Homeರಾಷ್ಟ್ರೀಯ‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ (ಡಿಯು) ಪ್ರೊಫೆಸರ್, ‘ಅಂಬೇಡ್ಕರ್‌ ನಾಮ’ ಸಂಪಾದಕ ರತನ್ ಲಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಆದರೆ ಶನಿವಾರ, ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ಅವರ ಬಂಧನದ ಬಗ್ಗೆ ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ದೃಢಪಡಿಸಿದ್ದಾರೆ. “ಪ್ರೊಫೆಸರ್‌‌ ರತನ್ ಅವರು ಮಂಗಳವಾರ ಕಟ್ಟಡವೊಂದರ ಫೋಟೋವನ್ನು ಪೋಸ್ಟ್ ಮಾಡಿ ಆಕ್ಷೇಪಾರ್ಹ ಕಾಮೆಂಟ್‌‌ಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದ್ದು, ತನಿಖೆಯನ್ನು ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರತನ್‌‌ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್‌ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ವಕೀಲ ವಿನೀತ್ ಜಿಂದಾಲ್ ಅವರು ತನ್ನ ದೂರಿನಲ್ಲಿ, ರತನ್‌ ಲಾಲ್ ಅವರು ಇತ್ತೀಚೆಗೆ “ಶಿವಲಿಂಗದ ಮೇಲೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಟ್ವೀಟ್” ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿದೆ ಎನ್ನಲಾಗಿರುವ ‘ಶಿವಲಿಂಗ’ದ ವಿಚಾರದ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದೆ. ಈ ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪ್ರೊಫೆಸರ್‌ ರತನ್ ಲಾಲ್ ಅವರು ತಮ್ಮ ಪೋಸ್ಟ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ. “ಭಾರತದಲ್ಲಿ, ನೀವು ಯಾವುದೇ ವಿಷಯದ ಬಗ್ಗೆ ಮಾತನಾಡಿದರೆ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರನಾಗಿದ್ದು, ಇಂತಹ ಹಲವಾರು ಅವಲೋಕನಗಳನ್ನು ಮಾಡಿದ್ದೇನೆ ಮತ್ತು ಅವುಗಳನ್ನು ಬರೆದಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಹಿಂದೂ ಭಾವನೆಗಳ ಬಗ್ಗೆ ಮಾತನಾಡಿದ ಈ ಅಯೋಗ್ಯನನ್ನ ಅಲ್ಲೇ ಕಡಿದು ಹಾಕಬೇಕಿತ್ತು .ಈ ಕಮ್ಯೂನಿಸ್ಟ್ ಭೋಳಿ ಮಗನ್ನ ಕಡಿದು ಊರಿನ ಬಾಗಲಿಗೆ ನೇತಾಡಬೇಕಿತ್ತು

  2. ಹಿಂದೂ ವೈದಿಕರಲ್ಲಿ 33 ಕೋಟಿ ದೇವರಿದ್ದು ಅವರ ಕುರಿತು ಅತಿ ವಿಚಿತ್ರ ಕಥೆಗಳೂ ಇರುವುದರಿಂದ, ನಾವು ಜೋರಾಗಿ ಕೆಮ್ಮಿದರೂ 33 ಕೋಟಿ ದೇವರಲ್ಲಿ ಯರಾದರೊಬ್ಬ ದೇವರಿಗೆ ಅವಮಾನ ಆಗುವುದು ಖಚಿತ. ಹಾಗಾದರೆ ನಾವು ಕೆಮ್ಮುವುದನ್ನು ಸೀನುವುದನ್ನು ನಿಲ್ಲಿಸಬೇಕೇ ??😢😢

  3. ಬ್ರಾಹ್ಮಣ್ಯ ಹಿಂದುತ್ವದ ಮುಖವಾಡ ಧರಿಸಿ ಮೇರೆಯಲು ಪ್ರಾರಂಭಿಸಿದೆ ಬಹುಸಂಖ್ಯಾತರಿಗೆ ವಿದ್ಯೆ ನಿಶಿದ್ದವಾಗಿದ್ದ ಕಾಲದಲ್ಲಿ ಎನೆನೊ ಸುಳ್ಳು ಪುಸ್ತಕಗಳು ಕಾಲ್ಪನಿಕ ವೇದ ಪುರಾಣ ಬರೆದು ಜನರನ್ನು ನಂಬಿಸಿ ತಮ್ಮ ಹೊಟ್ಟೆಪಾಡು ಮಾಡಿಕೊಂಡು ಸುಖ ಜೀವನ ಮಾಡಿಕೊಂಡು ರಾಜ ಮಹಾರಾಜರನ್ನು ಓಲೈಸಿಕೊಂಡು ಬದುಕಿದ್ದ ವೈದಿಕ ಸನಾತನಿಗಳಿಗೆ ಆದುನಿಕ ಶಿಕ್ಷಣ ಪಡೆದ ಜನ ತಮ್ಮ ಕಾಲ್ಪನಿಕ ಕಥೆಗೆ ಪ್ರತಿಕ್ರಿಯಿಸುತ್ತಿರುವುದು ಹತಾಶೆ ಮೂಡಿಸಿದೆ.

  4. ಇದೆಲ್ಲ ಮಾಟ ಮಂತ್ರ ಮಾಡಿ ಕಲ್ಪನೆ ಯಾ ಸಂಕಲ್ಪ ಮಾಡಿದ್ದಾರೆ ಬಿಜೆಪಿ ಸರ್ಕಾರ ಬಾರುತ್ತೆ ಅಂತಾ ಈ ಮಾಂತ್ರಿಕ ಚೀನಾ ದ ಮಾಂತ್ರಿಕ ವಿದ್ಯೆ ಜೋತೆಗೆ ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಜನರ ನೆಮ್ಮದಿ ಕೆಡಿಸಿ ಸೀನಿಮಾ ತರ ಎಲ್ಲಾರನ್ನು ನಟನೆ ಮಾಡುತ್ತಾನೆ ತುಮಕೂರು ಪ್ರಸಾದ್ ಬಂಗಾರಿ ಮತ್ತು ಮಂತೇಶ್ ಬಾಬು ವಿರಪುರ (ಶಿವಕೂಮಾರ್ ಸ್ವಾಮಿ ಜಿ ಊರು) ಪಕ್ಕಾ ಶಾಂತಪುರ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...