Homeಕರ್ನಾಟಕಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಸ್ವಾಮೀಜಿ, ಮಾದಿಗ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳು ಸಂತ್ರಸ್ತೆಯಾಗಿರುವುದನ್ನು ಮರೆತುಬಿಟ್ಟಿರೇಕೆ?”

- Advertisement -
- Advertisement -

ಪೋಕ್ಸೋ ಹಾಗೂ ಎಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಶಿವಮೂರ್ತಿ ಮುರುಘಾ ಶರಣರ ಪರವಾಗಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡುತ್ತಿದ್ದಾರೆಂಬ ಆರೋಪಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ನಿಕಟ ಪೂರ್ವ ಸದಸ್ಯರಾದ ಎನ್.ರವಿಕುಮಾರ್ ಅವರು ಬರೆದಿರುವ ಬಹಿರಂಗ ಪತ್ರ ಇಲ್ಲಿದೆ.

ಬಹಿರಂಗ ಪತ್ರ

ಶ್ರೀ ಮಾದಾರ ಚೆನ್ನಯ್ಯ ಶರಣರಿಗೆ.

ಶರಣರೇ..,

ಮುರುಘಾಬೃಹನ್ಮಠದ ಮುರುಘಾಶರಣರು ಮುನ್ನಡೆಸಿಕೊಂಡು ಬಂದಿದ್ದ ಪ್ರಗತಿಪರ, ಬಸವಾದಿಶರಣರ ಆಶಯಗಳ ಅನುಷ್ಠಾನದ ಪರಂಪರೆ ಬಗ್ಗೆ ನಾಡಿಗೆ ಗೊತ್ತಿದೆ. ಆದರೆ ಇಂತಹ ಮುರುಘಾಶರಣರು ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಪ್ರಕರಣ ಅವರ ಮೇಲೆ ದಾಖಲಾಗಿದೆ. ಇದಕ್ಕಷ್ಟೆ ಸೀಮಿತವಾಗಿ ಹೇಳುವುದಾದರೆ ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ನಾನು ಆಗ್ರಹಿಸುತ್ತೇನೆ. ಈ ನಾಗರಿಕ ಸಮಾಜ ಕೂಡ ಇದನ್ನೇ ಆಗ್ರಹಿಸಬೇಕು, ತನಿಖಾ ಸಂಸ್ಥೆಗಳು ಇದೇ ಹಾದಿಯಲ್ಲಿ ಕರ್ತವ್ಯವನ್ನು ನಿರ್ವಹಿಸಬೇಕೂ ಕೂಡ. ಇದೊಂದು ’ನ್ಯಾಯಪ್ರಜ್ಞೆ’. ಆದರೆ ಈ ಸಮಾಜದೊಳಗೆ ಇರುವ ನೀವು ಸೇರಿದಂತೆ ಇತರೆ ಮಠಾಧೀಶರುಗಳು ಇಂತಹ ನ್ಯಾಯಪ್ರಜ್ಞೆಯನ್ನು ವ್ಯಕ್ತಪಡಿಸದೆ ಆರೋಪಿ ಸ್ಥಾನದಲ್ಲಿರುವ ಮುರುಘಾಶರಣರನ್ನು ಬೆಂಬಲಿಸ ಹೊರಟಿರುವುದು ದೌಭಾರ್ಗ್ಯದ ಸಂಗತಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುರುಘಾಶರಣರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎನ್ನಲಾಗುತ್ತಿರುವ ಇಬ್ಬರು ಬಾಲಕಿಯರು ಹಿಂದುಳಿದ ಮತ್ತು ಮಾದಿಗ ಸಮುದಾಯಕ್ಕೆ ಸೇರಿದವರೆನ್ನಲಾಗಿದೆ. ಇಲ್ಲಿ ಜಾತಿ ಅಪ್ರಸ್ತುತ ನಿಜ, ಹೆಣ್ಣು ಜಾತ್ಯತೀತ ಮತ್ತು ಧರ್ಮಾತೀತವಾಗಿ ಸದಾ ಶೋಷಣೆಗೆ ಒಳಗಾಗುತ್ತಲೇ ಇರುತ್ತಾಳೆ. ಈ ಪ್ರಕರಣದಲ್ಲಿ ಈ ಇಬ್ಬರೂ ಹೆಣ್ಣುಮಕ್ಕಳು ಸಮಾನ ಸಂತ್ರಸ್ತರೇ ಆಗಿರುತ್ತಾರೆ. ಈ ಇಬ್ಬರಲ್ಲೂ ಜಾತಿ ಬಗೆದು ನೋಡಬೇಕಾಗಿಲ್ಲ. ಆದರೆ ಈ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಾದಿಗ ಸಮುದಾಯದ ಹೆಣ್ಣುಮಗಳೊಬ್ಬಳ ಮಾನ, ಪ್ರಾಣ, ಆತ್ಮಗೌರವ, ಸಾಮಾಜಿಕ ಗೌರವ ರಕ್ಷಣೆ ಕುರಿತು ನೀವು ’ಉತ್ತರದಾಯಿ’ಗಳು ಎಂಬುದನ್ನು ಸ್ಪಷ್ಟವಾಗಿ ಆಗ್ರಹಿಸುತ್ತೇನೆ.

