Homeಕರ್ನಾಟಕಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಸ್ವಾಮೀಜಿ, ಮಾದಿಗ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳು ಸಂತ್ರಸ್ತೆಯಾಗಿರುವುದನ್ನು ಮರೆತುಬಿಟ್ಟಿರೇಕೆ?”

- Advertisement -
- Advertisement -

ಪೋಕ್ಸೋ ಹಾಗೂ ಎಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಶಿವಮೂರ್ತಿ ಮುರುಘಾ ಶರಣರ ಪರವಾಗಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡುತ್ತಿದ್ದಾರೆಂಬ ಆರೋಪಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ನಿಕಟ ಪೂರ್ವ ಸದಸ್ಯರಾದ ಎನ್.ರವಿಕುಮಾರ್ ಅವರು ಬರೆದಿರುವ ಬಹಿರಂಗ ಪತ್ರ ಇಲ್ಲಿದೆ.

ಬಹಿರಂಗ ಪತ್ರ

ಶ್ರೀ ಮಾದಾರ ಚೆನ್ನಯ್ಯ ಶರಣರಿಗೆ.

ಶರಣರೇ..,

ಮುರುಘಾಬೃಹನ್ಮಠದ ಮುರುಘಾಶರಣರು ಮುನ್ನಡೆಸಿಕೊಂಡು ಬಂದಿದ್ದ ಪ್ರಗತಿಪರ, ಬಸವಾದಿಶರಣರ ಆಶಯಗಳ ಅನುಷ್ಠಾನದ ಪರಂಪರೆ ಬಗ್ಗೆ ನಾಡಿಗೆ ಗೊತ್ತಿದೆ. ಆದರೆ ಇಂತಹ ಮುರುಘಾಶರಣರು ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಪ್ರಕರಣ ಅವರ ಮೇಲೆ ದಾಖಲಾಗಿದೆ. ಇದಕ್ಕಷ್ಟೆ ಸೀಮಿತವಾಗಿ ಹೇಳುವುದಾದರೆ ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ನಾನು ಆಗ್ರಹಿಸುತ್ತೇನೆ. ಈ ನಾಗರಿಕ ಸಮಾಜ ಕೂಡ ಇದನ್ನೇ ಆಗ್ರಹಿಸಬೇಕು, ತನಿಖಾ ಸಂಸ್ಥೆಗಳು ಇದೇ ಹಾದಿಯಲ್ಲಿ ಕರ್ತವ್ಯವನ್ನು ನಿರ್ವಹಿಸಬೇಕೂ ಕೂಡ. ಇದೊಂದು ’ನ್ಯಾಯಪ್ರಜ್ಞೆ’. ಆದರೆ ಈ ಸಮಾಜದೊಳಗೆ ಇರುವ ನೀವು ಸೇರಿದಂತೆ ಇತರೆ ಮಠಾಧೀಶರುಗಳು ಇಂತಹ ನ್ಯಾಯಪ್ರಜ್ಞೆಯನ್ನು ವ್ಯಕ್ತಪಡಿಸದೆ ಆರೋಪಿ ಸ್ಥಾನದಲ್ಲಿರುವ ಮುರುಘಾಶರಣರನ್ನು ಬೆಂಬಲಿಸ ಹೊರಟಿರುವುದು ದೌಭಾರ್ಗ್ಯದ ಸಂಗತಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುರುಘಾಶರಣರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎನ್ನಲಾಗುತ್ತಿರುವ ಇಬ್ಬರು ಬಾಲಕಿಯರು ಹಿಂದುಳಿದ ಮತ್ತು ಮಾದಿಗ ಸಮುದಾಯಕ್ಕೆ ಸೇರಿದವರೆನ್ನಲಾಗಿದೆ. ಇಲ್ಲಿ ಜಾತಿ ಅಪ್ರಸ್ತುತ ನಿಜ, ಹೆಣ್ಣು ಜಾತ್ಯತೀತ ಮತ್ತು ಧರ್ಮಾತೀತವಾಗಿ ಸದಾ ಶೋಷಣೆಗೆ ಒಳಗಾಗುತ್ತಲೇ ಇರುತ್ತಾಳೆ. ಈ ಪ್ರಕರಣದಲ್ಲಿ ಈ ಇಬ್ಬರೂ ಹೆಣ್ಣುಮಕ್ಕಳು ಸಮಾನ ಸಂತ್ರಸ್ತರೇ ಆಗಿರುತ್ತಾರೆ. ಈ ಇಬ್ಬರಲ್ಲೂ ಜಾತಿ ಬಗೆದು ನೋಡಬೇಕಾಗಿಲ್ಲ. ಆದರೆ ಈ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಾದಿಗ ಸಮುದಾಯದ ಹೆಣ್ಣುಮಗಳೊಬ್ಬಳ ಮಾನ, ಪ್ರಾಣ, ಆತ್ಮಗೌರವ, ಸಾಮಾಜಿಕ ಗೌರವ ರಕ್ಷಣೆ ಕುರಿತು ನೀವು ’ಉತ್ತರದಾಯಿ’ಗಳು ಎಂಬುದನ್ನು ಸ್ಪಷ್ಟವಾಗಿ ಆಗ್ರಹಿಸುತ್ತೇನೆ.

