Homeಮುಖಪುಟದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ.

- Advertisement -
- Advertisement -

ಮಾನ್ಯ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ

ವಂದನೆಗಳು

ನಿಮ್ಮ ಇ-ಮೇಲ್ ಐಡಿ nimmasuresh (ನಿಮ್ಮ ಸುರೇಶ್) ಎಂದಿದೆ. ನೀವು ನಮ್ಮ ಸುರೇಶ್ ಅಂದುಕೊಂಡಿದ್ದರಿಂದಲೇ ತಮಗೆ ಈ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಹೇಳಿಕೆ, “ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ”-ನೋಡಿ ನನಗೆ ಶಾಕ್ ಆಯಿತು.

ಶ್ರೀ ಎಚ್.ಎಸ್.ದೊರೆಸ್ವಾಮಿಯವರು ಕಳೆದ ಚುನಾವಣೆಯ ಹಿಂದಿನ ದಿನ ಯಾರಿಗೆ ಮತನೀಡಬೇಕೆಂದು ಕರೆ ನೀಡುತ್ತಾ, ಮೋದಿಯವರ ವೈಫಲ್ಯಗಳನ್ನು ಹಾಗೂ ಸರ್ವಾಧಿಕಾರಿ ಪ್ರವೃತ್ತಿಯನ್ನು ವಿವರಿಸುತ್ತಾ, “ಆತ ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ. ಯಾವ ಕೆಲಸ ಮಾಡಿಲ್ಲ. ಕರ್ನಾಟಕವನ್ನು ತೆಗೆದುಕೊಂಡು ಬಿಟ್ರೆ ಇಡೀ ದೇಶವನ್ನು ತಗೋಬಹುದು ಎನ್ನುವ ಆಲೋಚನೆ ಇದೆ. ಆದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು” ಎಂದು ಹೇಳುತ್ತಾರೆ. ಇದರ ಅರ್ಥ ಸಾಯಿಸಬೇಕು ಎಂದಾಗುವುದೇ? ಅವರ ಮಾತುಗಳಲ್ಲಿ ಎತ್ತಿದ ಸಮಸ್ಯೆಗಳತ್ತ ಕಣ್ಣೆತ್ತೂ ನೋಡುವ ಧೈರ್ಯವಿಲ್ಲದೆ, ಅದನ್ನು ಅಪಾರ್ಥ ಮಾಡಿ, ನೂರು ವರ್ಷಕ್ಕೂ ಮಿಗಿಲಾಗಿ ಅಹಿಂಸೆಯ ವ್ರತ ಪಾಲಿಸಿಕೊಂಡು, ಯಾವುದೋ ಯುಗದ ಮನುಷ್ಯನೊಬ್ಬ ನಮ್ಮ ನಡುವೆ ಬದುಕಿರುವ ಸೋಜಿಗ ಕಾಣದೆ ಸದೆಬಡಿಯುವುದಾದರೆ ನಾವು ಲಿಲ್ಲಿ ಪುಟ್ಟರಂತಾಗಿಬಿಡುತ್ತೇವೆ.

ಸ್ಪಷ್ಟತೆಗಾಗಿ ಒಂದು ಉದಾಹರಣೆ ನೋಡೋಣ: ಇಂದಿನ ಓಲೈಕೆ, ಅವಕಾಶವಾದಿ ರಾಜಕಾರಣದಲ್ಲಿ ಇದೇ ಶ್ರೀ ಬಸವನಗೌಡ ಯತ್ನಾಳ್, ಶ್ರೀ ಈಶ್ವರಪ್ಪ ಅಥವಾ ಮತ್ತಾರೋ ಮೋದಿಯವರ ವಿರೋಧಿಗಳಾಗಿದ್ದರೆ ಅವರು ತಮ್ಮ ಸ್ವಭಾವಕ್ಕೆ ತಕ್ಕಂತೆ ಏನು ಹೇಳುತ್ತಿದ್ದರು? ಮೋದಿಯವರ ತಲೆಗೆ ಹತ್ತಿಪ್ಪತ್ತು ಕೋಟಿ ಫತ್ವಾ ಹೊರಡಿಸುತ್ತಿದ್ದರೇನೋ! ಇಂಥವರು ದೊರೆಸ್ವಾಮಿ ಅವರನ್ನು “ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎನ್ನುತ್ತಾರೆ! ಅಂದರೆ, ರಾಜಕಾರಣವೆಂಬುದು ಅದೇನು ಜಾದೂ, ಕಣ್ಕಟ್ಟು ವಿದ್ಯೆಯೇ? ಅಸಲಿಯನ್ನು ನಕಲಿ ಮಾಡುವುದಕ್ಕೆ, ನಕಲಿಯನ್ನು ಅಸಲಿ ಮಾಡುವುದಕ್ಕೆ? ದೊರೆಸ್ವಾಮಿ ಅವರನ್ನು “ಪಾಕ್ ಏಜೆಂಟ್” ಎನ್ನುವುದಕ್ಕೆ ಇವರ ನಾಲಿಗೆ ಹೇಗೆ ಹೊರಳಿತು? ಇಂದಿನ ನಮ್ಮ ಬಹುತೇಕ ರಾಜಕಾರಣಿಗಳಲ್ಲಿ ಕೆಲವರಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಕಾರು ನಾಲಿಗೆಗಳು. ಇಲ್ಲಿದ್ದಾಗ ಮಾತನಾಡಲು ಒಂದು, ಇನ್ನೊಂದು ಕಡೆ ಹೋದಾಗ ಮತ್ತೊಂದು, ನುಂಗಲು ಮಗದೊಂದು-ಹೀಗೆ.

