Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...