Homeಮುಖಪುಟದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ.

- Advertisement -
- Advertisement -

ಮಾನ್ಯ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ

ವಂದನೆಗಳು

ನಿಮ್ಮ ಇ-ಮೇಲ್ ಐಡಿ nimmasuresh (ನಿಮ್ಮ ಸುರೇಶ್) ಎಂದಿದೆ. ನೀವು ನಮ್ಮ ಸುರೇಶ್ ಅಂದುಕೊಂಡಿದ್ದರಿಂದಲೇ ತಮಗೆ ಈ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಹೇಳಿಕೆ, “ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ”-ನೋಡಿ ನನಗೆ ಶಾಕ್ ಆಯಿತು.

ಶ್ರೀ ಎಚ್.ಎಸ್.ದೊರೆಸ್ವಾಮಿಯವರು ಕಳೆದ ಚುನಾವಣೆಯ ಹಿಂದಿನ ದಿನ ಯಾರಿಗೆ ಮತನೀಡಬೇಕೆಂದು ಕರೆ ನೀಡುತ್ತಾ, ಮೋದಿಯವರ ವೈಫಲ್ಯಗಳನ್ನು ಹಾಗೂ ಸರ್ವಾಧಿಕಾರಿ ಪ್ರವೃತ್ತಿಯನ್ನು ವಿವರಿಸುತ್ತಾ, “ಆತ ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ. ಯಾವ ಕೆಲಸ ಮಾಡಿಲ್ಲ. ಕರ್ನಾಟಕವನ್ನು ತೆಗೆದುಕೊಂಡು ಬಿಟ್ರೆ ಇಡೀ ದೇಶವನ್ನು ತಗೋಬಹುದು ಎನ್ನುವ ಆಲೋಚನೆ ಇದೆ. ಆದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು” ಎಂದು ಹೇಳುತ್ತಾರೆ. ಇದರ ಅರ್ಥ ಸಾಯಿಸಬೇಕು ಎಂದಾಗುವುದೇ? ಅವರ ಮಾತುಗಳಲ್ಲಿ ಎತ್ತಿದ ಸಮಸ್ಯೆಗಳತ್ತ ಕಣ್ಣೆತ್ತೂ ನೋಡುವ ಧೈರ್ಯವಿಲ್ಲದೆ, ಅದನ್ನು ಅಪಾರ್ಥ ಮಾಡಿ, ನೂರು ವರ್ಷಕ್ಕೂ ಮಿಗಿಲಾಗಿ ಅಹಿಂಸೆಯ ವ್ರತ ಪಾಲಿಸಿಕೊಂಡು, ಯಾವುದೋ ಯುಗದ ಮನುಷ್ಯನೊಬ್ಬ ನಮ್ಮ ನಡುವೆ ಬದುಕಿರುವ ಸೋಜಿಗ ಕಾಣದೆ ಸದೆಬಡಿಯುವುದಾದರೆ ನಾವು ಲಿಲ್ಲಿ ಪುಟ್ಟರಂತಾಗಿಬಿಡುತ್ತೇವೆ.

ಸ್ಪಷ್ಟತೆಗಾಗಿ ಒಂದು ಉದಾಹರಣೆ ನೋಡೋಣ: ಇಂದಿನ ಓಲೈಕೆ, ಅವಕಾಶವಾದಿ ರಾಜಕಾರಣದಲ್ಲಿ ಇದೇ ಶ್ರೀ ಬಸವನಗೌಡ ಯತ್ನಾಳ್, ಶ್ರೀ ಈಶ್ವರಪ್ಪ ಅಥವಾ ಮತ್ತಾರೋ ಮೋದಿಯವರ ವಿರೋಧಿಗಳಾಗಿದ್ದರೆ ಅವರು ತಮ್ಮ ಸ್ವಭಾವಕ್ಕೆ ತಕ್ಕಂತೆ ಏನು ಹೇಳುತ್ತಿದ್ದರು? ಮೋದಿಯವರ ತಲೆಗೆ ಹತ್ತಿಪ್ಪತ್ತು ಕೋಟಿ ಫತ್ವಾ ಹೊರಡಿಸುತ್ತಿದ್ದರೇನೋ! ಇಂಥವರು ದೊರೆಸ್ವಾಮಿ ಅವರನ್ನು “ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎನ್ನುತ್ತಾರೆ! ಅಂದರೆ, ರಾಜಕಾರಣವೆಂಬುದು ಅದೇನು ಜಾದೂ, ಕಣ್ಕಟ್ಟು ವಿದ್ಯೆಯೇ? ಅಸಲಿಯನ್ನು ನಕಲಿ ಮಾಡುವುದಕ್ಕೆ, ನಕಲಿಯನ್ನು ಅಸಲಿ ಮಾಡುವುದಕ್ಕೆ? ದೊರೆಸ್ವಾಮಿ ಅವರನ್ನು “ಪಾಕ್ ಏಜೆಂಟ್” ಎನ್ನುವುದಕ್ಕೆ ಇವರ ನಾಲಿಗೆ ಹೇಗೆ ಹೊರಳಿತು? ಇಂದಿನ ನಮ್ಮ ಬಹುತೇಕ ರಾಜಕಾರಣಿಗಳಲ್ಲಿ ಕೆಲವರಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಕಾರು ನಾಲಿಗೆಗಳು. ಇಲ್ಲಿದ್ದಾಗ ಮಾತನಾಡಲು ಒಂದು, ಇನ್ನೊಂದು ಕಡೆ ಹೋದಾಗ ಮತ್ತೊಂದು, ನುಂಗಲು ಮಗದೊಂದು-ಹೀಗೆ.