ಇಂದು ಜನಪ್ರತಿನಿಧಿಗಳು ತಮ್ಮನ್ನು ಜನಪ್ರತಿನಿಧಿಗಳು ಅಂದುಕೊಂಡಿಲ್ಲ. ಶಾಸಕರು ಶಾಸಕ ಅಂದುಕೊಂಡಿಲ್ಲ. ಯಾರೂ ತಮ್ಮ ಸ್ಥಾನಕ್ಕೆ ಹೊಣೆಗಾರರಾಗಿಲ್ಲ. ಇದು ಇಂದಿನ ಸಮಸ್ಯೆಯಾಗಿದೆ. ಉದಾಹರಣೆಗೆ, ಶ್ರೀ ಯತ್ನಾಳ್ ಅವರ ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಾ ಅದು ‘ಗುಳೆ ಜಿಲ್ಲೆ’ ಎನ್ನಿಸಿಕೊಂಡುಬಿಟ್ಟಿದೆ. ಯತ್ನಾಳರನ್ನು ಆಯ್ಕೆ ಮಾಡಿದ ‘ಮತದಾರ ಪ್ರಭುಗಳು’ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೆಲಸ ಅರಸುತ್ತಾ ಗೋವಾ, ಮಹಾರಾಷ್ಟ್ರದ ಕಡೆಗೆ ಗುಳೆ ಹೋಗುವುದು ದಿನೇದಿನೇ ಹೆಚ್ಚುತ್ತಿದೆ. ಅದೇ ವಿಜಯಪುರದಲ್ಲಿ ಒಂದು ದೊಡ್ಡದಾದ ಕೈಗಾರಿಕಾ ಪ್ರದೇಶವಿದೆ. ಆದರೆ, ಆ ಕೈಗಾರಿಕಾ ಪ್ರದೇಶವು ವಿದ್ಯುತ್ ಮತ್ತಿತರ ಮೂಲಸೌಲಭ್ಯಗಳಿಲ್ಲದೆ ನೊಣ ಹೊಡೆಯುತ್ತಿದೆ. ಇಂತಹ ಕಡೆ ಶಾಸಕನಾದವನು ಮಾತಾಡಲೂ ಪುರುಸೊತ್ತಿಲ್ಲದವನಂತೆ ಆ ಕೈಗಾರಿಕಾ ಕ್ಷೇತ್ರಕ್ಕೆ ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಲು ಕಾರ್ಯಪ್ರವೃತ್ತನಾಗಿರಬೇಕಿತ್ತು. ಆದರೇನಾಗಿದೆ? ಜನಪ್ರತಿನಿಧಿಗಳು ಹೊಣೆಗೇಡಿಯಾಗಿದ್ದಾರೆ. ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಿರುವ ಜನರು ಅವಜ್ಞೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವ ಪಕ್ಷದಲ್ಲೇ ಇರಲಿ ತಮ್ಮಂಥವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ತಪ್ಪಲ್ಲ ಎಂದುಕೊಂಡಿದ್ದೇನೆ.

ತುಂಬಾ ಹೆಚ್ಚಾಗಿ ಬರೆದುಬಿಟ್ಟೆ. ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ. ಕ್ಷಮೆ ಇರಲಿ.

ನಿಮ್ಮ ವಿಶ್ವಾಸಿ

ದೇವನೂರ ಮಹಾದೇವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...