Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...