Homeಮುಖಪುಟದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ.

- Advertisement -
- Advertisement -

ಮಾನ್ಯ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ

ವಂದನೆಗಳು

ನಿಮ್ಮ ಇ-ಮೇಲ್ ಐಡಿ nimmasuresh (ನಿಮ್ಮ ಸುರೇಶ್) ಎಂದಿದೆ. ನೀವು ನಮ್ಮ ಸುರೇಶ್ ಅಂದುಕೊಂಡಿದ್ದರಿಂದಲೇ ತಮಗೆ ಈ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಹೇಳಿಕೆ, “ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ”-ನೋಡಿ ನನಗೆ ಶಾಕ್ ಆಯಿತು.

ಶ್ರೀ ಎಚ್.ಎಸ್.ದೊರೆಸ್ವಾಮಿಯವರು ಕಳೆದ ಚುನಾವಣೆಯ ಹಿಂದಿನ ದಿನ ಯಾರಿಗೆ ಮತನೀಡಬೇಕೆಂದು ಕರೆ ನೀಡುತ್ತಾ, ಮೋದಿಯವರ ವೈಫಲ್ಯಗಳನ್ನು ಹಾಗೂ ಸರ್ವಾಧಿಕಾರಿ ಪ್ರವೃತ್ತಿಯನ್ನು ವಿವರಿಸುತ್ತಾ, “ಆತ ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ. ಯಾವ ಕೆಲಸ ಮಾಡಿಲ್ಲ. ಕರ್ನಾಟಕವನ್ನು ತೆಗೆದುಕೊಂಡು ಬಿಟ್ರೆ ಇಡೀ ದೇಶವನ್ನು ತಗೋಬಹುದು ಎನ್ನುವ ಆಲೋಚನೆ ಇದೆ. ಆದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು” ಎಂದು ಹೇಳುತ್ತಾರೆ. ಇದರ ಅರ್ಥ ಸಾಯಿಸಬೇಕು ಎಂದಾಗುವುದೇ? ಅವರ ಮಾತುಗಳಲ್ಲಿ ಎತ್ತಿದ ಸಮಸ್ಯೆಗಳತ್ತ ಕಣ್ಣೆತ್ತೂ ನೋಡುವ ಧೈರ್ಯವಿಲ್ಲದೆ, ಅದನ್ನು ಅಪಾರ್ಥ ಮಾಡಿ, ನೂರು ವರ್ಷಕ್ಕೂ ಮಿಗಿಲಾಗಿ ಅಹಿಂಸೆಯ ವ್ರತ ಪಾಲಿಸಿಕೊಂಡು, ಯಾವುದೋ ಯುಗದ ಮನುಷ್ಯನೊಬ್ಬ ನಮ್ಮ ನಡುವೆ ಬದುಕಿರುವ ಸೋಜಿಗ ಕಾಣದೆ ಸದೆಬಡಿಯುವುದಾದರೆ ನಾವು ಲಿಲ್ಲಿ ಪುಟ್ಟರಂತಾಗಿಬಿಡುತ್ತೇವೆ.

ಸ್ಪಷ್ಟತೆಗಾಗಿ ಒಂದು ಉದಾಹರಣೆ ನೋಡೋಣ: ಇಂದಿನ ಓಲೈಕೆ, ಅವಕಾಶವಾದಿ ರಾಜಕಾರಣದಲ್ಲಿ ಇದೇ ಶ್ರೀ ಬಸವನಗೌಡ ಯತ್ನಾಳ್, ಶ್ರೀ ಈಶ್ವರಪ್ಪ ಅಥವಾ ಮತ್ತಾರೋ ಮೋದಿಯವರ ವಿರೋಧಿಗಳಾಗಿದ್ದರೆ ಅವರು ತಮ್ಮ ಸ್ವಭಾವಕ್ಕೆ ತಕ್ಕಂತೆ ಏನು ಹೇಳುತ್ತಿದ್ದರು? ಮೋದಿಯವರ ತಲೆಗೆ ಹತ್ತಿಪ್ಪತ್ತು ಕೋಟಿ ಫತ್ವಾ ಹೊರಡಿಸುತ್ತಿದ್ದರೇನೋ! ಇಂಥವರು ದೊರೆಸ್ವಾಮಿ ಅವರನ್ನು “ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎನ್ನುತ್ತಾರೆ! ಅಂದರೆ, ರಾಜಕಾರಣವೆಂಬುದು ಅದೇನು ಜಾದೂ, ಕಣ್ಕಟ್ಟು ವಿದ್ಯೆಯೇ? ಅಸಲಿಯನ್ನು ನಕಲಿ ಮಾಡುವುದಕ್ಕೆ, ನಕಲಿಯನ್ನು ಅಸಲಿ ಮಾಡುವುದಕ್ಕೆ? ದೊರೆಸ್ವಾಮಿ ಅವರನ್ನು “ಪಾಕ್ ಏಜೆಂಟ್” ಎನ್ನುವುದಕ್ಕೆ ಇವರ ನಾಲಿಗೆ ಹೇಗೆ ಹೊರಳಿತು? ಇಂದಿನ ನಮ್ಮ ಬಹುತೇಕ ರಾಜಕಾರಣಿಗಳಲ್ಲಿ ಕೆಲವರಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಕಾರು ನಾಲಿಗೆಗಳು. ಇಲ್ಲಿದ್ದಾಗ ಮಾತನಾಡಲು ಒಂದು, ಇನ್ನೊಂದು ಕಡೆ ಹೋದಾಗ ಮತ್ತೊಂದು, ನುಂಗಲು ಮಗದೊಂದು-ಹೀಗೆ.

