Homeಮುಖಪುಟಬುಡಕಟ್ಟು ಮಹಿಳೆಗೆ ಸಂಬಂಧಿಕರು ಥಳಿಸಿದ ಹಳೆಯ ವೀಡಿಯೊ, ಕೋಮು ಸಂಘರ್ಷದ ಸಂದೇಶದೊಂದಿಗೆ ವೈರಲ್

ಬುಡಕಟ್ಟು ಮಹಿಳೆಗೆ ಸಂಬಂಧಿಕರು ಥಳಿಸಿದ ಹಳೆಯ ವೀಡಿಯೊ, ಕೋಮು ಸಂಘರ್ಷದ ಸಂದೇಶದೊಂದಿಗೆ ವೈರಲ್

- Advertisement -
- Advertisement -

ಎರಡು ವರ್ಷಗಳ ಹಿಂದೆ ಯುವಕರ ಗುಂಪೊಂದು ಯುವತಿಯೊಬ್ಬಳನ್ನು ಥಳಿಸಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿತ್ತು. ಆ ಘಟನೆಯ ವೀಡಿಯೊವನ್ನು ಇದೀಗ ‘ಹಿಂದುತ್ವವಾದಿ ಉಗ್ರರು ದಲಿತ ಹುಡುಗಿಯನ್ನು ಥಳಿಸುತ್ತಿರುವುದನ್ನು ತೋರಿಸುತ್ತದೆ’ ಎಂಬ ಸುಳ್ಳು ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿರುವ ಬೂಮ್ ವೆಬ್ಸೈಟ್, ”ಇದು 2021 ರ ಜೂನ್‌ನಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ತಮ್ಮ ಸಂಬಂಧಿಕರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಅವರ ಸಂಬಂಧಿಕರೇ ಥಳಿಸಿದ ಘಟನೆ ವೈರಲ್ ವೀಡಿಯೊದಲ್ಲಿದೆ” ಎಂದು ಹೇಳಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ, ಯುವಕರ ಗುಂಪೊಂದು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದುಕೊಂಡು ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಹೊಡೆಯುತ್ತಿರುವುದನ್ನು ನೋಡಬಹುದು ಮತ್ತು ಆಕೆ ಸುತ್ತಲೂ ನಿಂತಿದ್ದ ಪ್ರೇಕ್ಷಕರಿಂದ ಸಹಾಯಕ್ಕಾಗಿ ಆ ಮಹಿಳೆ ಅಳುತ್ತಿದ್ದಾಳೆ.

ಇದನ್ನೂ ಓದಿ: ಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

ಈ ವಿಡಿಯೋ ಹಂಚಿಕೊಂಡಿರುವವರು, “ಹಿಂದೂ ಉಗ್ರಗಾಮಿಗಳ ಗುಂಪು ಮತ್ತು ಹಿಂದುತ್ವ ಉಗ್ರಗಾಮಿ ಸಂಘಟನೆಯ ಸದಸ್ಯರು ದಲಿತ ಬಾಲಕಿಯನ್ನು ಕ್ರೂರವಾಗಿ ಮತ್ತು ನಿರ್ದಯವಾಗಿ ಥಳಿಸಿದ್ದಾರೆ. ಉಗ್ರಗಾಮಿ ಹಿಂದೂ ವಿಭಾಗವು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯ ಎಲ್ಲಾ ವಿಧಾನಗಳನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ದಲಿತರ ವಿರುದ್ಧ ಈಗಲೂ ಮಾಡುತ್ತಿರುವ ವಿಶ್ವದ ಏಕೈಕ ದೇಶ ಭಾರತವಾಗಿದೆ” ಎಂದು ವೀಡಿಯೊದ ಶೀರ್ಷಿಕೆ ಬರೆಯಲಾಗಿದೆ. ಈ ವೀಡಿಯೊವನ್ನು ಟ್ವಿಟರ್‌ನಲ್ಲಿ  ಸುಮಾರು 79.3 ಸಾವಿರ ವೀಕ್ಷಣೆ ಪಡೆದಿದೆ.

