Homeಮುಖಪುಟದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ.

- Advertisement -
- Advertisement -

ಮಾನ್ಯ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ

ವಂದನೆಗಳು

ನಿಮ್ಮ ಇ-ಮೇಲ್ ಐಡಿ nimmasuresh (ನಿಮ್ಮ ಸುರೇಶ್) ಎಂದಿದೆ. ನೀವು ನಮ್ಮ ಸುರೇಶ್ ಅಂದುಕೊಂಡಿದ್ದರಿಂದಲೇ ತಮಗೆ ಈ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಹೇಳಿಕೆ, “ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ”-ನೋಡಿ ನನಗೆ ಶಾಕ್ ಆಯಿತು.

ಶ್ರೀ ಎಚ್.ಎಸ್.ದೊರೆಸ್ವಾಮಿಯವರು ಕಳೆದ ಚುನಾವಣೆಯ ಹಿಂದಿನ ದಿನ ಯಾರಿಗೆ ಮತನೀಡಬೇಕೆಂದು ಕರೆ ನೀಡುತ್ತಾ, ಮೋದಿಯವರ ವೈಫಲ್ಯಗಳನ್ನು ಹಾಗೂ ಸರ್ವಾಧಿಕಾರಿ ಪ್ರವೃತ್ತಿಯನ್ನು ವಿವರಿಸುತ್ತಾ, “ಆತ ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ. ಯಾವ ಕೆಲಸ ಮಾಡಿಲ್ಲ. ಕರ್ನಾಟಕವನ್ನು ತೆಗೆದುಕೊಂಡು ಬಿಟ್ರೆ ಇಡೀ ದೇಶವನ್ನು ತಗೋಬಹುದು ಎನ್ನುವ ಆಲೋಚನೆ ಇದೆ. ಆದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು” ಎಂದು ಹೇಳುತ್ತಾರೆ. ಇದರ ಅರ್ಥ ಸಾಯಿಸಬೇಕು ಎಂದಾಗುವುದೇ? ಅವರ ಮಾತುಗಳಲ್ಲಿ ಎತ್ತಿದ ಸಮಸ್ಯೆಗಳತ್ತ ಕಣ್ಣೆತ್ತೂ ನೋಡುವ ಧೈರ್ಯವಿಲ್ಲದೆ, ಅದನ್ನು ಅಪಾರ್ಥ ಮಾಡಿ, ನೂರು ವರ್ಷಕ್ಕೂ ಮಿಗಿಲಾಗಿ ಅಹಿಂಸೆಯ ವ್ರತ ಪಾಲಿಸಿಕೊಂಡು, ಯಾವುದೋ ಯುಗದ ಮನುಷ್ಯನೊಬ್ಬ ನಮ್ಮ ನಡುವೆ ಬದುಕಿರುವ ಸೋಜಿಗ ಕಾಣದೆ ಸದೆಬಡಿಯುವುದಾದರೆ ನಾವು ಲಿಲ್ಲಿ ಪುಟ್ಟರಂತಾಗಿಬಿಡುತ್ತೇವೆ.

ಸ್ಪಷ್ಟತೆಗಾಗಿ ಒಂದು ಉದಾಹರಣೆ ನೋಡೋಣ: ಇಂದಿನ ಓಲೈಕೆ, ಅವಕಾಶವಾದಿ ರಾಜಕಾರಣದಲ್ಲಿ ಇದೇ ಶ್ರೀ ಬಸವನಗೌಡ ಯತ್ನಾಳ್, ಶ್ರೀ ಈಶ್ವರಪ್ಪ ಅಥವಾ ಮತ್ತಾರೋ ಮೋದಿಯವರ ವಿರೋಧಿಗಳಾಗಿದ್ದರೆ ಅವರು ತಮ್ಮ ಸ್ವಭಾವಕ್ಕೆ ತಕ್ಕಂತೆ ಏನು ಹೇಳುತ್ತಿದ್ದರು? ಮೋದಿಯವರ ತಲೆಗೆ ಹತ್ತಿಪ್ಪತ್ತು ಕೋಟಿ ಫತ್ವಾ ಹೊರಡಿಸುತ್ತಿದ್ದರೇನೋ! ಇಂಥವರು ದೊರೆಸ್ವಾಮಿ ಅವರನ್ನು “ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎನ್ನುತ್ತಾರೆ! ಅಂದರೆ, ರಾಜಕಾರಣವೆಂಬುದು ಅದೇನು ಜಾದೂ, ಕಣ್ಕಟ್ಟು ವಿದ್ಯೆಯೇ? ಅಸಲಿಯನ್ನು ನಕಲಿ ಮಾಡುವುದಕ್ಕೆ, ನಕಲಿಯನ್ನು ಅಸಲಿ ಮಾಡುವುದಕ್ಕೆ? ದೊರೆಸ್ವಾಮಿ ಅವರನ್ನು “ಪಾಕ್ ಏಜೆಂಟ್” ಎನ್ನುವುದಕ್ಕೆ ಇವರ ನಾಲಿಗೆ ಹೇಗೆ ಹೊರಳಿತು? ಇಂದಿನ ನಮ್ಮ ಬಹುತೇಕ ರಾಜಕಾರಣಿಗಳಲ್ಲಿ ಕೆಲವರಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಕಾರು ನಾಲಿಗೆಗಳು. ಇಲ್ಲಿದ್ದಾಗ ಮಾತನಾಡಲು ಒಂದು, ಇನ್ನೊಂದು ಕಡೆ ಹೋದಾಗ ಮತ್ತೊಂದು, ನುಂಗಲು ಮಗದೊಂದು-ಹೀಗೆ.

