Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...