ನೀವು, ಈ ನಾಡಿನ ಸಮಸ್ತ ಮಾದಿಗ ಸಮುದಾಯದ ಪ್ರಾತಿನಿಧಿಕ ಧಾರ್ಮಿಕ ನಂಬುಗೆಯ ಶ್ರದ್ಧಾಕೇಂದ್ರವಾದ ಮಾದರಾ ಚನ್ನಯ್ಯಗುರುಪೀಠದ ಪೀಠಾಧ್ಯಕ್ಷರಾಗಿ ಇದೇ ಮುರುಘಾಶರಣರಿಂದ ’ಸದ್ಯೋನ್ಮುಕ್ತ’ ದೀಕ್ಷೆಯನ್ನು ಪಡೆದಿದ್ದೀರ. ಈ ಸಮಾಜದ ಕಟ್ಟಕಡೆಯ ದುರ್ಬಲ ಸಮುದಾಯವಾಗಿರುವ ಮಾದಿಗ ಸಮುದಾಯದ ಗುರುವಾಗಿ ಈ ಸಮುದಾಯವನ್ನು ಸಾಮಾಜಿಕ ಗೌರವ, ಶೈಕ್ಷಣಿಕ ಅಭ್ಯುದಯ, ವೈಚಾರಿಕ ಅರಿವಿನಡೆಗೆ ಕೊಂಡೊಯ್ಯುವ ಗುರಿ ನಿಮ್ಮದಾಗಬೇಕಿತ್ತು. ದುರಾದೃಷ್ಟವೆಂದರೆ ಮಾದಾರಚನ್ನಯ್ಯ ಗುರುಮಠ ಮನೋಲಯ ದೀಕ್ಷೆಯನ್ನೆ ಧಿಕ್ಕರಿಸಿದ ಲೌಕಿಕ ಭೋಗಗಳಲ್ಲೊಂದಾದ ರಾಜಕೀಯ ಮೋಹ ತುಂಬಿದ, ವಚನಸಂಹಿತೆ ಭ್ರಷ್ಟತೆಯ ಮೈದಾನವಾಗಿದೆ. “ನಡೆ ನುಡಿ ಶುದ್ದವಿಲ್ಲದಿದ್ದರೆ ಚಂದೇಶ್ವರಲಿಂಗವಾದರೂ ತಪ್ಪನೊಳಕೊಳ್ಳೆ” ಎಂಬ ಅರಿವನ್ನು ಮರೆತುಬಿಟ್ಟಂತಿದೆ. ಬಸವಣ್ಣ ಯಾವ ವೈದಿಕ ವಿಚಾರಧಾರೆಗಳ ವಿರುದ್ದ ಬಂಡೆದ್ದು ಹೋರಾಡಿದರೂ ಅಂತಹ ವಿಚಾರಧಾರೆಯ ಅನುಯಾಯಿಗಳಿಗಿಂತಲೂ ಮಿಗಿಲಾದ ನಿಮ್ಮ ಸಡಗರ ಬಸವಣ್ಣರಿಗೆ ಬಗೆಯುತ್ತಿರುವ ದ್ರೋಹವೆಂದೆ ಭಾವಿಸಬೇಕಾದ ನಿಷ್ಠುರಕ್ಕೆ ಮಾದಿಗ ಸಮುದಾಯವನ್ನು ದೂಡಿದ್ದೀರ.

