Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...