Homeಮುಖಪುಟನಿವೃತ ನ್ಯಾಯಾಧೀಶರನ್ನು ''ಭಾರತ ವಿರೋಧಿ ಗ್ಯಾಂಗ್'' ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ...

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ

- Advertisement -
- Advertisement -

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದು ಟೀಕಿಸಿದ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ವಿರುದ್ಧ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ರಿಜಿಜು ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ 90 ಮಾಜಿ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ.

”ಸರ್ಕಾರದ ಅಭಿಪ್ರಾಯಗಳನ್ನು ಒಬ್ಬ ವ್ಯಕ್ತಿಯು ಒಪ್ಪದಿದ್ದರೆ, ಆತನನ್ನು ”ರಾಷ್ಟ್ರವಿರೋಧಿ” ಎಂದು ಶಾಶ್ವತವಾಗಿ ಹಣೆಪಟ್ಟಿ ಕಟ್ಟುತ್ತೀರಿ. ಮುಂದುವರೆದು ಆತನ ವಿರುದ್ಧ ಸರ್ಕಾರವು ಎಲ್ಲಾ ರೀತಿಯ ಶಿಕ್ಷೆಯ ಕ್ರಮಗಳನ್ನು ಪ್ರಾರಂಭಿಸುತ್ತದೆ. ದೇಶದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರೂ ಅದನ್ನು ಸರ್ಕಾರ ನಿಗ್ರಹಿಸಲು ಪ್ರಯತ್ನಿಸುತ್ತದೆ” ಎಂದು 90 ಮಾಜಿ ಅಧಿಕಾರಿಗಳು ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ.

ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ನಜೀಬ್ ಜಂಗ್ ಮತ್ತು ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಜೂಲಿಯೊ ರಿಬೇರೊ ಇವರೆಲ್ಲಾ ಪತ್ರಕ್ಕೆ ಸಹಿ ಮಾಡಿದವರಲ್ಲಿ ಇದ್ದಾರೆ.

ಮಾರ್ಚ್ 17 ರಂದು, ಕೆಲವು ನಿವೃತ್ತ ನ್ಯಾಯಾಧೀಶರು “ಭಾರತ ವಿರೋಧಿ ಗ್ಯಾಂಗ್” ನ ಭಾಗವಾಗಿದ್ದಾರೆ ಮತ್ತು ನ್ಯಾಯಾಂಗವನ್ನು ಪ್ರತಿಪಕ್ಷದ ಪಾತ್ರವನ್ನು ವಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾನೂನು ಸಚಿವರು ಹೇಳಿದ್ದರು.

ಇದನ್ನೂಓದಿ: ಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

ಕಳೆದ ಕೆಲವು ತಿಂಗಳುಗಳಿಂದ, ರಿಜಿಜು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರು ನ್ಯಾಯಾಧೀಶರ ನೇಮಕದ ಕೊಲಿಜಿಯಂ ವ್ಯವಸ್ಥೆಯನ್ನು ಪದೇ ಪದೇ ಟೀಕಿಸಿದ್ದರು. ಇದು ಅಪಾರದರ್ಶಕವಾಗಿದೆ ಎಂದು ಹೇಳುತ್ತಾ ಬಂದಿದ್ದಾರೆ.

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತಾರೆ ಮತ್ತು ಸರ್ಕಾರವು ಅವುಗಳನ್ನು ಅನುಸರಿಸುವುದನ್ನು ನಿರೀಕ್ಷಿಸಲಾಗುತ್ತದೆ ಇದು ಕೊಲಿಜಿಯಂ ವ್ಯವಸ್ಥೆಯಾಗಿದೆ.

ಆದರೆ ಕೊಲಿಜಿಯಂ ನೀಡಿದ ಕೆಲವೊಂದು ಹೆಸರನ್ನು ಸ್ವೀಕರಿಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿರುವುದು ನೋಡಿದರೆ, ಸರ್ಕಾರಕ್ಕೆ ವಿಧೇಯ ನ್ಯಾಯಾಂಗ ಸೃಷ್ಠಿ ಮಾಡುವ ಉದ್ದೇಶ ಇದ್ದಂತಿದೆ. ನ್ಯಾಯಾಂಗದ ಸ್ವಾಯತ್ತತೆಯನ್ನು ರಕ್ಷಣೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಹಾಗೂ ತಜ್ಞರು ಬಹಿರಂಗವಾಗಿ ಗಂಭೀರ ಕಾಳಜಿ ವ್ಯಕ್ತಪಡಿಸುತ್ತಿರುವುದು ಅಚ್ಚರಿಯೇನಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿಯ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌, ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ ಪಿಳ್ಳೈ, ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ಸುಜಾತ ಸಿಂಗ್‌ ಹಾಗೂ ಆರೋಗ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಕೆ. ಸುಜಾತ ಸಿಂಗ್‌ ರಾವ್‌ ಸೇರಿ ಒಟ್ಟು 90 ಮಂದಿ ಮಾಜಿ ಅಧಿಕಾರಿಗಳು ಈ ಪತ್ರ ಬರೆದಿದ್ದಾರೆ.

”ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆ ಮಾಡುವುದು ಆಯ್ಕೆಯಲ್ಲ. ಕಾರ್ಯಾಂಗವು ನ್ಯಾಯಾಂಗದ ಮೇಲೆ ಅತಿಕ್ರಮಣ ಮಾಡುವುದು ಜನತಂತ್ರದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ತೀಕ್ಷ್ಣವಾಗಿ ಮಾಜಿ ಅಧಿಕಾರಿಗಳು ಈ ಪತ್ರದಲ್ಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಅದರ ಕೊಲಿಜಿಯಂ ವ್ಯವಸ್ಥೆಯ ಮೇಲೆ ಸರ್ಕಾರದ ”ಸಂಯೋಜಿತ ದಾಳಿಯ ಭಾಗ” ಎಂದು ತೋರುತ್ತದೆ ಎಂದು ಗುರುವಾರ ರಿಜಿಜು ಅವರಿಗೆ ಬರೆದ ಪತ್ರದಲ್ಲಿ ಮಾಜಿ ನಾಗರಿಕ ಸೇವಕರು ತಿಳಿಸಿದ್ದಾರೆ.

ರಿಜಿಜು ಮತ್ತು ಧಂಕರ್ ಅವರು ನ್ಯಾಯಾಂಗ ನೇಮಕಾತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಕೊಲಿಜಿಯಂನೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಬದಲು ಅದಕ್ಕೆ ವಿರುದ್ಧವಾಗಿ ಟೀಕೆಗಳನ್ನು ಮಾಡುತ್ತಾ ವಿಷಪೂರಿತವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...