Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...