್ದು, ಇಂತಹ ಹಲವಾರು ಅವಲೋಕನಗಳನ್ನು ಮಾಡಿದ್ದೇನೆ ಮತ್ತು ಅವುಗಳನ್ನು ಬರೆದಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಹಿಂದೂ ಭಾವನೆಗಳ ಬಗ್ಗೆ ಮಾತನಾಡಿದ ಈ ಅಯೋಗ್ಯನನ್ನ ಅಲ್ಲೇ ಕಡಿದು ಹಾಕಬೇಕಿತ್ತು .ಈ ಕಮ್ಯೂನಿಸ್ಟ್ ಭೋಳಿ ಮಗನ್ನ ಕಡಿದು ಊರಿನ ಬಾಗಲಿಗೆ ನೇತಾಡಬೇಕಿತ್ತು

  2. ಹಿಂದೂ ವೈದಿಕರಲ್ಲಿ 33 ಕೋಟಿ ದೇವರಿದ್ದು ಅವರ ಕುರಿತು ಅತಿ ವಿಚಿತ್ರ ಕಥೆಗಳೂ ಇರುವುದರಿಂದ, ನಾವು ಜೋರಾಗಿ ಕೆಮ್ಮಿದರೂ 33 ಕೋಟಿ ದೇವರಲ್ಲಿ ಯರಾದರೊಬ್ಬ ದೇವರಿಗೆ ಅವಮಾನ ಆಗುವುದು ಖಚಿತ. ಹಾಗಾದರೆ ನಾವು ಕೆಮ್ಮುವುದನ್ನು ಸೀನುವುದನ್ನು ನಿಲ್ಲಿಸಬೇಕೇ ??😢😢

  3. ಬ್ರಾಹ್ಮಣ್ಯ ಹಿಂದುತ್ವದ ಮುಖವಾಡ ಧರಿಸಿ ಮೇರೆಯಲು ಪ್ರಾರಂಭಿಸಿದೆ ಬಹುಸಂಖ್ಯಾತರಿಗೆ ವಿದ್ಯೆ ನಿಶಿದ್ದವಾಗಿದ್ದ ಕಾಲದಲ್ಲಿ ಎನೆನೊ ಸುಳ್ಳು ಪುಸ್ತಕಗಳು ಕಾಲ್ಪನಿಕ ವೇದ ಪುರಾಣ ಬರೆದು ಜನರನ್ನು ನಂಬಿಸಿ ತಮ್ಮ ಹೊಟ್ಟೆಪಾಡು ಮಾಡಿಕೊಂಡು ಸುಖ ಜೀವನ ಮಾಡಿಕೊಂಡು ರಾಜ ಮಹಾರಾಜರನ್ನು ಓಲೈಸಿಕೊಂಡು ಬದುಕಿದ್ದ ವೈದಿಕ ಸನಾತನಿಗಳಿಗೆ ಆದುನಿಕ ಶಿಕ್ಷಣ ಪಡೆದ ಜನ ತಮ್ಮ ಕಾಲ್ಪನಿಕ ಕಥೆಗೆ ಪ್ರತಿಕ್ರಿಯಿಸುತ್ತಿರುವುದು ಹತಾಶೆ ಮೂಡಿಸಿದೆ.

  4. ಇದೆಲ್ಲ ಮಾಟ ಮಂತ್ರ ಮಾಡಿ ಕಲ್ಪನೆ ಯಾ ಸಂಕಲ್ಪ ಮಾಡಿದ್ದಾರೆ ಬಿಜೆಪಿ ಸರ್ಕಾರ ಬಾರುತ್ತೆ ಅಂತಾ ಈ ಮಾಂತ್ರಿಕ ಚೀನಾ ದ ಮಾಂತ್ರಿಕ ವಿದ್ಯೆ ಜೋತೆಗೆ ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಜನರ ನೆಮ್ಮದಿ ಕೆಡಿಸಿ ಸೀನಿಮಾ ತರ ಎಲ್ಲಾರನ್ನು ನಟನೆ ಮಾಡುತ್ತಾನೆ ತುಮಕೂರು ಪ್ರಸಾದ್ ಬಂಗಾರಿ ಮತ್ತು ಮಂತೇಶ್ ಬಾಬು ವಿರಪುರ (ಶಿವಕೂಮಾರ್ ಸ್ವಾಮಿ ಜಿ ಊರು) ಪಕ್ಕಾ ಶಾಂತಪುರ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...