ಬಸವಾದಿಶರಣರ ವಚನ ಸಂಹಿತೆಗಳಿಂದ ಮಾದಿಗ ಸಮುದಾಯದ ಹೊಸ ತಲೆಮಾರುಗಳನ್ನು ವೈಚಾರಿಕವಾಗಿ, ಜ್ಞಾನಪೂರ್ಣವಾಗಿ, ಶರಣಸಂಪನ್ನರನ್ನಾಗಿ ಸದೃಢಗೊಳಿಸಬೇಕಿದ್ದ ನಿಮ್ಮಲ್ಲಿ ಸಿದ್ದಾಂತ ವ್ಯತಿರಿಕ್ತವಾದ ವೈದ್ದಿಕತೆ, ಸನಾತನ ವಿಚಾರಧಾರೆಗಳ ಸಂಸ್ಥೆ ಮತ್ತು ರಾಜಕೀಯಪಕ್ಷಗಳ ಪರಿಚಾರಕರತನ ಎದ್ದು ಕಾಣುತ್ತಿದೆ. ಮಾದಿಗ ಸಮುದಾಯದ ಕಲ್ಯಾಣವೆಂದರೆ ತದ್ವಿರುದ್ದ ವಿಚಾರಧಾರೆಯ ಸಂಘಟನೆಗಳ ಮುಂದೆ ನಿಸ್ಸ್ವಾಭಿಮಾನಿಯಾಗಿ ಮಂಡಿಯೂರಿ ಸರ್ಕಾರದಿಂದ ದುಡ್ಡು, ಸೈಟು ಪಡೆದು ಕಟ್ಟಡಗಳನ್ನು ಕಟ್ಟುವುದು, ಇದಕ್ಕೆ ಋಣಸಮರ್ಪಣೆಯಂತೆ ಚುನಾವಣೆಗಳಲ್ಲಿ ಮಾದಿಗ ಸಮುದಾಯವನ್ನು ಒಂದು ರಾಜಕೀಯ ಪಕ್ಷಕ್ಕೆ ಪಕ್ಕಾಗಿಸುವುದು ಎಂದರ್ಥವೇ? “ಗುರುವಿಡಿದು ಕುರುಹ ಕಾಣಬೇಕು. ಗುರುವಿಡಿದು ಅರುಹ ಕಾಣಬೇಕು. ಗುರುವಿಡಿದು ಆಚಾರವ ಕಾಣಬೇಕು” ಎನ್ನುವಾಗ ಮಾದಿಗ ಸಮುದಾಯ ಶರಣಗುರು ದೀಕ್ಷೆಯ ವಿಮುಖರಂತೆ ಕಾಣುತ್ತಿರುವ ನಿಮ್ಮನ್ನು (ಗುರು)ಹಿಡಿದು ಏನು ಕಾಣಬೇಕು ಎಂಬ ಪ್ರಶ್ನೆ ನನ್ನ ಅಸಂಘಟಿತ ಮಾದಿಗ ಸಮುದಾಯದ ಮುಂದೆ ಇದೆ.

ಆರೋಪಿ ಸ್ಥಾನದಲ್ಲಿರುವ ಮುರುಘಾ ಶರಣರನ್ನು ಬೆಂಬಲಿಸುವ ಬಹಿರಂಗ ಹೇಳಿಕೆ ನೀಡುವ ನೀವು ತಮ್ಮದೆ ಆದ ಮಾದಿಗ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳು ಸಂತ್ರಸ್ತೆಯಾಗಿರುವುದನ್ನು ಮರೆತುಬಿಟ್ಟಿರೇಕೆ? ಆ ಹೆಣ್ಣು ಮಗು , ಮತ್ತವರ ಕುಟುಂಬ ಆರೋಪಿಯ ಬಲಿಷ್ಠ ಪ್ರಭಾವದ ಕಾವಿನಲ್ಲಿ ಹೇಗೆಲ್ಲಾ ನರಳಿ ನಲುಗುತ್ತಿರಬಹುದು ಎಂಬುದನ್ನು ನಿಸ್ಸಂಸಾರಿಯಾದ ನೀವು ಅರ್ಥಮಾಡಿಕೊಳ್ಳಲು ಸಾಧ್ಯವೆ?!

