Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...