Homeಮುಖಪುಟದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ.

- Advertisement -
- Advertisement -

ಮಾನ್ಯ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ

ವಂದನೆಗಳು

ನಿಮ್ಮ ಇ-ಮೇಲ್ ಐಡಿ nimmasuresh (ನಿಮ್ಮ ಸುರೇಶ್) ಎಂದಿದೆ. ನೀವು ನಮ್ಮ ಸುರೇಶ್ ಅಂದುಕೊಂಡಿದ್ದರಿಂದಲೇ ತಮಗೆ ಈ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಹೇಳಿಕೆ, “ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ”-ನೋಡಿ ನನಗೆ ಶಾಕ್ ಆಯಿತು.

ಶ್ರೀ ಎಚ್.ಎಸ್.ದೊರೆಸ್ವಾಮಿಯವರು ಕಳೆದ ಚುನಾವಣೆಯ ಹಿಂದಿನ ದಿನ ಯಾರಿಗೆ ಮತನೀಡಬೇಕೆಂದು ಕರೆ ನೀಡುತ್ತಾ, ಮೋದಿಯವರ ವೈಫಲ್ಯಗಳನ್ನು ಹಾಗೂ ಸರ್ವಾಧಿಕಾರಿ ಪ್ರವೃತ್ತಿಯನ್ನು ವಿವರಿಸುತ್ತಾ, “ಆತ ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ. ಯಾವ ಕೆಲಸ ಮಾಡಿಲ್ಲ. ಕರ್ನಾಟಕವನ್ನು ತೆಗೆದುಕೊಂಡು ಬಿಟ್ರೆ ಇಡೀ ದೇಶವನ್ನು ತಗೋಬಹುದು ಎನ್ನುವ ಆಲೋಚನೆ ಇದೆ. ಆದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು” ಎಂದು ಹೇಳುತ್ತಾರೆ. ಇದರ ಅರ್ಥ ಸಾಯಿಸಬೇಕು ಎಂದಾಗುವುದೇ? ಅವರ ಮಾತುಗಳಲ್ಲಿ ಎತ್ತಿದ ಸಮಸ್ಯೆಗಳತ್ತ ಕಣ್ಣೆತ್ತೂ ನೋಡುವ ಧೈರ್ಯವಿಲ್ಲದೆ, ಅದನ್ನು ಅಪಾರ್ಥ ಮಾಡಿ, ನೂರು ವರ್ಷಕ್ಕೂ ಮಿಗಿಲಾಗಿ ಅಹಿಂಸೆಯ ವ್ರತ ಪಾಲಿಸಿಕೊಂಡು, ಯಾವುದೋ ಯುಗದ ಮನುಷ್ಯನೊಬ್ಬ ನಮ್ಮ ನಡುವೆ ಬದುಕಿರುವ ಸೋಜಿಗ ಕಾಣದೆ ಸದೆಬಡಿಯುವುದಾದರೆ ನಾವು ಲಿಲ್ಲಿ ಪುಟ್ಟರಂತಾಗಿಬಿಡುತ್ತೇವೆ.

ಸ್ಪಷ್ಟತೆಗಾಗಿ ಒಂದು ಉದಾಹರಣೆ ನೋಡೋಣ: ಇಂದಿನ ಓಲೈಕೆ, ಅವಕಾಶವಾದಿ ರಾಜಕಾರಣದಲ್ಲಿ ಇದೇ ಶ್ರೀ ಬಸವನಗೌಡ ಯತ್ನಾಳ್, ಶ್ರೀ ಈಶ್ವರಪ್ಪ ಅಥವಾ ಮತ್ತಾರೋ ಮೋದಿಯವರ ವಿರೋಧಿಗಳಾಗಿದ್ದರೆ ಅವರು ತಮ್ಮ ಸ್ವಭಾವಕ್ಕೆ ತಕ್ಕಂತೆ ಏನು ಹೇಳುತ್ತಿದ್ದರು? ಮೋದಿಯವರ ತಲೆಗೆ ಹತ್ತಿಪ್ಪತ್ತು ಕೋಟಿ ಫತ್ವಾ ಹೊರಡಿಸುತ್ತಿದ್ದರೇನೋ! ಇಂಥವರು ದೊರೆಸ್ವಾಮಿ ಅವರನ್ನು “ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎನ್ನುತ್ತಾರೆ! ಅಂದರೆ, ರಾಜಕಾರಣವೆಂಬುದು ಅದೇನು ಜಾದೂ, ಕಣ್ಕಟ್ಟು ವಿದ್ಯೆಯೇ? ಅಸಲಿಯನ್ನು ನಕಲಿ ಮಾಡುವುದಕ್ಕೆ, ನಕಲಿಯನ್ನು ಅಸಲಿ ಮಾಡುವುದಕ್ಕೆ? ದೊರೆಸ್ವಾಮಿ ಅವರನ್ನು “ಪಾಕ್ ಏಜೆಂಟ್” ಎನ್ನುವುದಕ್ಕೆ ಇವರ ನಾಲಿಗೆ ಹೇಗೆ ಹೊರಳಿತು? ಇಂದಿನ ನಮ್ಮ ಬಹುತೇಕ ರಾಜಕಾರಣಿಗಳಲ್ಲಿ ಕೆಲವರಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಕಾರು ನಾಲಿಗೆಗಳು. ಇಲ್ಲಿದ್ದಾಗ ಮಾತನಾಡಲು ಒಂದು, ಇನ್ನೊಂದು ಕಡೆ ಹೋದಾಗ ಮತ್ತೊಂದು, ನುಂಗಲು ಮಗದೊಂದು-ಹೀಗೆ.