ನೀವು, ಈ ನಾಡಿನ ಸಮಸ್ತ ಮಾದಿಗ ಸಮುದಾಯದ ಪ್ರಾತಿನಿಧಿಕ ಧಾರ್ಮಿಕ ನಂಬುಗೆಯ ಶ್ರದ್ಧಾಕೇಂದ್ರವಾದ ಮಾದರಾ ಚನ್ನಯ್ಯಗುರುಪೀಠದ ಪೀಠಾಧ್ಯಕ್ಷರಾಗಿ ಇದೇ ಮುರುಘಾಶರಣರಿಂದ ’ಸದ್ಯೋನ್ಮುಕ್ತ’ ದೀಕ್ಷೆಯನ್ನು ಪಡೆದಿದ್ದೀರ. ಈ ಸಮಾಜದ ಕಟ್ಟಕಡೆಯ ದುರ್ಬಲ ಸಮುದಾಯವಾಗಿರುವ ಮಾದಿಗ ಸಮುದಾಯದ ಗುರುವಾಗಿ ಈ ಸಮುದಾಯವನ್ನು ಸಾಮಾಜಿಕ ಗೌರವ, ಶೈಕ್ಷಣಿಕ ಅಭ್ಯುದಯ, ವೈಚಾರಿಕ ಅರಿವಿನಡೆಗೆ ಕೊಂಡೊಯ್ಯುವ ಗುರಿ ನಿಮ್ಮದಾಗಬೇಕಿತ್ತು. ದುರಾದೃಷ್ಟವೆಂದರೆ ಮಾದಾರಚನ್ನಯ್ಯ ಗುರುಮಠ ಮನೋಲಯ ದೀಕ್ಷೆಯನ್ನೆ ಧಿಕ್ಕರಿಸಿದ ಲೌಕಿಕ ಭೋಗಗಳಲ್ಲೊಂದಾದ ರಾಜಕೀಯ ಮೋಹ ತುಂಬಿದ, ವಚನಸಂಹಿತೆ ಭ್ರಷ್ಟತೆಯ ಮೈದಾನವಾಗಿದೆ. “ನಡೆ ನುಡಿ ಶುದ್ದವಿಲ್ಲದಿದ್ದರೆ ಚಂದೇಶ್ವರಲಿಂಗವಾದರೂ ತಪ್ಪನೊಳಕೊಳ್ಳೆ” ಎಂಬ ಅರಿವನ್ನು ಮರೆತುಬಿಟ್ಟಂತಿದೆ. ಬಸವಣ್ಣ ಯಾವ ವೈದಿಕ ವಿಚಾರಧಾರೆಗಳ ವಿರುದ್ದ ಬಂಡೆದ್ದು ಹೋರಾಡಿದರೂ ಅಂತಹ ವಿಚಾರಧಾರೆಯ ಅನುಯಾಯಿಗಳಿಗಿಂತಲೂ ಮಿಗಿಲಾದ ನಿಮ್ಮ ಸಡಗರ ಬಸವಣ್ಣರಿಗೆ ಬಗೆಯುತ್ತಿರುವ ದ್ರೋಹವೆಂದೆ ಭಾವಿಸಬೇಕಾದ ನಿಷ್ಠುರಕ್ಕೆ ಮಾದಿಗ ಸಮುದಾಯವನ್ನು ದೂಡಿದ್ದೀರ.