ಈ ಸಮಾಜದಲ್ಲಿ ಬಲಿಷ್ಠ ಜಾತಿಗಳು ಭ್ರಷ್ಟಾಚಾರ, ಅತ್ಯಾಚಾರ ಏನೆಲ್ಲಾ ಮಾಡಿಯೂ ದಕ್ಕಿಸಿಕೊಂಡು ಬಿಡಬಲ್ಲವೂ, ಮತ್ತೆ ಸಮಾಜದ ಮುಖ್ಯವಾಹಿನಿಯಲ್ಲಿ ಆ ಸಮುದಾಯದ ಕಳಂಕಿತರು ಗಣ್ಯರಾಗಿ, ಮಾನ್ಯರಾಗಿ ಮೆರೆಯಬಲ್ಲವರು. ಅವರ ಬದುಕು ಒಂದು ಆದರ್ಶವೂ ಆಗಿಬಿಡಬಲ್ಲದು ಎಂಬುದಕ್ಕೆ ಅನೇಕ ನಿದರ್ಶನಗಳಿವೆ. ಆದರೆ ತಲೆಗೆ ಬಟ್ಟೆ ಇಲ್ಲದ ಜಾತಿಗಳಿಗೆ ಇಂತಹ ಶಕ್ತಿ -ಯುಕ್ತಿ ಇಲ್ಲ. ಹಾಗೊಮ್ಮೆ ಇಂತಹುದ್ದೇ ಆರೋಪ ಈ ತಬ್ಬಲಿ ಜಾತಿಗಳ ಮಠಾಧಿಪತಿಗಳ ಮೇಲೆ ಬಂದಿದ್ದರೆ ಇಷ್ಟೊತ್ತಿಗೆ ಏನೆಲ್ಲಾ ಪರಿಣಾಮ ಆಗಿರುತ್ತಿತ್ತು ಎಂಬುದನ್ನು ನಿಮ್ಮ ಊಹೆಗೆ ಬಿಡುತ್ತೇನೆ.

ಸತ್ಯ ಮತ್ತು ನ್ಯಾಯದ ಪ್ರಶ್ನೆ ಬಂದಾಗ ಬಿಜ್ಜಳನ ಭಂಡಾರ ಪದವಿಯನ್ನೆ ಧಿಕ್ಕರಿಸಿ ಬಂದ ಬಸವಣ್ಣ, ತನ್ನ ಸಮುದಾಯದ ಸ್ವಾಭಿಮಾನಕ್ಕಾಗಿ ಬದುಕನ್ನೆ ತ್ಯಾಗ ಮಾಡಿದ ಬಾಬಾಸಾಹೇಬ್ ಅಂಬೇಡ್ಕರ್ ನಿಮಗೆ ಎಲ್ಲಾ ಕಾಲಕ್ಕೂ ಆದರ್ಶರು ಎನಿಸುವುದಿಲ್ಲವೆ? ಪ್ರಕರಣ ತನಿಖೆಯ ಆರಂಭಿಕ ಹಂತದಲ್ಲಿರುವಾಗ ಯಾರೇ ಆದರೋ ಪ್ರಭಾವಿ ಆರೋಪಿಗೆ ಬೆಂಬಲ ನೀಡುವುದು ಸತ್ಯದ ಮೇಲೆ, ಸಹಜ ನ್ಯಾಯದ ಮೇಲೆ ದುಷ್ಪರಿಣಾಮ ಬೀರುವ ಅಥವಾ ಸಂತ್ರಸ್ತೆಯನ್ನು ಅಸಹಾಯಕಳನ್ನಾಗಿ ಮಾಡುವ ಬೆದರಿಕೆಯೂ ಆಗಿರುತ್ತದೆ.

ಇದನ್ನೂ ಓದಿರಿ: ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಮುರುಘಾಮಠಕ್ಕೆ ’ಲಿಂಗಾಯಿತ ಪರಂಪರೆ’ (ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಬಲಿಷ್ಠವಾದ) ಇದೆ. ಅದು ತೀರ‍್ಮಾನ ಕೈಗೊಳ್ಳುತ್ತದೆ ಎಂದು ಹೆಮ್ಮೆಯಿಂದ ಹೇಳುವ ನೀವು ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ದುರ್ಬಲವಾಗಿರುವ ಮಾದಿಗ ಸಮುದಾಯದ ಅಪ್ರಾಪ್ತ ಹೆಣ್ಣುಮಗಳೊಬ್ಬಳ ಮತ್ತು ಆಕೆಯ ಕುಟುಂಬದ ಆತ್ಮಗೌರವ, ಚಾರಿತ್ರ್ಯವನ್ನು ಕಾಪಾಡುವುದು, ದಿಟ್ಟದನಿಯಲ್ಲಿ ನ್ಯಾಯ ಕೇಳುವುದು ಮತ್ತು ತನ್ನ ದುರ್ಬಲ ಸಮುದಾಯದ ಜೊತೆ ನಿಲ್ಲುವುದು ಧರ್ಮ, ನ್ಯಾಯ ಮತ್ತು ಆತ್ಮಸಾಕ್ಷಿಯ ನಡೆಯಾಗುತ್ತದೆ.

