Homeಮುಖಪುಟನಿವೃತ ನ್ಯಾಯಾಧೀಶರನ್ನು ''ಭಾರತ ವಿರೋಧಿ ಗ್ಯಾಂಗ್'' ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ...

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ

- Advertisement -
- Advertisement -

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದು ಟೀಕಿಸಿದ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ವಿರುದ್ಧ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ರಿಜಿಜು ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ 90 ಮಾಜಿ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ.

”ಸರ್ಕಾರದ ಅಭಿಪ್ರಾಯಗಳನ್ನು ಒಬ್ಬ ವ್ಯಕ್ತಿಯು ಒಪ್ಪದಿದ್ದರೆ, ಆತನನ್ನು ”ರಾಷ್ಟ್ರವಿರೋಧಿ” ಎಂದು ಶಾಶ್ವತವಾಗಿ ಹಣೆಪಟ್ಟಿ ಕಟ್ಟುತ್ತೀರಿ. ಮುಂದುವರೆದು ಆತನ ವಿರುದ್ಧ ಸರ್ಕಾರವು ಎಲ್ಲಾ ರೀತಿಯ ಶಿಕ್ಷೆಯ ಕ್ರಮಗಳನ್ನು ಪ್ರಾರಂಭಿಸುತ್ತದೆ. ದೇಶದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರೂ ಅದನ್ನು ಸರ್ಕಾರ ನಿಗ್ರಹಿಸಲು ಪ್ರಯತ್ನಿಸುತ್ತದೆ” ಎಂದು 90 ಮಾಜಿ ಅಧಿಕಾರಿಗಳು ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ.

ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ನಜೀಬ್ ಜಂಗ್ ಮತ್ತು ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಜೂಲಿಯೊ ರಿಬೇರೊ ಇವರೆಲ್ಲಾ ಪತ್ರಕ್ಕೆ ಸಹಿ ಮಾಡಿದವರಲ್ಲಿ ಇದ್ದಾರೆ.

ಮಾರ್ಚ್ 17 ರಂದು, ಕೆಲವು ನಿವೃತ್ತ ನ್ಯಾಯಾಧೀಶರು “ಭಾರತ ವಿರೋಧಿ ಗ್ಯಾಂಗ್” ನ ಭಾಗವಾಗಿದ್ದಾರೆ ಮತ್ತು ನ್ಯಾಯಾಂಗವನ್ನು ಪ್ರತಿಪಕ್ಷದ ಪಾತ್ರವನ್ನು ವಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾನೂನು ಸಚಿವರು ಹೇಳಿದ್ದರು.

ಇದನ್ನೂಓದಿ: ಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

ಕಳೆದ ಕೆಲವು ತಿಂಗಳುಗಳಿಂದ, ರಿಜಿಜು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರು ನ್ಯಾಯಾಧೀಶರ ನೇಮಕದ ಕೊಲಿಜಿಯಂ ವ್ಯವಸ್ಥೆಯನ್ನು ಪದೇ ಪದೇ ಟೀಕಿಸಿದ್ದರು. ಇದು ಅಪಾರದರ್ಶಕವಾಗಿದೆ ಎಂದು ಹೇಳುತ್ತಾ ಬಂದಿದ್ದಾರೆ.

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತಾರೆ ಮತ್ತು ಸರ್ಕಾರವು ಅವುಗಳನ್ನು ಅನುಸರಿಸುವುದನ್ನು ನಿರೀಕ್ಷಿಸಲಾಗುತ್ತದೆ ಇದು ಕೊಲಿಜಿಯಂ ವ್ಯವಸ್ಥೆಯಾಗಿದೆ.

ಆದರೆ ಕೊಲಿಜಿಯಂ ನೀಡಿದ ಕೆಲವೊಂದು ಹೆಸರನ್ನು ಸ್ವೀಕರಿಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿರುವುದು ನೋಡಿದರೆ, ಸರ್ಕಾರಕ್ಕೆ ವಿಧೇಯ ನ್ಯಾಯಾಂಗ ಸೃಷ್ಠಿ ಮಾಡುವ ಉದ್ದೇಶ ಇದ್ದಂತಿದೆ. ನ್ಯಾಯಾಂಗದ ಸ್ವಾಯತ್ತತೆಯನ್ನು ರಕ್ಷಣೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಹಾಗೂ ತಜ್ಞರು ಬಹಿರಂಗವಾಗಿ ಗಂಭೀರ ಕಾಳಜಿ ವ್ಯಕ್ತಪಡಿಸುತ್ತಿರುವುದು ಅಚ್ಚರಿಯೇನಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿಯ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌, ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ ಪಿಳ್ಳೈ, ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ಸುಜಾತ ಸಿಂಗ್‌ ಹಾಗೂ ಆರೋಗ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಕೆ. ಸುಜಾತ ಸಿಂಗ್‌ ರಾವ್‌ ಸೇರಿ ಒಟ್ಟು 90 ಮಂದಿ ಮಾಜಿ ಅಧಿಕಾರಿಗಳು ಈ ಪತ್ರ ಬರೆದಿದ್ದಾರೆ.

”ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆ ಮಾಡುವುದು ಆಯ್ಕೆಯಲ್ಲ. ಕಾರ್ಯಾಂಗವು ನ್ಯಾಯಾಂಗದ ಮೇಲೆ ಅತಿಕ್ರಮಣ ಮಾಡುವುದು ಜನತಂತ್ರದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ತೀಕ್ಷ್ಣವಾಗಿ ಮಾಜಿ ಅಧಿಕಾರಿಗಳು ಈ ಪತ್ರದಲ್ಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಅದರ ಕೊಲಿಜಿಯಂ ವ್ಯವಸ್ಥೆಯ ಮೇಲೆ ಸರ್ಕಾರದ ”ಸಂಯೋಜಿತ ದಾಳಿಯ ಭಾಗ” ಎಂದು ತೋರುತ್ತದೆ ಎಂದು ಗುರುವಾರ ರಿಜಿಜು ಅವರಿಗೆ ಬರೆದ ಪತ್ರದಲ್ಲಿ ಮಾಜಿ ನಾಗರಿಕ ಸೇವಕರು ತಿಳಿಸಿದ್ದಾರೆ.

ರಿಜಿಜು ಮತ್ತು ಧಂಕರ್ ಅವರು ನ್ಯಾಯಾಂಗ ನೇಮಕಾತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಕೊಲಿಜಿಯಂನೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಬದಲು ಅದಕ್ಕೆ ವಿರುದ್ಧವಾಗಿ ಟೀಕೆಗಳನ್ನು ಮಾಡುತ್ತಾ ವಿಷಪೂರಿತವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...