ಬಸವಾದಿಶರಣರ ವಚನ ಸಂಹಿತೆಗಳಿಂದ ಮಾದಿಗ ಸಮುದಾಯದ ಹೊಸ ತಲೆಮಾರುಗಳನ್ನು ವೈಚಾರಿಕವಾಗಿ, ಜ್ಞಾನಪೂರ್ಣವಾಗಿ, ಶರಣಸಂಪನ್ನರನ್ನಾಗಿ ಸದೃಢಗೊಳಿಸಬೇಕಿದ್ದ ನಿಮ್ಮಲ್ಲಿ ಸಿದ್ದಾಂತ ವ್ಯತಿರಿಕ್ತವಾದ ವೈದ್ದಿಕತೆ, ಸನಾತನ ವಿಚಾರಧಾರೆಗಳ ಸಂಸ್ಥೆ ಮತ್ತು ರಾಜಕೀಯಪಕ್ಷಗಳ ಪರಿಚಾರಕರತನ ಎದ್ದು ಕಾಣುತ್ತಿದೆ. ಮಾದಿಗ ಸಮುದಾಯದ ಕಲ್ಯಾಣವೆಂದರೆ ತದ್ವಿರುದ್ದ ವಿಚಾರಧಾರೆಯ ಸಂಘಟನೆಗಳ ಮುಂದೆ ನಿಸ್ಸ್ವಾಭಿಮಾನಿಯಾಗಿ ಮಂಡಿಯೂರಿ ಸರ್ಕಾರದಿಂದ ದುಡ್ಡು, ಸೈಟು ಪಡೆದು ಕಟ್ಟಡಗಳನ್ನು ಕಟ್ಟುವುದು, ಇದಕ್ಕೆ ಋಣಸಮರ್ಪಣೆಯಂತೆ ಚುನಾವಣೆಗಳಲ್ಲಿ ಮಾದಿಗ ಸಮುದಾಯವನ್ನು ಒಂದು ರಾಜಕೀಯ ಪಕ್ಷಕ್ಕೆ ಪಕ್ಕಾಗಿಸುವುದು ಎಂದರ್ಥವೇ? “ಗುರುವಿಡಿದು ಕುರುಹ ಕಾಣಬೇಕು. ಗುರುವಿಡಿದು ಅರುಹ ಕಾಣಬೇಕು. ಗುರುವಿಡಿದು ಆಚಾರವ ಕಾಣಬೇಕು” ಎನ್ನುವಾಗ ಮಾದಿಗ ಸಮುದಾಯ ಶರಣಗುರು ದೀಕ್ಷೆಯ ವಿಮುಖರಂತೆ ಕಾಣುತ್ತಿರುವ ನಿಮ್ಮನ್ನು (ಗುರು)ಹಿಡಿದು ಏನು ಕಾಣಬೇಕು ಎಂಬ ಪ್ರಶ್ನೆ ನನ್ನ ಅಸಂಘಟಿತ ಮಾದಿಗ ಸಮುದಾಯದ ಮುಂದೆ ಇದೆ.

ಆರೋಪಿ ಸ್ಥಾನದಲ್ಲಿರುವ ಮುರುಘಾ ಶರಣರನ್ನು ಬೆಂಬಲಿಸುವ ಬಹಿರಂಗ ಹೇಳಿಕೆ ನೀಡುವ ನೀವು ತಮ್ಮದೆ ಆದ ಮಾದಿಗ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳು ಸಂತ್ರಸ್ತೆಯಾಗಿರುವುದನ್ನು ಮರೆತುಬಿಟ್ಟಿರೇಕೆ? ಆ ಹೆಣ್ಣು ಮಗು , ಮತ್ತವರ ಕುಟುಂಬ ಆರೋಪಿಯ ಬಲಿಷ್ಠ ಪ್ರಭಾವದ ಕಾವಿನಲ್ಲಿ ಹೇಗೆಲ್ಲಾ ನರಳಿ ನಲುಗುತ್ತಿರಬಹುದು ಎಂಬುದನ್ನು ನಿಸ್ಸಂಸಾರಿಯಾದ ನೀವು ಅರ್ಥಮಾಡಿಕೊಳ್ಳಲು ಸಾಧ್ಯವೆ?!