ಇಂದು ಜನಪ್ರತಿನಿಧಿಗಳು ತಮ್ಮನ್ನು ಜನಪ್ರತಿನಿಧಿಗಳು ಅಂದುಕೊಂಡಿಲ್ಲ. ಶಾಸಕರು ಶಾಸಕ ಅಂದುಕೊಂಡಿಲ್ಲ. ಯಾರೂ ತಮ್ಮ ಸ್ಥಾನಕ್ಕೆ ಹೊಣೆಗಾರರಾಗಿಲ್ಲ. ಇದು ಇಂದಿನ ಸಮಸ್ಯೆಯಾಗಿದೆ. ಉದಾಹರಣೆಗೆ, ಶ್ರೀ ಯತ್ನಾಳ್ ಅವರ ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಾ ಅದು ‘ಗುಳೆ ಜಿಲ್ಲೆ’ ಎನ್ನಿಸಿಕೊಂಡುಬಿಟ್ಟಿದೆ. ಯತ್ನಾಳರನ್ನು ಆಯ್ಕೆ ಮಾಡಿದ ‘ಮತದಾರ ಪ್ರಭುಗಳು’ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೆಲಸ ಅರಸುತ್ತಾ ಗೋವಾ, ಮಹಾರಾಷ್ಟ್ರದ ಕಡೆಗೆ ಗುಳೆ ಹೋಗುವುದು ದಿನೇದಿನೇ ಹೆಚ್ಚುತ್ತಿದೆ. ಅದೇ ವಿಜಯಪುರದಲ್ಲಿ ಒಂದು ದೊಡ್ಡದಾದ ಕೈಗಾರಿಕಾ ಪ್ರದೇಶವಿದೆ. ಆದರೆ, ಆ ಕೈಗಾರಿಕಾ ಪ್ರದೇಶವು ವಿದ್ಯುತ್ ಮತ್ತಿತರ ಮೂಲಸೌಲಭ್ಯಗಳಿಲ್ಲದೆ ನೊಣ ಹೊಡೆಯುತ್ತಿದೆ. ಇಂತಹ ಕಡೆ ಶಾಸಕನಾದವನು ಮಾತಾಡಲೂ ಪುರುಸೊತ್ತಿಲ್ಲದವನಂತೆ ಆ ಕೈಗಾರಿಕಾ ಕ್ಷೇತ್ರಕ್ಕೆ ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಲು ಕಾರ್ಯಪ್ರವೃತ್ತನಾಗಿರಬೇಕಿತ್ತು. ಆದರೇನಾಗಿದೆ? ಜನಪ್ರತಿನಿಧಿಗಳು ಹೊಣೆಗೇಡಿಯಾಗಿದ್ದಾರೆ. ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಿರುವ ಜನರು ಅವಜ್ಞೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವ ಪಕ್ಷದಲ್ಲೇ ಇರಲಿ ತಮ್ಮಂಥವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ತಪ್ಪಲ್ಲ ಎಂದುಕೊಂಡಿದ್ದೇನೆ.

ತುಂಬಾ ಹೆಚ್ಚಾಗಿ ಬರೆದುಬಿಟ್ಟೆ. ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ. ಕ್ಷಮೆ ಇರಲಿ.

ನಿಮ್ಮ ವಿಶ್ವಾಸಿ

ದೇವನೂರ ಮಹಾದೇವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...