ಇಂದು ಜನಪ್ರತಿನಿಧಿಗಳು ತಮ್ಮನ್ನು ಜನಪ್ರತಿನಿಧಿಗಳು ಅಂದುಕೊಂಡಿಲ್ಲ. ಶಾಸಕರು ಶಾಸಕ ಅಂದುಕೊಂಡಿಲ್ಲ. ಯಾರೂ ತಮ್ಮ ಸ್ಥಾನಕ್ಕೆ ಹೊಣೆಗಾರರಾಗಿಲ್ಲ. ಇದು ಇಂದಿನ ಸಮಸ್ಯೆಯಾಗಿದೆ. ಉದಾಹರಣೆಗೆ, ಶ್ರೀ ಯತ್ನಾಳ್ ಅವರ ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಾ ಅದು ‘ಗುಳೆ ಜಿಲ್ಲೆ’ ಎನ್ನಿಸಿಕೊಂಡುಬಿಟ್ಟಿದೆ. ಯತ್ನಾಳರನ್ನು ಆಯ್ಕೆ ಮಾಡಿದ ‘ಮತದಾರ ಪ್ರಭುಗಳು’ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೆಲಸ ಅರಸುತ್ತಾ ಗೋವಾ, ಮಹಾರಾಷ್ಟ್ರದ ಕಡೆಗೆ ಗುಳೆ ಹೋಗುವುದು ದಿನೇದಿನೇ ಹೆಚ್ಚುತ್ತಿದೆ. ಅದೇ ವಿಜಯಪುರದಲ್ಲಿ ಒಂದು ದೊಡ್ಡದಾದ ಕೈಗಾರಿಕಾ ಪ್ರದೇಶವಿದೆ. ಆದರೆ, ಆ ಕೈಗಾರಿಕಾ ಪ್ರದೇಶವು ವಿದ್ಯುತ್ ಮತ್ತಿತರ ಮೂಲಸೌಲಭ್ಯಗಳಿಲ್ಲದೆ ನೊಣ ಹೊಡೆಯುತ್ತಿದೆ. ಇಂತಹ ಕಡೆ ಶಾಸಕನಾದವನು ಮಾತಾಡಲೂ ಪುರುಸೊತ್ತಿಲ್ಲದವನಂತೆ ಆ ಕೈಗಾರಿಕಾ ಕ್ಷೇತ್ರಕ್ಕೆ ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಲು ಕಾರ್ಯಪ್ರವೃತ್ತನಾಗಿರಬೇಕಿತ್ತು. ಆದರೇನಾಗಿದೆ? ಜನಪ್ರತಿನಿಧಿಗಳು ಹೊಣೆಗೇಡಿಯಾಗಿದ್ದಾರೆ. ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಿರುವ ಜನರು ಅವಜ್ಞೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವ ಪಕ್ಷದಲ್ಲೇ ಇರಲಿ ತಮ್ಮಂಥವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ತಪ್ಪಲ್ಲ ಎಂದುಕೊಂಡಿದ್ದೇನೆ.

ತುಂಬಾ ಹೆಚ್ಚಾಗಿ ಬರೆದುಬಿಟ್ಟೆ. ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ. ಕ್ಷಮೆ ಇರಲಿ.

ನಿಮ್ಮ ವಿಶ್ವಾಸಿ

ದೇವನೂರ ಮಹಾದೇವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...