ಈ ಸಮಾಜದಲ್ಲಿ ಬಲಿಷ್ಠ ಜಾತಿಗಳು ಭ್ರಷ್ಟಾಚಾರ, ಅತ್ಯಾಚಾರ ಏನೆಲ್ಲಾ ಮಾಡಿಯೂ ದಕ್ಕಿಸಿಕೊಂಡು ಬಿಡಬಲ್ಲವೂ, ಮತ್ತೆ ಸಮಾಜದ ಮುಖ್ಯವಾಹಿನಿಯಲ್ಲಿ ಆ ಸಮುದಾಯದ ಕಳಂಕಿತರು ಗಣ್ಯರಾಗಿ, ಮಾನ್ಯರಾಗಿ ಮೆರೆಯಬಲ್ಲವರು. ಅವರ ಬದುಕು ಒಂದು ಆದರ್ಶವೂ ಆಗಿಬಿಡಬಲ್ಲದು ಎಂಬುದಕ್ಕೆ ಅನೇಕ ನಿದರ್ಶನಗಳಿವೆ. ಆದರೆ ತಲೆಗೆ ಬಟ್ಟೆ ಇಲ್ಲದ ಜಾತಿಗಳಿಗೆ ಇಂತಹ ಶಕ್ತಿ -ಯುಕ್ತಿ ಇಲ್ಲ. ಹಾಗೊಮ್ಮೆ ಇಂತಹುದ್ದೇ ಆರೋಪ ಈ ತಬ್ಬಲಿ ಜಾತಿಗಳ ಮಠಾಧಿಪತಿಗಳ ಮೇಲೆ ಬಂದಿದ್ದರೆ ಇಷ್ಟೊತ್ತಿಗೆ ಏನೆಲ್ಲಾ ಪರಿಣಾಮ ಆಗಿರುತ್ತಿತ್ತು ಎಂಬುದನ್ನು ನಿಮ್ಮ ಊಹೆಗೆ ಬಿಡುತ್ತೇನೆ.

ಸತ್ಯ ಮತ್ತು ನ್ಯಾಯದ ಪ್ರಶ್ನೆ ಬಂದಾಗ ಬಿಜ್ಜಳನ ಭಂಡಾರ ಪದವಿಯನ್ನೆ ಧಿಕ್ಕರಿಸಿ ಬಂದ ಬಸವಣ್ಣ, ತನ್ನ ಸಮುದಾಯದ ಸ್ವಾಭಿಮಾನಕ್ಕಾಗಿ ಬದುಕನ್ನೆ ತ್ಯಾಗ ಮಾಡಿದ ಬಾಬಾಸಾಹೇಬ್ ಅಂಬೇಡ್ಕರ್ ನಿಮಗೆ ಎಲ್ಲಾ ಕಾಲಕ್ಕೂ ಆದರ್ಶರು ಎನಿಸುವುದಿಲ್ಲವೆ? ಪ್ರಕರಣ ತನಿಖೆಯ ಆರಂಭಿಕ ಹಂತದಲ್ಲಿರುವಾಗ ಯಾರೇ ಆದರೋ ಪ್ರಭಾವಿ ಆರೋಪಿಗೆ ಬೆಂಬಲ ನೀಡುವುದು ಸತ್ಯದ ಮೇಲೆ, ಸಹಜ ನ್ಯಾಯದ ಮೇಲೆ ದುಷ್ಪರಿಣಾಮ ಬೀರುವ ಅಥವಾ ಸಂತ್ರಸ್ತೆಯನ್ನು ಅಸಹಾಯಕಳನ್ನಾಗಿ ಮಾಡುವ ಬೆದರಿಕೆಯೂ ಆಗಿರುತ್ತದೆ.

ಇದನ್ನೂ ಓದಿರಿ: ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಮುರುಘಾಮಠಕ್ಕೆ ’ಲಿಂಗಾಯಿತ ಪರಂಪರೆ’ (ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಬಲಿಷ್ಠವಾದ) ಇದೆ. ಅದು ತೀರ‍್ಮಾನ ಕೈಗೊಳ್ಳುತ್ತದೆ ಎಂದು ಹೆಮ್ಮೆಯಿಂದ ಹೇಳುವ ನೀವು ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ದುರ್ಬಲವಾಗಿರುವ ಮಾದಿಗ ಸಮುದಾಯದ ಅಪ್ರಾಪ್ತ ಹೆಣ್ಣುಮಗಳೊಬ್ಬಳ ಮತ್ತು ಆಕೆಯ ಕುಟುಂಬದ ಆತ್ಮಗೌರವ, ಚಾರಿತ್ರ್ಯವನ್ನು ಕಾಪಾಡುವುದು, ದಿಟ್ಟದನಿಯಲ್ಲಿ ನ್ಯಾಯ ಕೇಳುವುದು ಮತ್ತು ತನ್ನ ದುರ್ಬಲ ಸಮುದಾಯದ ಜೊತೆ ನಿಲ್ಲುವುದು ಧರ್ಮ, ನ್ಯಾಯ ಮತ್ತು ಆತ್ಮಸಾಕ್ಷಿಯ ನಡೆಯಾಗುತ್ತದೆ.