ಇದಕ್ಕೆ ಭಿನ್ನ ಹಾದಿ ನಿಮ್ಮದಾದರೆ ನಿಮಗೆ ಮಾದಿಗ ಸಮುದಾಯವನ್ನು ಪ್ರತಿನಿಧಿಸುವ ಯಾವ ನೈತಿಕ ಹಕ್ಕಿಲ್ಲ. ನಿಮ್ಮನ್ನು ಗುರುವೆಂದು ಮಾದಿಗ ಸಮುದಾಯ ಭಾವಿಸಬೇಕಾಗಿಲ್ಲ ಎಂದೆನಿಸುತ್ತದೆ.

  • ಎನ್.ರವಿಕುಮಾರ್ ,
    ಪತ್ರಕರ್ತ, ಲೇಖಕ
    30/8/2022
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸ್ವಾಮಿಗಳು ಅನೈತಿಕತೆಗೆ ಸಪೋರ್ಟ್ ಮಾಡಿದ್ರೆ ಅವುಗಳನ್ನು ಸ್ವಾಮಿಗಳು ಅನ್ನೋಕೆ ನಾಚಿಕೆ ಯಾಗುತ್ತೆ ಅವರು ಹೇಸಿಗೆಗಿಂತ ಕಡೆಯಾಗುತ್ತಾರೆ ದೇವರ ಮೇಲೆ ಭಕ್ತಿ ಇಲ್ಲದ ಈ ಕಾಲದಲ್ಲಿ ಸ್ವಾಮಿ ಗಳಿಗೆ ಇನ್ಯಾವ ಮರ್ಯಾದೆ ಕೊಡಬೇಕು ಹೇಳಿ. ಅದರಲ್ಲೂ ಇಂಥ ನೀಚ ಕೆಲಸ ಮಾಡಿರುವ ಸ್ವಾಮಿಗಳಿಗೆ

  2. What is the contribution of Madara Channaiah Swamy to his community people. Has he helped any one from his community. Instead he is making fortune using name of community.oppressed communities can’t expect to good from such psudo swamies. Lower class swamies act as Chelas to powerful Mutts.

  3. ಇವರು ಮತ್ತು ಇಂತವರು ತಮ್ಮನ್ನು ತಾವೇ “ಮಾರಾಟ ಮಾಡಿಕೊಂಡ” ಸ್ವಾಮೀಜಿಗಳು. ಇವರು ಜನಾಂಗಕ್ಕೆ ದಾರಿ ದೀಪ ಎಂಬುದು ಬ್ರಮೆ.

  4. ಮಂಗಮೂತಿ ಕಾಯಿ ಹುಟ್ಟಿ ವನವೆಲ್ಲ ನಾಶವಾಯಿತು ಎಂಬ ಗಾದೆ ಗ್ರಾಮೀಣರಲ್ಲಿದೆ. ಹಾಗೆಯೇ ಇಂಥವರು ಮಂಗಮೂತಿ ಕಾಯಿ ಆಗುವರೇ ಹೊರತು ನೊಂದ ಸಮುದಾಯಗಳಿಗೆ ಫಲ ಆಗಲಾರರು.

  5. ಸಮಾಜದ ಜನರನ್ನ ರಕ್ಷಣೆ ಮಾಡದ ಅನ್ಯಾಯವನ್ನು ಪ್ರತಿಭಟಿಸಿದ ಇಂತಹ ಸ್ವಾಮಿ ನಮಗೆ ಏತಕ್ಕೆ ಬೇಕು ?ಇವರ ವರ್ತನೆ ನೋಡಿದರೆ ತಾವೊಬ್ಬ ಮುಂದುವರೆದ ಸಮಾಜದ ಸ್ವಾಮಿಯ ರೀತಿಯಲ್ಲಿ ಇದೆ.
    ಸಮಾಜದ ಹೆಣ್ಣು ಮಗಳ ಪರವಾಗಿದ್ದರೆ ಸರಿ ಇಲ್ಲದಿದ್ದರೆ ಸ್ವಾಮಿಗಳನ್ನು ಸ್ಥಾನಪಲ್ಲಟ ಮಾಡುವುದೇ ಒಳ್ಳೆಯದು

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...