ಇಂದು ಜನಪ್ರತಿನಿಧಿಗಳು ತಮ್ಮನ್ನು ಜನಪ್ರತಿನಿಧಿಗಳು ಅಂದುಕೊಂಡಿಲ್ಲ. ಶಾಸಕರು ಶಾಸಕ ಅಂದುಕೊಂಡಿಲ್ಲ. ಯಾರೂ ತಮ್ಮ ಸ್ಥಾನಕ್ಕೆ ಹೊಣೆಗಾರರಾಗಿಲ್ಲ. ಇದು ಇಂದಿನ ಸಮಸ್ಯೆಯಾಗಿದೆ. ಉದಾಹರಣೆಗೆ, ಶ್ರೀ ಯತ್ನಾಳ್ ಅವರ ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಾ ಅದು ‘ಗುಳೆ ಜಿಲ್ಲೆ’ ಎನ್ನಿಸಿಕೊಂಡುಬಿಟ್ಟಿದೆ. ಯತ್ನಾಳರನ್ನು ಆಯ್ಕೆ ಮಾಡಿದ ‘ಮತದಾರ ಪ್ರಭುಗಳು’ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೆಲಸ ಅರಸುತ್ತಾ ಗೋವಾ, ಮಹಾರಾಷ್ಟ್ರದ ಕಡೆಗೆ ಗುಳೆ ಹೋಗುವುದು ದಿನೇದಿನೇ ಹೆಚ್ಚುತ್ತಿದೆ. ಅದೇ ವಿಜಯಪುರದಲ್ಲಿ ಒಂದು ದೊಡ್ಡದಾದ ಕೈಗಾರಿಕಾ ಪ್ರದೇಶವಿದೆ. ಆದರೆ, ಆ ಕೈಗಾರಿಕಾ ಪ್ರದೇಶವು ವಿದ್ಯುತ್ ಮತ್ತಿತರ ಮೂಲಸೌಲಭ್ಯಗಳಿಲ್ಲದೆ ನೊಣ ಹೊಡೆಯುತ್ತಿದೆ. ಇಂತಹ ಕಡೆ ಶಾಸಕನಾದವನು ಮಾತಾಡಲೂ ಪುರುಸೊತ್ತಿಲ್ಲದವನಂತೆ ಆ ಕೈಗಾರಿಕಾ ಕ್ಷೇತ್ರಕ್ಕೆ ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಲು ಕಾರ್ಯಪ್ರವೃತ್ತನಾಗಿರಬೇಕಿತ್ತು. ಆದರೇನಾಗಿದೆ? ಜನಪ್ರತಿನಿಧಿಗಳು ಹೊಣೆಗೇಡಿಯಾಗಿದ್ದಾರೆ. ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಿರುವ ಜನರು ಅವಜ್ಞೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವ ಪಕ್ಷದಲ್ಲೇ ಇರಲಿ ತಮ್ಮಂಥವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ತಪ್ಪಲ್ಲ ಎಂದುಕೊಂಡಿದ್ದೇನೆ.

ತುಂಬಾ ಹೆಚ್ಚಾಗಿ ಬರೆದುಬಿಟ್ಟೆ. ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ. ಕ್ಷಮೆ ಇರಲಿ.

ನಿಮ್ಮ ವಿಶ್ವಾಸಿ

ದೇವನೂರ ಮಹಾದೇವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...