ಇದಕ್ಕೆ ಭಿನ್ನ ಹಾದಿ ನಿಮ್ಮದಾದರೆ ನಿಮಗೆ ಮಾದಿಗ ಸಮುದಾಯವನ್ನು ಪ್ರತಿನಿಧಿಸುವ ಯಾವ ನೈತಿಕ ಹಕ್ಕಿಲ್ಲ. ನಿಮ್ಮನ್ನು ಗುರುವೆಂದು ಮಾದಿಗ ಸಮುದಾಯ ಭಾವಿಸಬೇಕಾಗಿಲ್ಲ ಎಂದೆನಿಸುತ್ತದೆ.

  • ಎನ್.ರವಿಕುಮಾರ್ ,
    ಪತ್ರಕರ್ತ, ಲೇಖಕ
    30/8/2022
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸ್ವಾಮಿಗಳು ಅನೈತಿಕತೆಗೆ ಸಪೋರ್ಟ್ ಮಾಡಿದ್ರೆ ಅವುಗಳನ್ನು ಸ್ವಾಮಿಗಳು ಅನ್ನೋಕೆ ನಾಚಿಕೆ ಯಾಗುತ್ತೆ ಅವರು ಹೇಸಿಗೆಗಿಂತ ಕಡೆಯಾಗುತ್ತಾರೆ ದೇವರ ಮೇಲೆ ಭಕ್ತಿ ಇಲ್ಲದ ಈ ಕಾಲದಲ್ಲಿ ಸ್ವಾಮಿ ಗಳಿಗೆ ಇನ್ಯಾವ ಮರ್ಯಾದೆ ಕೊಡಬೇಕು ಹೇಳಿ. ಅದರಲ್ಲೂ ಇಂಥ ನೀಚ ಕೆಲಸ ಮಾಡಿರುವ ಸ್ವಾಮಿಗಳಿಗೆ

  2. What is the contribution of Madara Channaiah Swamy to his community people. Has he helped any one from his community. Instead he is making fortune using name of community.oppressed communities can’t expect to good from such psudo swamies. Lower class swamies act as Chelas to powerful Mutts.

  3. ಇವರು ಮತ್ತು ಇಂತವರು ತಮ್ಮನ್ನು ತಾವೇ “ಮಾರಾಟ ಮಾಡಿಕೊಂಡ” ಸ್ವಾಮೀಜಿಗಳು. ಇವರು ಜನಾಂಗಕ್ಕೆ ದಾರಿ ದೀಪ ಎಂಬುದು ಬ್ರಮೆ.

  4. ಮಂಗಮೂತಿ ಕಾಯಿ ಹುಟ್ಟಿ ವನವೆಲ್ಲ ನಾಶವಾಯಿತು ಎಂಬ ಗಾದೆ ಗ್ರಾಮೀಣರಲ್ಲಿದೆ. ಹಾಗೆಯೇ ಇಂಥವರು ಮಂಗಮೂತಿ ಕಾಯಿ ಆಗುವರೇ ಹೊರತು ನೊಂದ ಸಮುದಾಯಗಳಿಗೆ ಫಲ ಆಗಲಾರರು.

  5. ಸಮಾಜದ ಜನರನ್ನ ರಕ್ಷಣೆ ಮಾಡದ ಅನ್ಯಾಯವನ್ನು ಪ್ರತಿಭಟಿಸಿದ ಇಂತಹ ಸ್ವಾಮಿ ನಮಗೆ ಏತಕ್ಕೆ ಬೇಕು ?ಇವರ ವರ್ತನೆ ನೋಡಿದರೆ ತಾವೊಬ್ಬ ಮುಂದುವರೆದ ಸಮಾಜದ ಸ್ವಾಮಿಯ ರೀತಿಯಲ್ಲಿ ಇದೆ.
    ಸಮಾಜದ ಹೆಣ್ಣು ಮಗಳ ಪರವಾಗಿದ್ದರೆ ಸರಿ ಇಲ್ಲದಿದ್ದರೆ ಸ್ವಾಮಿಗಳನ್ನು ಸ್ಥಾನಪಲ್ಲಟ ಮಾಡುವುದೇ ಒಳ್ಳೆಯದು

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...