ಇಂದು ಜನಪ್ರತಿನಿಧಿಗಳು ತಮ್ಮನ್ನು ಜನಪ್ರತಿನಿಧಿಗಳು ಅಂದುಕೊಂಡಿಲ್ಲ. ಶಾಸಕರು ಶಾಸಕ ಅಂದುಕೊಂಡಿಲ್ಲ. ಯಾರೂ ತಮ್ಮ ಸ್ಥಾನಕ್ಕೆ ಹೊಣೆಗಾರರಾಗಿಲ್ಲ. ಇದು ಇಂದಿನ ಸಮಸ್ಯೆಯಾಗಿದೆ. ಉದಾಹರಣೆಗೆ, ಶ್ರೀ ಯತ್ನಾಳ್ ಅವರ ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಾ ಅದು ‘ಗುಳೆ ಜಿಲ್ಲೆ’ ಎನ್ನಿಸಿಕೊಂಡುಬಿಟ್ಟಿದೆ. ಯತ್ನಾಳರನ್ನು ಆಯ್ಕೆ ಮಾಡಿದ ‘ಮತದಾರ ಪ್ರಭುಗಳು’ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೆಲಸ ಅರಸುತ್ತಾ ಗೋವಾ, ಮಹಾರಾಷ್ಟ್ರದ ಕಡೆಗೆ ಗುಳೆ ಹೋಗುವುದು ದಿನೇದಿನೇ ಹೆಚ್ಚುತ್ತಿದೆ. ಅದೇ ವಿಜಯಪುರದಲ್ಲಿ ಒಂದು ದೊಡ್ಡದಾದ ಕೈಗಾರಿಕಾ ಪ್ರದೇಶವಿದೆ. ಆದರೆ, ಆ ಕೈಗಾರಿಕಾ ಪ್ರದೇಶವು ವಿದ್ಯುತ್ ಮತ್ತಿತರ ಮೂಲಸೌಲಭ್ಯಗಳಿಲ್ಲದೆ ನೊಣ ಹೊಡೆಯುತ್ತಿದೆ. ಇಂತಹ ಕಡೆ ಶಾಸಕನಾದವನು ಮಾತಾಡಲೂ ಪುರುಸೊತ್ತಿಲ್ಲದವನಂತೆ ಆ ಕೈಗಾರಿಕಾ ಕ್ಷೇತ್ರಕ್ಕೆ ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಲು ಕಾರ್ಯಪ್ರವೃತ್ತನಾಗಿರಬೇಕಿತ್ತು. ಆದರೇನಾಗಿದೆ? ಜನಪ್ರತಿನಿಧಿಗಳು ಹೊಣೆಗೇಡಿಯಾಗಿದ್ದಾರೆ. ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಿರುವ ಜನರು ಅವಜ್ಞೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವ ಪಕ್ಷದಲ್ಲೇ ಇರಲಿ ತಮ್ಮಂಥವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ತಪ್ಪಲ್ಲ ಎಂದುಕೊಂಡಿದ್ದೇನೆ.

ತುಂಬಾ ಹೆಚ್ಚಾಗಿ ಬರೆದುಬಿಟ್ಟೆ. ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ. ಕ್ಷಮೆ ಇರಲಿ.

ನಿಮ್ಮ ವಿಶ್ವಾಸಿ

ದೇವನೂರ ಮಹಾದೇವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...