Homeಮುಖಪುಟನಿವೃತ ನ್ಯಾಯಾಧೀಶರನ್ನು ''ಭಾರತ ವಿರೋಧಿ ಗ್ಯಾಂಗ್'' ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ...

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ

- Advertisement -
- Advertisement -

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದು ಟೀಕಿಸಿದ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ವಿರುದ್ಧ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ರಿಜಿಜು ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ 90 ಮಾಜಿ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ.

”ಸರ್ಕಾರದ ಅಭಿಪ್ರಾಯಗಳನ್ನು ಒಬ್ಬ ವ್ಯಕ್ತಿಯು ಒಪ್ಪದಿದ್ದರೆ, ಆತನನ್ನು ”ರಾಷ್ಟ್ರವಿರೋಧಿ” ಎಂದು ಶಾಶ್ವತವಾಗಿ ಹಣೆಪಟ್ಟಿ ಕಟ್ಟುತ್ತೀರಿ. ಮುಂದುವರೆದು ಆತನ ವಿರುದ್ಧ ಸರ್ಕಾರವು ಎಲ್ಲಾ ರೀತಿಯ ಶಿಕ್ಷೆಯ ಕ್ರಮಗಳನ್ನು ಪ್ರಾರಂಭಿಸುತ್ತದೆ. ದೇಶದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರೂ ಅದನ್ನು ಸರ್ಕಾರ ನಿಗ್ರಹಿಸಲು ಪ್ರಯತ್ನಿಸುತ್ತದೆ” ಎಂದು 90 ಮಾಜಿ ಅಧಿಕಾರಿಗಳು ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ.

ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ನಜೀಬ್ ಜಂಗ್ ಮತ್ತು ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಜೂಲಿಯೊ ರಿಬೇರೊ ಇವರೆಲ್ಲಾ ಪತ್ರಕ್ಕೆ ಸಹಿ ಮಾಡಿದವರಲ್ಲಿ ಇದ್ದಾರೆ.

ಮಾರ್ಚ್ 17 ರಂದು, ಕೆಲವು ನಿವೃತ್ತ ನ್ಯಾಯಾಧೀಶರು “ಭಾರತ ವಿರೋಧಿ ಗ್ಯಾಂಗ್” ನ ಭಾಗವಾಗಿದ್ದಾರೆ ಮತ್ತು ನ್ಯಾಯಾಂಗವನ್ನು ಪ್ರತಿಪಕ್ಷದ ಪಾತ್ರವನ್ನು ವಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾನೂನು ಸಚಿವರು ಹೇಳಿದ್ದರು.

ಇದನ್ನೂಓದಿ: ಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

ಕಳೆದ ಕೆಲವು ತಿಂಗಳುಗಳಿಂದ, ರಿಜಿಜು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರು ನ್ಯಾಯಾಧೀಶರ ನೇಮಕದ ಕೊಲಿಜಿಯಂ ವ್ಯವಸ್ಥೆಯನ್ನು ಪದೇ ಪದೇ ಟೀಕಿಸಿದ್ದರು. ಇದು ಅಪಾರದರ್ಶಕವಾಗಿದೆ ಎಂದು ಹೇಳುತ್ತಾ ಬಂದಿದ್ದಾರೆ.

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತಾರೆ ಮತ್ತು ಸರ್ಕಾರವು ಅವುಗಳನ್ನು ಅನುಸರಿಸುವುದನ್ನು ನಿರೀಕ್ಷಿಸಲಾಗುತ್ತದೆ ಇದು ಕೊಲಿಜಿಯಂ ವ್ಯವಸ್ಥೆಯಾಗಿದೆ.

ಆದರೆ ಕೊಲಿಜಿಯಂ ನೀಡಿದ ಕೆಲವೊಂದು ಹೆಸರನ್ನು ಸ್ವೀಕರಿಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿರುವುದು ನೋಡಿದರೆ, ಸರ್ಕಾರಕ್ಕೆ ವಿಧೇಯ ನ್ಯಾಯಾಂಗ ಸೃಷ್ಠಿ ಮಾಡುವ ಉದ್ದೇಶ ಇದ್ದಂತಿದೆ. ನ್ಯಾಯಾಂಗದ ಸ್ವಾಯತ್ತತೆಯನ್ನು ರಕ್ಷಣೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಹಾಗೂ ತಜ್ಞರು ಬಹಿರಂಗವಾಗಿ ಗಂಭೀರ ಕಾಳಜಿ ವ್ಯಕ್ತಪಡಿಸುತ್ತಿರುವುದು ಅಚ್ಚರಿಯೇನಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿಯ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌, ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ ಪಿಳ್ಳೈ, ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ಸುಜಾತ ಸಿಂಗ್‌ ಹಾಗೂ ಆರೋಗ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಕೆ. ಸುಜಾತ ಸಿಂಗ್‌ ರಾವ್‌ ಸೇರಿ ಒಟ್ಟು 90 ಮಂದಿ ಮಾಜಿ ಅಧಿಕಾರಿಗಳು ಈ ಪತ್ರ ಬರೆದಿದ್ದಾರೆ.

”ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆ ಮಾಡುವುದು ಆಯ್ಕೆಯಲ್ಲ. ಕಾರ್ಯಾಂಗವು ನ್ಯಾಯಾಂಗದ ಮೇಲೆ ಅತಿಕ್ರಮಣ ಮಾಡುವುದು ಜನತಂತ್ರದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ತೀಕ್ಷ್ಣವಾಗಿ ಮಾಜಿ ಅಧಿಕಾರಿಗಳು ಈ ಪತ್ರದಲ್ಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಅದರ ಕೊಲಿಜಿಯಂ ವ್ಯವಸ್ಥೆಯ ಮೇಲೆ ಸರ್ಕಾರದ ”ಸಂಯೋಜಿತ ದಾಳಿಯ ಭಾಗ” ಎಂದು ತೋರುತ್ತದೆ ಎಂದು ಗುರುವಾರ ರಿಜಿಜು ಅವರಿಗೆ ಬರೆದ ಪತ್ರದಲ್ಲಿ ಮಾಜಿ ನಾಗರಿಕ ಸೇವಕರು ತಿಳಿಸಿದ್ದಾರೆ.

ರಿಜಿಜು ಮತ್ತು ಧಂಕರ್ ಅವರು ನ್ಯಾಯಾಂಗ ನೇಮಕಾತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಕೊಲಿಜಿಯಂನೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಬದಲು ಅದಕ್ಕೆ ವಿರುದ್ಧವಾಗಿ ಟೀಕೆಗಳನ್ನು ಮಾಡುತ್ತಾ ವಿಷಪೂರಿತವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...