ಅದೇ ವೀಡಿಯೊವನ್ನು @jatt0935 ಟ್ವಿಟ್ಟರ್ ಖಾತೆಯಿಂದ ಹಂಚಿಕೊಂಡಿದ್ದು, ”ನದಿಯಲ್ಲಿ ಸ್ನಾನ ಮಾಡಿದ್ದಕ್ಕಾಗಿ ದಲಿತ ಮಹಿಳೆಯನ್ನು ಥಳಿಸಲಾಗಿದೆ” ಎಂಬ ಮತ್ತೊಂದು ತಪ್ಪು ಹೇಳಿಕೆಯೊಂದಿಗೆ ಅದೇ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. “ಎಚ್ಚರಿಕೆ…. ನದಿಯಲ್ಲಿ ಸ್ನಾನ ಮಾಡಿ ನೀರನ್ನು ಕಲುಷಿತಗೊಳಿಸಿದ್ದಕ್ಕಾಗಿ ಈ ದಲಿತ ಬಾಲಕಿಯನ್ನು ನಿರ್ದಯವಾಗಿ ಥಳಿಸಲಾಗುತ್ತಿದೆ. 75 ವರ್ಷಗಳ ಸ್ವತಂತ್ರ ಭಾರತ, ಅಲ್ಲಿ ಮಹಿಳೆಯರಿಗಿಂತ ನೀರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ” ಎಂದು ಟ್ವೀಟ್ ಮಾಡಿದೆ.

ಸತ್ಯ-ಪರಿಶೀಲನೆ
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಇಬ್ಬರು ಸಹೋದರಿಯರನ್ನು ಅವರ ಸಂಬಂಧಿಕರು ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಥಳಿಸಿದ ಜೂನ್ 2021ರ ಘಟನೆಯ ವವೀಡಿಯೊ ಇದೀಗ ಬೇರೆ ಆಯಾಮದಲ್ಲಿ ವೈರಲ್ ಆಗಿದೆ ಎಂದು BOOM ಕಂಡುಹಿಡಿದಿದೆ.

ಬುಡಕಟ್ಟು ಮಹಿಳೆಗೆ ಅವರ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ. ಏಕೆಂದರೆ ಅವರು ತಮ್ಮ ತಾಯಿಯ ಸೋದರಸಂಬಂಧಿಗಳೊಂದಿಗೆ ಕುಟುಂಬವನ್ನು ಕೆರಳಿಸುವಂತೆ ಸ್ಪಷ್ಟವಾಗಿ ಮಾತನಾಡುತ್ತಿದ್ದರು ಎಂದು ಜುಲೈ 4, 2021 ರಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಘಟನೆಯು ಪಿಪಲ್ವಾ ಗ್ರಾಮದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ತಾಂಡಾದಲ್ಲಿ ನಡೆದಿರುವ ಈ ಘಟನೆಯನ್ನು ಅಲ್ಲಿ ಅನೇಕರು ಕಣ್ಣಾರೆ ನೋಡಿದ್ದಾರೆ ಮತ್ತೆ ಕೆಲವರು ವೀಡಿಯೊಗಳನ್ನು ಸಹ ರೆಕಾರ್ಡ್ ಮಾಡಿದ್ದಾರೆ.

ಈ ಘಟನೆ ಬಗ್ಗೆ  ಜುಲೈ 5, 2021 ರಂದು ಟೈಮ್ಸ್ ಆಫ್ ಇಂಡಿಯಾ ಕೂಡ ವರದಿ ಮಾಡಿದ್ದು, ”ಆರಂಭದಲ್ಲಿ ಕುಟುಂಬಸ್ಥರ ವಿರುದ್ಧ ದೂರು ನೀಡಲು ಬಾಲಕಿಯರು ಹಿಂದೇಟು ಹಾಕಿದ್ದರು ಆದರೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ನಂತರ ಪೊಲೀಸ್ ಠಾಣೆಯಲ್ಲಿ ಹೇಳಿಕೆ ನೀಡಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ತಾಂಡಾ ಪೊಲೀಸ್ ಠಾಣೆಯ ಇನ್‌ಚಾರ್ಜ್ ವಿಜಯ್ ವಾಸ್ಕಲೆ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...